AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ

IPL 2025 Captains' Meeting: ಬಿಸಿಸಿಐ ಮಾರ್ಚ್ 22 ರಿಂದ ಆರಂಭವಾಗುವ ಐಪಿಎಲ್ 2025 ರ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆಯನ್ನು ಮಾರ್ಚ್ 20 ರಂದು ಮುಂಬೈನಲ್ಲಿ ಆಯೋಜಿಸಿದೆ. ಈ ಸಭೆಯಲ್ಲಿ ಹೊಸ ನಿಯಮಗಳ ಬಗ್ಗೆ ಚರ್ಚೆ, ಫೋಟೋಶೂಟ್ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಫ್ರಾಂಚೈಸಿಗಳ ವ್ಯವಸ್ಥಾಪಕರನ್ನು ಸಹ ಆಹ್ವಾನಿಸಲಾಗಿದೆ. ಈ ಸಭೆಯು ಸುಮಾರು 4 ಗಂಟೆಗಳ ಕಾಲ ನಡೆಯಲಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಐಪಿಎಲ್ 2025
ಪೃಥ್ವಿಶಂಕರ
|

Updated on: Mar 17, 2025 | 9:23 PM

Share

2025 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಅಂದರೆ ಈ ಟೂರ್ನಿ ಆರಂಭವಾಗಲು ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಬಿಸಿಸಿಐ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದಿದೆ. ಹೀಗಾಗಿ ಮಾರ್ಚ್​ 20 ರಂದು ಮುಂಬೈನಲ್ಲಿ ನಡೆಯಲ್ಲಿರುವ ಈ ಸಭೆಗೆ 10 ತಂಡಗಳು ನಾಯಕರು ಇದೀಗ ತಮ್ಮ ತಮ್ಮ ತಂಡಗಳನ್ನು ತೊರೆದು ಮುಂಬೈನಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಗೆ ತೆರಳಲಿದ್ದಾರೆ. ಬಿಸಿಸಿಐ ಕರೆದಿರುವ ಈ ಸಭೆಯಲ್ಲಿ ನಾಯಕರ ಫೋಟೋಶೂಟ್ ಕೂಡ ನಡೆಯಲಿದೆ.

ಮುಂಬೈನಲ್ಲಿ ನಾಯಕರ ಸಭೆ

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆಯಲ್ಲಿರುವ ಈ ಸಭೆಯಲ್ಲಿ ನಾಯಕರಲ್ಲದೆ, ಎಲ್ಲಾ 10 ಫ್ರಾಂಚೈಸಿಗಳ ವ್ಯವಸ್ಥಾಪಕರು ಸಹ ಹಾಜರಾಗುವಂತೆ ಸೂಚಿಸಲಾಗಿದೆ. ಕ್ರಿಕೆಟ್ ಸೆಂಟರ್‌ನಲ್ಲಿ ನಡೆಯಲಿರುವ ಸಭೆ ಸುಮಾರು 1 ಗಂಟೆ ಕಾಲ ನಡೆಯಲಿದ್ದು, ಎಲ್ಲಾ ತಂಡಗಳ ನಾಯಕರಿಗೆ ಹೊಸ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಾದ ನಂತರ, ತಾಜ್ ಹೋಟೆಲ್‌ನಲ್ಲಿ ಇತರ ಕೆಲವು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಸುಮಾರು 4 ಗಂಟೆಗಳ ಕಾಲ ನಡೆಯಲಿದ್ದು, ಎಲ್ಲಾ ನಾಯಕರ ಸಾಂಪ್ರದಾಯಿಕ ಫೋಟೋ ಶೂಟ್‌ನೊಂದಿಗೆ ಮುಕ್ತಾಯಗೊಳ್ಳುತ್ತದೆ.

10 ತಂಡಗಳ ನಾಯಕರ ಪಟ್ಟಿ

  1. ಅಕ್ಷರ್ ಪಟೇಲ್- ಡೆಲ್ಲಿ ಕ್ಯಾಪಿಟಲ್ಸ್
  2. ಹಾರ್ದಿಕ್ ಪಾಂಡ್ಯ- ಮುಂಬೈ ಇಂಡಿಯನ್ಸ್
  3. ಪ್ಯಾಟ್ ಕಮ್ಮಿನ್ಸ್- ಸನ್‌ರೈಸರ್ಸ್ ಹೈದರಾಬಾದ್
  4. ರುತುರಾಜ್ ಗಾಯಕ್ವಾಡ್- ಚೆನ್ನೈ ಸೂಪರ್ ಕಿಂಗ್ಸ್
  5. ರಜತ್ ಪಾಟಿದಾರ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
  6. ರಿಷಭ್ ಪಂತ್- ಲಕ್ನೋ ಸೂಪರ್ ಜೈಂಟ್ಸ್
  7. ಶ್ರೇಯಸ್ ಅಯ್ಯರ್- ಪಂಜಾಬ್ ಕಿಂಗ್ಸ್
  8. ಸಂಜು ಸ್ಯಾಮ್ಸನ್- ರಾಜಸ್ಥಾನ್ ರಾಯಲ್ಸ್
  9. ಅಜಿಂಕ್ಯ ರಹಾನೆ- ಕೊಲ್ಕತ್ತಾ ನೈಟ್ ರೈಡರ್ಸ್​
  10. ಶುಭ್​ಮನ್ ಗಿಲ್- ಗುಜರಾತ್ ಟೈಟಾನ್ಸ್

ಉದ್ಘಾಟನಾ ಸಮಾರಂಭ

ಐಪಿಎಲ್‌ನ ಮೊದಲ ಪಂದ್ಯ ಮಾರ್ಚ್ 22 ರಂದು ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಮತ್ತು ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ನಡುವೆ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ನ ಸ್ಟಾರ್ ನಟಿಯಾದ ದಿಶಾ ಪಟಾನಿ, ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ಪಂಜಾಬಿ ಗಾಯಕ ಕರಣ್ ಔಜ್ಲಾ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!