AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ

IPL 2025 Captains' Meeting: ಬಿಸಿಸಿಐ ಮಾರ್ಚ್ 22 ರಿಂದ ಆರಂಭವಾಗುವ ಐಪಿಎಲ್ 2025 ರ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆಯನ್ನು ಮಾರ್ಚ್ 20 ರಂದು ಮುಂಬೈನಲ್ಲಿ ಆಯೋಜಿಸಿದೆ. ಈ ಸಭೆಯಲ್ಲಿ ಹೊಸ ನಿಯಮಗಳ ಬಗ್ಗೆ ಚರ್ಚೆ, ಫೋಟೋಶೂಟ್ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಫ್ರಾಂಚೈಸಿಗಳ ವ್ಯವಸ್ಥಾಪಕರನ್ನು ಸಹ ಆಹ್ವಾನಿಸಲಾಗಿದೆ. ಈ ಸಭೆಯು ಸುಮಾರು 4 ಗಂಟೆಗಳ ಕಾಲ ನಡೆಯಲಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಐಪಿಎಲ್ 2025
ಪೃಥ್ವಿಶಂಕರ
|

Updated on: Mar 17, 2025 | 9:23 PM

Share

2025 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಅಂದರೆ ಈ ಟೂರ್ನಿ ಆರಂಭವಾಗಲು ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಬಿಸಿಸಿಐ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದಿದೆ. ಹೀಗಾಗಿ ಮಾರ್ಚ್​ 20 ರಂದು ಮುಂಬೈನಲ್ಲಿ ನಡೆಯಲ್ಲಿರುವ ಈ ಸಭೆಗೆ 10 ತಂಡಗಳು ನಾಯಕರು ಇದೀಗ ತಮ್ಮ ತಮ್ಮ ತಂಡಗಳನ್ನು ತೊರೆದು ಮುಂಬೈನಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಗೆ ತೆರಳಲಿದ್ದಾರೆ. ಬಿಸಿಸಿಐ ಕರೆದಿರುವ ಈ ಸಭೆಯಲ್ಲಿ ನಾಯಕರ ಫೋಟೋಶೂಟ್ ಕೂಡ ನಡೆಯಲಿದೆ.

ಮುಂಬೈನಲ್ಲಿ ನಾಯಕರ ಸಭೆ

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆಯಲ್ಲಿರುವ ಈ ಸಭೆಯಲ್ಲಿ ನಾಯಕರಲ್ಲದೆ, ಎಲ್ಲಾ 10 ಫ್ರಾಂಚೈಸಿಗಳ ವ್ಯವಸ್ಥಾಪಕರು ಸಹ ಹಾಜರಾಗುವಂತೆ ಸೂಚಿಸಲಾಗಿದೆ. ಕ್ರಿಕೆಟ್ ಸೆಂಟರ್‌ನಲ್ಲಿ ನಡೆಯಲಿರುವ ಸಭೆ ಸುಮಾರು 1 ಗಂಟೆ ಕಾಲ ನಡೆಯಲಿದ್ದು, ಎಲ್ಲಾ ತಂಡಗಳ ನಾಯಕರಿಗೆ ಹೊಸ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಾದ ನಂತರ, ತಾಜ್ ಹೋಟೆಲ್‌ನಲ್ಲಿ ಇತರ ಕೆಲವು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಸುಮಾರು 4 ಗಂಟೆಗಳ ಕಾಲ ನಡೆಯಲಿದ್ದು, ಎಲ್ಲಾ ನಾಯಕರ ಸಾಂಪ್ರದಾಯಿಕ ಫೋಟೋ ಶೂಟ್‌ನೊಂದಿಗೆ ಮುಕ್ತಾಯಗೊಳ್ಳುತ್ತದೆ.

10 ತಂಡಗಳ ನಾಯಕರ ಪಟ್ಟಿ

  1. ಅಕ್ಷರ್ ಪಟೇಲ್- ಡೆಲ್ಲಿ ಕ್ಯಾಪಿಟಲ್ಸ್
  2. ಹಾರ್ದಿಕ್ ಪಾಂಡ್ಯ- ಮುಂಬೈ ಇಂಡಿಯನ್ಸ್
  3. ಪ್ಯಾಟ್ ಕಮ್ಮಿನ್ಸ್- ಸನ್‌ರೈಸರ್ಸ್ ಹೈದರಾಬಾದ್
  4. ರುತುರಾಜ್ ಗಾಯಕ್ವಾಡ್- ಚೆನ್ನೈ ಸೂಪರ್ ಕಿಂಗ್ಸ್
  5. ರಜತ್ ಪಾಟಿದಾರ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
  6. ರಿಷಭ್ ಪಂತ್- ಲಕ್ನೋ ಸೂಪರ್ ಜೈಂಟ್ಸ್
  7. ಶ್ರೇಯಸ್ ಅಯ್ಯರ್- ಪಂಜಾಬ್ ಕಿಂಗ್ಸ್
  8. ಸಂಜು ಸ್ಯಾಮ್ಸನ್- ರಾಜಸ್ಥಾನ್ ರಾಯಲ್ಸ್
  9. ಅಜಿಂಕ್ಯ ರಹಾನೆ- ಕೊಲ್ಕತ್ತಾ ನೈಟ್ ರೈಡರ್ಸ್​
  10. ಶುಭ್​ಮನ್ ಗಿಲ್- ಗುಜರಾತ್ ಟೈಟಾನ್ಸ್

ಉದ್ಘಾಟನಾ ಸಮಾರಂಭ

ಐಪಿಎಲ್‌ನ ಮೊದಲ ಪಂದ್ಯ ಮಾರ್ಚ್ 22 ರಂದು ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಮತ್ತು ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ನಡುವೆ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ನ ಸ್ಟಾರ್ ನಟಿಯಾದ ದಿಶಾ ಪಟಾನಿ, ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ಪಂಜಾಬಿ ಗಾಯಕ ಕರಣ್ ಔಜ್ಲಾ ಅವರು ಈ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!