AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ದ್ರಾವಿಡ್- ಸಂಜು ನಡುವೆ ಮನಸ್ತಾಪ ವದಂತಿ; ಮೊದಲ ಬಾರಿಗೆ ಮೌನ ಮುರಿದ ಮಹಾ ಗುರು

Sanju Samson-Rahul Dravid Rift Rumors: ಐಪಿಎಲ್ 2025ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮತ್ತು ಕೋಚ್ ರಾಹುಲ್ ದ್ರಾವಿಡ್ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ಹಬ್ಬಿದ್ದವು. ಒಂದು ವೈರಲ್ ವಿಡಿಯೋ ಈ ವದಂತಿ ಹುಟ್ಟಿಕೊಳ್ಳಲು ಕಾರಣವಾಗಿದೆ. ಆದರೆ, ರಾಹುಲ್ ದ್ರಾವಿಡ್ ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸಂಜು ತಂಡದ ಪ್ರಮುಖ ಭಾಗ ಎಂದು ಹೇಳಿದ್ದಾರೆ. ತಂಡದ ವಾತಾವರಣ ಉತ್ತಮವಾಗಿದೆ ಎಂದೂ ಅವರು ಖಚಿತಪಡಿಸಿದ್ದಾರೆ.

IPL 2025: ದ್ರಾವಿಡ್- ಸಂಜು ನಡುವೆ ಮನಸ್ತಾಪ ವದಂತಿ; ಮೊದಲ ಬಾರಿಗೆ ಮೌನ ಮುರಿದ ಮಹಾ ಗುರು
Rahul Dravid
ಪೃಥ್ವಿಶಂಕರ
|

Updated on:Apr 19, 2025 | 4:17 PM

Share

2025 ರ ಐಪಿಎಲ್ (IPL 2025) ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಮತ್ತು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಸುದ್ದಿಯಲ್ಲಿದ್ದಾರೆ. ವಾಸ್ತವವಾಗಿ, ಕಳೆದ ಎರಡ್ಮೂರು ದಿನಗಳಿಂದ ಸಂಜು ಸ್ಯಾಮ್ಸನ್ ಮತ್ತು ರಾಹುಲ್ ದ್ರಾವಿಡ್ ನಡುವಿನ ಸಂಬಂಧ ಹದಗೆಟ್ಟಿದೆ. ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ, ಇದು ತಂಡದ ಆಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ವರದಿಯಾಗುತ್ತಿದೆ. ಆದರೆ ಈ ವದಂತಿಯ ಬಗ್ಗೆ ಇವರಿಬ್ಬರು ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದರೀಗ ಈ ವದಂತಿಯ ಬಗ್ಗೆ ಸ್ವತಃ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರೇ ಸ್ಪಷ್ಟನೆ ನೀಡುವ ಮೂಲಕ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಅನುಮಾನ ಹುಟ್ಟಿಸಿದ ವೈರಲ್ ವಿಡಿಯೋ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ವಿಡಿಯೋದಲ್ಲಿ, ಸೂಪರ್ ಓವರ್ ಪ್ರಾರಂಭವಾಗುವ ಮೊದಲು ರಾಹುಲ್ ದ್ರಾವಿಡ್ ತಮ್ಮ ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಮಾತನಾಡುತ್ತಿರುವುದು ಕಂಡುಬರುತ್ತದೆ. ಮಿಚೆಲ್ ಸ್ಟಾರ್ಕ್ ಅವರನ್ನು ಎದುರಿಸಲು ಯಾವ ಬ್ಯಾಟ್ಸ್‌ಮನ್‌ಗಳನ್ನು ಕಳುಹಿಸಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿರುವಂತೆ ಕಾಣುತ್ತದೆ. ಆದರೆ, ಸಂಜು ಈ ಚರ್ಚೆಯಲ್ಲಿ ಇರಲಿಲ್ಲ, ಡಗೌಟ್ ಬಳಿ ಓಡಾಡುತ್ತಿದ್ದರು.

ಈ ಸಂದರ್ಭ ಒಬ್ಬ ಆಟಗಾರ ಸಂಜು ಸ್ಯಾಮ್ಸನ್‌ ಅವರನ್ನು ಈ ಮೀಟಿಂಗ್​ಗೆ ಬನ್ನಿ ಎಂದು ಸನ್ನೆ ಮಾಡುತ್ತಾನೆ. ಆದರೆ ಸಂಜು ಕೈ ಸನ್ನೆ ಮಾಡುವ ಮೂಲಕ ನಾನು ಬರುವುದಿಲ್ಲ ಎಂದು ನಿರಾಕರಿಸುತ್ತಾರೆ. ಪಂದ್ಯದ ಬಳಿಕ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುವುದರೊಂದಿಗೆ ಸಂಜು ಹಾಗೂ ದ್ರಾವಿಡ್ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹರಿದಾಡಿತ್ತು. ಆದರೀ ಸಂಜು ಸ್ಯಾಮ್ಸನ್ ಜೊತೆಗಿನ ಭಿನ್ನಾಭಿಪ್ರಾಯದ ಮಾತುಗಳನ್ನು ದ್ರಾವಿಡ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.

ಇಂತಹ ಸುದ್ದಿ ಎಲ್ಲಿಂದ ಬರುತ್ತದೆಯೋ

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ರಾಜಸ್ಥಾನ್ ರಾಯಲ್ಸ್ ಕೋಚ್ ರಾಹುಲ್ ದ್ರಾವಿಡ್, ‘ಇಂತಹ ಸುದ್ದಿ ಎಲ್ಲಿಂದ ಬರುತ್ತದೆಯೋ ನನಗೆ ತಿಳಿದಿಲ್ಲ. ಸಂಜು ಮತ್ತು ನಾನು ಒಂದೇ ತಂಡದಲ್ಲಿದ್ದೇವೆ. ಅವರು ನಮ್ಮ ತಂಡದ ಬಹಳ ಮುಖ್ಯವಾದ ಭಾಗ. ಅವರು ತಂಡದ ಪ್ರತಿಯೊಂದು ಚರ್ಚೆ ಮತ್ತು ನಿರ್ಧಾರದಲ್ಲಿ ಭಾಗಿಯಾಗಿರುತ್ತಾರೆ. ಕೆಲವೊಮ್ಮೆ, ನೀವು ಪಂದ್ಯವನ್ನು ಕಳೆದುಕೊಂಡಾಗ ಮತ್ತು ವಿಷಯಗಳು ಸರಿಯಾಗಿ ನಡೆಯದಿದ್ದಾಗ, ನೀವು ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಈ ಆಧಾರರಹಿತ ಮಾತಿನ ಬಗ್ಗೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ತಂಡದ ವಾತಾವರಣ ತುಂಬಾ ಚೆನ್ನಾಗಿದೆ. ಆಟಗಾರರ ಕಠಿಣ ಪರಿಶ್ರಮದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಆಟಗಾರರು ಉತ್ತಮವಾಗಿ ಪ್ರದರ್ಶನ ನೀಡದಿದ್ದರೆ ಎಷ್ಟು ನೋವುಂಟಾಗುತ್ತದೆ ಎಂಬುದು ಜನರಿಗೆ ಅರ್ಥವಾಗುವುದಿಲ್ಲ ಎಂದು ಹೇಳುವ ಮೂಲಕ ದ್ರಾವಿಡ್​ ವದಂತಿಗೆ ತೆರೆ ಎಳೆದಿದ್ದಾರೆ.

ಗೆಲುವಿನ ಟ್ರ್ಯಾಕ್‌ಗೆ ಮರಳುತ್ತಾ ಆರ್​ಆರ್​

ರಾಜಸ್ಥಾನ ರಾಯಲ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 19 ರಂದು ಲಕ್ನೋ ತಂಡದ ವಿರುದ್ಧ ಆಡಲಿದೆ. ಹೀಗಾಗಿ ಇಡೀ ತಂಡದ ಗಮನ ಸತತ ಮೂರು ಸೋಲುಗಳ ಸರಣಿಯನ್ನು ಮುರಿಯುವತ್ತ ಇರುತ್ತದೆ. ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ರಾಜಸ್ಥಾನ್ 8 ನೇ ಸ್ಥಾನದಲ್ಲಿದೆ. ಈ ನಡುವೆ ನಾಯಕ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಸಸ್ಪೆನ್ಸ್ ಇದೆ. ಕಳೆದ ಪಂದ್ಯದಲ್ಲಿ ತೋಳಿನಲ್ಲಿ ನೋವು ಕಾಣಿಸಿಕೊಂಡ ಕಾರಣ ಸಂಜು ಸ್ಯಾಮ್ಸನ್ ಗಾಯಗೊಂಡು ನಿವೃತ್ತರಾಗಿದ್ದರು. ಇದಕ್ಕೂ ಮೊದಲು, ಗಾಯದಿಂದಾಗಿ, ಅವರು ಸೀಸನ್​ನ ಮೊದಲ ಮೂರು ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್ ಆಗಿ ಆಡಿದ್ದರು. ಸಂಜು ಅನುಪಸ್ಥಿತಿಯಲ್ಲಿ ರಿಯಾನ್ ಪರಾಗ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Sat, 19 April 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!