AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs GT: ಫೀಲ್ಡರ್​ಗಳು ಮನಸ್ಸು ಮಾಡ್ಬೇಕು: ಸೋಲಿನ ಹತಾಶೆಯಲ್ಲಿ ಅಜಿಂಕ್ಯ ರಹಾನೆ

IPL 2025 KKR vs GT: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 39ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 198 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ಕೇವಲ 159 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

KKR vs GT: ಫೀಲ್ಡರ್​ಗಳು ಮನಸ್ಸು ಮಾಡ್ಬೇಕು: ಸೋಲಿನ ಹತಾಶೆಯಲ್ಲಿ ಅಜಿಂಕ್ಯ ರಹಾನೆ
Ajinkya Rahane
Follow us
ಝಾಹಿರ್ ಯೂಸುಫ್
|

Updated on: Apr 22, 2025 | 7:32 AM

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 39ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ನಾಯಕ ಶುಭ್​​ಮನ್ ಗಿಲ್ 90 ರನ್ ಬಾರಿಸಿ ಮಿಂಚಿದರು.

ಈ ಅರ್ಧಶತಕದ ನೆರವಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೆಕೆಆರ್ ಪಡೆ 39 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ, ‘199 ರನ್‌ಗಳ ಗುರಿಯನ್ನು ನಾವು ಚೇಸ್ ಮಾಡಬಹುದಿತ್ತು. ಇದು ಕಠಿಣ ಗುರಿಯಾಗಿರಲಿಲ್ಲ. ಇದಾಗ್ಯೂ ನಾವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಲು ವಿಫಲರಾಗಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ನಾವು ಉತ್ತಮ ಆರಂಭಿಕ ಪಾಲುದಾರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆದರೆ ಟೂರ್ನಿಯುದ್ದಕ್ಕೂ ಅದುವೇ ಈಗ ನಮ್ಮ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಸದ್ಯ ತಪ್ಪುಗಳಿಂದ  ನಾವು ಸಾಧ್ಯವಾದಷ್ಟು ಬೇಗ ಕಲಿಯುವುದು ಅನಿವಾರ್ಯ. ಏಕೆಂದರೆ ಇನ್ನುಳಿದಿರುವುದು ಕೆಲವೇ ಕೆಲವು ಮ್ಯಾಚ್​ಗಳು ಮಾತ್ರ. ಈ ಪಂದ್ಯದಲ್ಲಿ ಪಿಚ್​ ನಿಧಾನವಾಗಿದ್ದ ಕಾರಣ 200, 210 ಕ್ಕಿಂತ ಕಡಿಮೆ ಸ್ಕೋರ್​ ಇದ್ದರೆ ಉತ್ತಮವಾಗಿರುತ್ತದೆ ಎಂದು ಭಾವಿಸಿದ್ದೆ.

ಅದರಂತೆ ನಮ್ಮ ಬೌಲರ್​ಗಳು ಉತ್ತಮ ಪ್ರದರ್ಶನವನ್ನು ನೀಡಿದ್ದರು. ನನಗೆ ನಮ್ಮ ಬೌಲರ್‌ಗಳ ಬಗ್ಗೆ ಯಾವುದೇ ದೂರುಗಳಿಲ್ಲ. ಅವರು ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.  ಆದರೆ ನಮ್ಮ ಬ್ಯಾಟಿಂಗ್​ಗೆ ಚಿಂತೆ. ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡಬೇಕಾಗಿದೆ. ವಿಶೇಷವಾಗಿ ಮಧ್ಯಮ ಓವರ್‌ಗಳಲ್ಲಿ. ನಮಗೆ ಉತ್ತಮ ಆರಂಭಿಕ ಜೊತೆಯಾಟ ಬರಬೇಕು.

ಇದನ್ನೂ ಓದಿ: VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ

ಇನ್ನು ಫೀಲ್ಡಿಂಗ್ ಕೂಡ ಒಂದು ಪಂದ್ಯದ ಗೆಲುವನ್ನು ನಿರ್ಧರಿಸಬಲ್ಲದು. ಹೀಗಾಗಿ ಫೀಲ್ಡರ್​ಗಳು  15-20 ರನ್‌ಗಳನ್ನು ಉಳಿಸಲು ಸಾಧ್ಯವಾದರೆ ಅದು ಯಾವಾಗಲೂ ಉತ್ತಮ. ಈ ಮೂಲಕ ಕೂಡ ರನ್ ನಿಯಂತ್ರಿಸಿ ಪಂದ್ಯ ಗೆಲ್ಲಬಹುದು. ಇದಕ್ಕಾಗಿ ನಮ್ಮ ಫೀಲ್ಡರ್​ಗಳು ಕೂಡ ಮನಸ್ಸು ಮಾಡಬೇಕು. ಆ ಮೂಲಕ ಕೂಡ ಗೆಲ್ಲಲು ಪ್ರಯತ್ನಿಸಬೇಕಿದೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?