AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ

IPL 2025 Captains' Meeting: ಬಿಸಿಸಿಐ ಮಾರ್ಚ್ 22 ರಿಂದ ಆರಂಭವಾಗುವ ಐಪಿಎಲ್ 2025 ರ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆಯನ್ನು ಮಾರ್ಚ್ 20 ರಂದು ಮುಂಬೈನಲ್ಲಿ ಆಯೋಜಿಸಿದೆ. ಈ ಸಭೆಯಲ್ಲಿ ಹೊಸ ನಿಯಮಗಳ ಬಗ್ಗೆ ಚರ್ಚೆ, ಫೋಟೋಶೂಟ್ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಫ್ರಾಂಚೈಸಿಗಳ ವ್ಯವಸ್ಥಾಪಕರನ್ನು ಸಹ ಆಹ್ವಾನಿಸಲಾಗಿದೆ. ಈ ಸಭೆಯು ಸುಮಾರು 4 ಗಂಟೆಗಳ ಕಾಲ ನಡೆಯಲಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಐಪಿಎಲ್ 2025
ಪೃಥ್ವಿಶಂಕರ
|

Updated on: Mar 17, 2025 | 9:23 PM

Share

2025 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಅಂದರೆ ಈ ಟೂರ್ನಿ ಆರಂಭವಾಗಲು ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಬಿಸಿಸಿಐ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದಿದೆ. ಹೀಗಾಗಿ ಮಾರ್ಚ್​ 20 ರಂದು ಮುಂಬೈನಲ್ಲಿ ನಡೆಯಲ್ಲಿರುವ ಈ ಸಭೆಗೆ 10 ತಂಡಗಳು ನಾಯಕರು ಇದೀಗ ತಮ್ಮ ತಮ್ಮ ತಂಡಗಳನ್ನು ತೊರೆದು ಮುಂಬೈನಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಗೆ ತೆರಳಲಿದ್ದಾರೆ. ಬಿಸಿಸಿಐ ಕರೆದಿರುವ ಈ ಸಭೆಯಲ್ಲಿ ನಾಯಕರ ಫೋಟೋಶೂಟ್ ಕೂಡ ನಡೆಯಲಿದೆ.

ಮುಂಬೈನಲ್ಲಿ ನಾಯಕರ ಸಭೆ

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆಯಲ್ಲಿರುವ ಈ ಸಭೆಯಲ್ಲಿ ನಾಯಕರಲ್ಲದೆ, ಎಲ್ಲಾ 10 ಫ್ರಾಂಚೈಸಿಗಳ ವ್ಯವಸ್ಥಾಪಕರು ಸಹ ಹಾಜರಾಗುವಂತೆ ಸೂಚಿಸಲಾಗಿದೆ. ಕ್ರಿಕೆಟ್ ಸೆಂಟರ್‌ನಲ್ಲಿ ನಡೆಯಲಿರುವ ಸಭೆ ಸುಮಾರು 1 ಗಂಟೆ ಕಾಲ ನಡೆಯಲಿದ್ದು, ಎಲ್ಲಾ ತಂಡಗಳ ನಾಯಕರಿಗೆ ಹೊಸ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಾದ ನಂತರ, ತಾಜ್ ಹೋಟೆಲ್‌ನಲ್ಲಿ ಇತರ ಕೆಲವು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಸುಮಾರು 4 ಗಂಟೆಗಳ ಕಾಲ ನಡೆಯಲಿದ್ದು, ಎಲ್ಲಾ ನಾಯಕರ ಸಾಂಪ್ರದಾಯಿಕ ಫೋಟೋ ಶೂಟ್‌ನೊಂದಿಗೆ ಮುಕ್ತಾಯಗೊಳ್ಳುತ್ತದೆ.

10 ತಂಡಗಳ ನಾಯಕರ ಪಟ್ಟಿ

  1. ಅಕ್ಷರ್ ಪಟೇಲ್- ಡೆಲ್ಲಿ ಕ್ಯಾಪಿಟಲ್ಸ್
  2. ಹಾರ್ದಿಕ್ ಪಾಂಡ್ಯ- ಮುಂಬೈ ಇಂಡಿಯನ್ಸ್
  3. ಪ್ಯಾಟ್ ಕಮ್ಮಿನ್ಸ್- ಸನ್‌ರೈಸರ್ಸ್ ಹೈದರಾಬಾದ್
  4. ರುತುರಾಜ್ ಗಾಯಕ್ವಾಡ್- ಚೆನ್ನೈ ಸೂಪರ್ ಕಿಂಗ್ಸ್
  5. ರಜತ್ ಪಾಟಿದಾರ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
  6. ರಿಷಭ್ ಪಂತ್- ಲಕ್ನೋ ಸೂಪರ್ ಜೈಂಟ್ಸ್
  7. ಶ್ರೇಯಸ್ ಅಯ್ಯರ್- ಪಂಜಾಬ್ ಕಿಂಗ್ಸ್
  8. ಸಂಜು ಸ್ಯಾಮ್ಸನ್- ರಾಜಸ್ಥಾನ್ ರಾಯಲ್ಸ್
  9. ಅಜಿಂಕ್ಯ ರಹಾನೆ- ಕೊಲ್ಕತ್ತಾ ನೈಟ್ ರೈಡರ್ಸ್​
  10. ಶುಭ್​ಮನ್ ಗಿಲ್- ಗುಜರಾತ್ ಟೈಟಾನ್ಸ್

ಉದ್ಘಾಟನಾ ಸಮಾರಂಭ

ಐಪಿಎಲ್‌ನ ಮೊದಲ ಪಂದ್ಯ ಮಾರ್ಚ್ 22 ರಂದು ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಮತ್ತು ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ನಡುವೆ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ನ ಸ್ಟಾರ್ ನಟಿಯಾದ ದಿಶಾ ಪಟಾನಿ, ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ಪಂಜಾಬಿ ಗಾಯಕ ಕರಣ್ ಔಜ್ಲಾ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ