AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ

IPL 2025 Captains' Meeting: ಬಿಸಿಸಿಐ ಮಾರ್ಚ್ 22 ರಿಂದ ಆರಂಭವಾಗುವ ಐಪಿಎಲ್ 2025 ರ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆಯನ್ನು ಮಾರ್ಚ್ 20 ರಂದು ಮುಂಬೈನಲ್ಲಿ ಆಯೋಜಿಸಿದೆ. ಈ ಸಭೆಯಲ್ಲಿ ಹೊಸ ನಿಯಮಗಳ ಬಗ್ಗೆ ಚರ್ಚೆ, ಫೋಟೋಶೂಟ್ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಫ್ರಾಂಚೈಸಿಗಳ ವ್ಯವಸ್ಥಾಪಕರನ್ನು ಸಹ ಆಹ್ವಾನಿಸಲಾಗಿದೆ. ಈ ಸಭೆಯು ಸುಮಾರು 4 ಗಂಟೆಗಳ ಕಾಲ ನಡೆಯಲಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಐಪಿಎಲ್ 2025
ಪೃಥ್ವಿಶಂಕರ
|

Updated on: Mar 17, 2025 | 9:23 PM

Share

2025 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಅಂದರೆ ಈ ಟೂರ್ನಿ ಆರಂಭವಾಗಲು ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಬಿಸಿಸಿಐ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದಿದೆ. ಹೀಗಾಗಿ ಮಾರ್ಚ್​ 20 ರಂದು ಮುಂಬೈನಲ್ಲಿ ನಡೆಯಲ್ಲಿರುವ ಈ ಸಭೆಗೆ 10 ತಂಡಗಳು ನಾಯಕರು ಇದೀಗ ತಮ್ಮ ತಮ್ಮ ತಂಡಗಳನ್ನು ತೊರೆದು ಮುಂಬೈನಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಗೆ ತೆರಳಲಿದ್ದಾರೆ. ಬಿಸಿಸಿಐ ಕರೆದಿರುವ ಈ ಸಭೆಯಲ್ಲಿ ನಾಯಕರ ಫೋಟೋಶೂಟ್ ಕೂಡ ನಡೆಯಲಿದೆ.

ಮುಂಬೈನಲ್ಲಿ ನಾಯಕರ ಸಭೆ

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆಯಲ್ಲಿರುವ ಈ ಸಭೆಯಲ್ಲಿ ನಾಯಕರಲ್ಲದೆ, ಎಲ್ಲಾ 10 ಫ್ರಾಂಚೈಸಿಗಳ ವ್ಯವಸ್ಥಾಪಕರು ಸಹ ಹಾಜರಾಗುವಂತೆ ಸೂಚಿಸಲಾಗಿದೆ. ಕ್ರಿಕೆಟ್ ಸೆಂಟರ್‌ನಲ್ಲಿ ನಡೆಯಲಿರುವ ಸಭೆ ಸುಮಾರು 1 ಗಂಟೆ ಕಾಲ ನಡೆಯಲಿದ್ದು, ಎಲ್ಲಾ ತಂಡಗಳ ನಾಯಕರಿಗೆ ಹೊಸ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಾದ ನಂತರ, ತಾಜ್ ಹೋಟೆಲ್‌ನಲ್ಲಿ ಇತರ ಕೆಲವು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಸುಮಾರು 4 ಗಂಟೆಗಳ ಕಾಲ ನಡೆಯಲಿದ್ದು, ಎಲ್ಲಾ ನಾಯಕರ ಸಾಂಪ್ರದಾಯಿಕ ಫೋಟೋ ಶೂಟ್‌ನೊಂದಿಗೆ ಮುಕ್ತಾಯಗೊಳ್ಳುತ್ತದೆ.

10 ತಂಡಗಳ ನಾಯಕರ ಪಟ್ಟಿ

  1. ಅಕ್ಷರ್ ಪಟೇಲ್- ಡೆಲ್ಲಿ ಕ್ಯಾಪಿಟಲ್ಸ್
  2. ಹಾರ್ದಿಕ್ ಪಾಂಡ್ಯ- ಮುಂಬೈ ಇಂಡಿಯನ್ಸ್
  3. ಪ್ಯಾಟ್ ಕಮ್ಮಿನ್ಸ್- ಸನ್‌ರೈಸರ್ಸ್ ಹೈದರಾಬಾದ್
  4. ರುತುರಾಜ್ ಗಾಯಕ್ವಾಡ್- ಚೆನ್ನೈ ಸೂಪರ್ ಕಿಂಗ್ಸ್
  5. ರಜತ್ ಪಾಟಿದಾರ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
  6. ರಿಷಭ್ ಪಂತ್- ಲಕ್ನೋ ಸೂಪರ್ ಜೈಂಟ್ಸ್
  7. ಶ್ರೇಯಸ್ ಅಯ್ಯರ್- ಪಂಜಾಬ್ ಕಿಂಗ್ಸ್
  8. ಸಂಜು ಸ್ಯಾಮ್ಸನ್- ರಾಜಸ್ಥಾನ್ ರಾಯಲ್ಸ್
  9. ಅಜಿಂಕ್ಯ ರಹಾನೆ- ಕೊಲ್ಕತ್ತಾ ನೈಟ್ ರೈಡರ್ಸ್​
  10. ಶುಭ್​ಮನ್ ಗಿಲ್- ಗುಜರಾತ್ ಟೈಟಾನ್ಸ್

ಉದ್ಘಾಟನಾ ಸಮಾರಂಭ

ಐಪಿಎಲ್‌ನ ಮೊದಲ ಪಂದ್ಯ ಮಾರ್ಚ್ 22 ರಂದು ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಮತ್ತು ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ನಡುವೆ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ನ ಸ್ಟಾರ್ ನಟಿಯಾದ ದಿಶಾ ಪಟಾನಿ, ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ಪಂಜಾಬಿ ಗಾಯಕ ಕರಣ್ ಔಜ್ಲಾ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ