Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬೌಲರ್​ಗಳಿಗೆ ಮನಃಶಾಸ್ತ್ರಜ್ಞರ ಅಗತ್ಯವಿದೆ: ಅಶ್ವಿನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ 5 ಪಂದ್ಯಗಳಲ್ಲಿ 6 ತಂಡಗಳು ಇನ್ನೂರಕ್ಕೂ ಅಧಿಕ ರನ್ ಕಲೆಹಾಕಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲೂ ಬ್ಯಾಟ್ಸ್​ಮನ್​ಗಳ ಅಬ್ಬರ ಜೋರಾಗಿದೆ. ಟಿ20 ಕ್ರಿಕೆಟ್ ಸಂಪೂರ್ಣ ಬ್ಯಾಟರ್​ಗಳ ಆಟವಾಗಿ ಮಾರ್ಪಡುತ್ತಿರುವ ಬಗ್ಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಳವಳ ವ್ಯಕ್ತಪಡಿಸಿದ್ದಾರೆ.

IPL 2025: ಬೌಲರ್​ಗಳಿಗೆ ಮನಃಶಾಸ್ತ್ರಜ್ಞರ ಅಗತ್ಯವಿದೆ: ಅಶ್ವಿನ್
Ashwin
Follow us
ಝಾಹಿರ್ ಯೂಸುಫ್
|

Updated on:Mar 27, 2025 | 2:35 PM

ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್  (R Ashwin) ಕ್ರಿಕೆಟ್‌ಗೆ ಸಂಬಂಧಿಸಿದಂತೆ ಏನೇ ಹೇಳಿದರೂ ಅದು ಚರ್ಚಾ ವಿಷಯವಾಗುತ್ತದೆ. ಇದೀಗ ಐಪಿಎಲ್ ನಡುವೆ ನೀಡಿರುವ ಹೇಳಿಕೆಯೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಹೀಗೆ ಚರ್ಚೆಗೀಡಾಗಲು ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಬೌಲರ್​ಗಳ ಮಾನಸಿಕ ಸ್ಥಿತಿ ಬಗ್ಗೆ ಮಾತನಾಡಿರುವುದು.

ಐಪಿಎಲ್ 2025ರ ಆರಂಭದ ಬೆನ್ನಲ್ಲೇ ಬ್ಯಾಟರ್​ಗಳ ಅಬ್ಬರ ಜೋರಾಗಿದೆ. ಇದನ್ನೇ ಪ್ರಸ್ತಾಪಿಸಿರುವ ಅಶ್ವಿನ್, ಐಪಿಎಲ್​ನಲ್ಲಿ  ಬ್ಯಾಟಿಂಗ್ ನಡೆಯುತ್ತಿರುವ ರೀತಿ ನೋಡಿದರೆ, ಶೀಘ್ರದಲ್ಲೇ ಪ್ರತಿಯೊಬ್ಬ ಬೌಲರ್‌ಗಳು ವೈಯಕ್ತಿಕ ಮನಃಶಾಸ್ತ್ರಜ್ಞರನ್ನು ನೇಮಿಸಿಕೊಳ್ಳಬೇಕಾಗಿ ಬರಬಹುದು  ಎಂದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಶೈಲಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಟಿ20 ಲೀಗ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ರೀತಿಯ ನಿಯಮಗಳು ಬಂದಿವೆ. ಆದರೆ ಇವೆಲ್ಲವೂ ಬ್ಯಾಟ್ಸ್‌ಮನ್‌ಗಳಿಗೆ ಸಹಾಯಕವಾಗುತ್ತಿದೆ. ವಿಶೇಷವಾಗಿ ಐಪಿಎಲ್‌ನಲ್ಲಿ, ಕಳೆದ ಸೀಸನ್​ನಿಂದ ಬೃಹತ್ ಸ್ಕೋರ್‌ಗಳು ಮೂಡಿ ಬರುತ್ತಿವೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಐಪಿಎಲ್ 2024 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 277 ಮತ್ತು 287 ರನ್ ಗಳಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಈ ಸೀಸನ್​ನ ಎರಡನೇ ಪಂದ್ಯದಲ್ಲಿ ಎಸ್​​ಆರ್​ಹೆಚ್ ತಂಡವು 286 ರನ್ ಗಳಿಸುವ ಮೂಲಕ ಮತ್ತೊಮ್ಮೆ ಅಬ್ಬರಿಸಿದೆ. ಅಲ್ಲದೆ ಐಪಿಎಲ್​ನಲ್ಲಿ ಈಗ 300 ರನ್​ಗಳ ಗುರಿ ಮುಟ್ಟುವವರು ಯಾರು ಎಂಬುದರ ಚರ್ಚೆ ನಡೆಯುತ್ತಿದೆ.

ಅತ್ತ ಸನ್​ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್​ಗಳು ನಮ್ಮ ಮುಂದಿನ ಗುರಿ 300 ರನ್​ಗಳು ಎಂಬುದನ್ನು ಬಹಿರಂಗವಾಗಿಯೇ ಹೇಳಿದ್ದಾರೆ. ಅದನ್ನು ಸಾಧಿಸಿ ತೋರಿಸುವ ರಣ ಉತ್ಸಾಹದಲ್ಲಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲೇ 286 ರನ್ ಚಚ್ಚಿದ್ದಾರೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವುದು ಮಾತ್ರ ಬೌಲರ್​ಗಳು.

ಮಾನಸಿಕ ಆರೋಗ್ಯಕ್ಕೆ ಅಪಾಯಕಾರಿ:

ಐಪಿಎಲ್ ಸೇರಿದಂತೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಟರ್​ಗಳ ಪರಾಕ್ರಮವು ಬೌಲರ್​ಗಳ ಮಾನಸಿಕ ಆರೋಗ್ಯಕ್ಕೆ ಅಪಾಯಕಾರಿ ಎಂದು ರವಿಚಂದ್ರನ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅಶ್ವಿನ್, ಟಿ20 ಕ್ರಿಕೆಟ್​ ಬದಲಾಗಿರುವ ರೀತಿಯ ಬಗ್ಗೆ ಮಾತನಾಡಲು ನಾನು ಬಯಸುತ್ತೇನೆ. ಏಕೆಂದರೆ ಬೌಲರ್​ಗಳಿಗೆ ರನ್​ಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದು ಅವರನ್ನು ಮಾನಸಿಕವಾಗಿ ಒತ್ತಡಕ್ಕೀಡು ಮಾಡುತ್ತದೆ.

ಇಂತಹ ಒತ್ತಡಗಳಿಂದಾಗಿ ಬೌಲರ್​ಗಳಿಗೆ ಶೀಘ್ರದಲ್ಲೇ ವೈಯಕ್ತಿಕ ಮನಃಶಾಸ್ತ್ರಜ್ಞರು ಬೇಕಾಗಿ ಬರಬಹುದು ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಈಗ ಟಿ20 ಕ್ರಿಕೆಟ್​ನಲ್ಲಿ ಬೌಲಿಂಗ್ ಅಕ್ಷರಶಃ ಅಸಾಧ್ಯವಾಗಿದೆ. ಕೆಲವು ಪಿಚ್​ಗಳು ಸಂಪೂರ್ಣ ಬ್ಯಾಟಿಂಗ್​​ ಸ್ನೇಹಿಯಾಗಿ ಮಾರ್ಪಟ್ಟಿದೆ. ಇದರಿಂದ ಬೌಲರ್​ಗಳು ನಿಷ್ಪ್ರಯೋಜಕರಾಗುತ್ತಿದ್ದಾರೆ ಎಂಬುದು ನನ್ನ ಭಾವನೆ. ಹೀಗಾಗಿ ಬೌಲರ್​ಗಳ ಪಾಲಿಗೆ ಮನಃಶಾಸ್ತ್ರಜ್ಞರ ಅಗತ್ಯವಿದೆ ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ: VIDEO: ಮೈದಾನಕ್ಕೆ ನುಗ್ಗಿದ ರಿಯಾನ್ ಪರಾಗ್ ಅಭಿಮಾನಿ: ಆಮೇಲೇನಾಯ್ತು ನೀವೇ ನೋಡಿ

ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಸೌತ್ ಆಫ್ರಿಕಾ ಕಗಿಸೊ ರಬಾಡ ಕೂಡ ಐಪಿಎಲ್​ನಲ್ಲಿ ಬಳಸಲಾಗುತ್ತಿರುವ ಫ್ಲಾಟ್​ ಪಿಚ್​ಗಳ ಬಗ್ಗೆ ಧ್ವನಿಯೆತ್ತಿದ್ದರು. ಕೇವಲ ಬ್ಯಾಟರ್​ಗಳಿಗೆ ಸಹಕಾರಿಯಾಗುವ ಪಿಚ್ ನಿರ್ಮಿಸಿ ಆಡಿಸಿದರೆ, ಅದನ್ನು ಕ್ರಿಕೆಟ್ ಎಂದು ಕರೆಯಲಾಗುವುದಿಲ್ಲ. ಬದಲಾಗಿ ಬ್ಯಾಟಿಂಗ್ ಎನ್ನಬೇಕಾಗುತ್ತದೆ ಎಂದು ರಬಾಡ ಅಸಮಾಧಾನ ಹೊರಹಾಕಿದ್ದರು. ಇದೀಗ ರವಿಚಂದ್ರನ್ ಅಶ್ವಿನ್ ಕೂಡ ಟಿ20 ಕ್ರಿಕೆಟ್ ಬ್ಯಾಟಿಂಗ್ ಪರವಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Published On - 2:26 pm, Thu, 27 March 25

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ