AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೊನೆಗೂ ಗೆದ್ದ ಸಿಎಸ್​ಕೆ; ಹಾಲಿ ಚಾಂಪಿಯನ್ ಕೆಕೆಆರ್ ಪ್ರಯಾಣವೂ ಅಂತ್ಯ

CSK Beats KKR: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಮಾಂಚಕ ಪಂದ್ಯದಲ್ಲಿ 2 ವಿಕೆಟ್‌ಗಳ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ 179 ರನ್ ಗಳಿಸಿತು. ಸಿಎಸ್ಕೆ 19.4 ಓವರ್‌ಗಳಲ್ಲಿ ಗುರಿ ತಲುಪಿತು. ಕೊನೆಯ ಓವರ್​ನಲ್ಲಿ ಧೋನಿ ಅವರ ಸಿಕ್ಸರ್ ಮತ್ತು ಕಾಂಬೋಜ್ ಅವರ ಬೌಂಡರಿ ಗೆಲುವಿಗೆ ಕಾರಣವಾಯಿತು.

IPL 2025: ಕೊನೆಗೂ ಗೆದ್ದ ಸಿಎಸ್​ಕೆ; ಹಾಲಿ ಚಾಂಪಿಯನ್ ಕೆಕೆಆರ್ ಪ್ರಯಾಣವೂ ಅಂತ್ಯ
Csk
Follow us
ಪೃಥ್ವಿಶಂಕರ
|

Updated on: May 07, 2025 | 11:31 PM

ಐಪಿಎಲ್ 2025 (IPL 2025) ರಿಂದ ಹೊರಬಿದ್ದ ಮೊದಲ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಕೊನೆಗೂ ತನ್ನ ಸೋಲಿನ ಸರಣಿಯನ್ನು ಕೊನೆಗೊಳಿಸಿದ್ದು ಪಂದ್ಯಾವಳಿಯಲ್ಲಿ ತನ್ನ ಮೂರನೇ ಗೆಲುವು ದಾಖಲಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಗಿದೆ. ಇದರೊಂದಿಗೆ, ಚೆನ್ನೈ ತಂಡವು ಹಾಲಿ ಚಾಂಪಿಯನ್ ಕೋಲ್ಕತಾ ತಂಡವನ್ನು ಪ್ಲೇಆಫ್ ರೇಸ್‌ನಿಂದ ಹೊರಗಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಗೆಲುವಿಗೆ 180 ರನ್ ಗಳ ಗುರಿಯನ್ನು ನೀಡಿತು. ಈ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಉಳಿಸಿಕೊಂಡು ಗೆದ್ದುಕೊಂಡಿತು.

ನಾಯಕನ ಇನ್ನಿಂಗ್ಸ್ ಆಡಿದ ರಹಾನೆ

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಗುರ್ಬಾಜ್ ಕೇವಲ 11 ರನ್‌ಗಳಿಗೆ ಔಟಾದರು. ನಂತರ ಸುನಿಲ್ ನರೈನ್ 26 ರನ್ ಗಳಿಸಿ ಟೆಂಟ್ ಸೇರಿಕೊಂಡರು. ನಾಯಕ ಅಜಿಂಕ್ಯ ರಹಾನೆ 33 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳಿಂದ 48 ರನ್ ಗಳಿಸಿದರೆ, ಆಂಗ್ಕ್ರಿಶ್ ರಘುವಂಶಿ ಕೇವಲ ಒಂದು ರನ್‌ಗೆ ತೃಪ್ತಿಪಡಬೇಕಾಯಿತು. ಮನೀಶ್ ಪಾಂಡೆನ್ ಅಜೇಯ 38 ರನ್ ಗಳಿಸಿದರೆ, ಆಂಡ್ರೆ ರಸೆಲ್ 21 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 38 ರನ್ ಗಳಿಸಿ ಔಟಾದರು. ಈ ಪಂದ್ಯದಲ್ಲೂ ರಿಂಕು ವಿಫಲರಾಗಿ ಕೇವಲ 9 ರನ್ ಗಳಿಸಿದರು. ರಮಣದೀಪ್ ಸಿಂಗ್ ಅಜೇಯ 4 ರನ್ ಗಳಿಸಿದರು.

ಬ್ರೆವಿಸ್ ಸ್ಫೋಟಕ ಅರ್ಧಶತಕ

ಈ ರನ್‌ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳಪೆ ಆರಂಭವನ್ನು ಪಡೆಯಿತು. ಆರಂಭಿಕರಾದ ಆಯುಷ್ ಮ್ಹಾತ್ರೆ ಮತ್ತು ಡೆವೊನ್ ಕಾನ್ವೇ ಖಾತೆ ತೆರೆಯದೆ ಔಟಾದರು. ಆದರೆ ಚೊಚ್ಚಲ ಪಂದ್ಯವನ್ನಾಡಿದ ಉರ್ವಿಲ್ ಪಟೇಲ್11 ಎಸೆತಗಳಲ್ಲಿ ಆಕ್ರಮಣಕಾರಿಯಾಗಿ 31 ರನ್ ಗಳಿಸಿದರು. ರವಿಚಂದ್ರನ್ ಅಶ್ವಿನ್ 8 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜ 19 ರನ್ ಗಳಿಸಿ ಔಟಾದರು. ಆದ್ದರಿಂದ, ಈ ಪಂದ್ಯವು ಕೋಲ್ಕತ್ತಾ ಪರವಾಗಿ ವಾಲಿತು. ಆದರೆ ಡೆವೋಲ್ಡ್ ಬ್ರೆವಿಸ್ ಮತ್ತು ಶಿವಂ ದುಬೆ ಉತ್ತಮ ಜೊತೆಯಾಟವಾಡಿದರು. ಡೆವೋಲ್ಡ್ 25 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 52 ರನ್ ಗಳಿಸಿದರೆ, ಶಿವಂ ದುಬೆ ತಾಳ್ಮೆಯ ಆಟವಾಡಿ 40 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 45 ರನ್ ಗಳಿಸಿ ಔಟಾದರು. ಈ ಹಂತದಲ್ಲಿ ಸಿಎಸ್​ಕೆ ತಂಡಕ್ಕೆ 8 ಎಸೆತಗಳಲ್ಲಿ 10 ರನ್‌ ಬೇಕಾಗಿತ್ತು.

IPL 2025: ಆರ್​​ಸಿಬಿಗೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪಡಿಕ್ಕಲ್..! ಬದಲಿಯಾಗಿ ಬಂದ ಮತ್ತೊಬ್ಬ ಕನ್ನಡಿಗ

6 ಎಸೆತಗಳಲ್ಲಿ 8 ರನ್ ಬೇಕಿತ್ತು

ಕೊನೆಗೆ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 6 ಎಸೆತಗಳಲ್ಲಿ 8 ರನ್​ಗಳ ಅಗತ್ಯವಿತ್ತು. ಸ್ಟ್ರೈಕ್​ನಲ್ಲಿದ್ದ ಮಹೇಂದ್ರ ಸಿಂಗ್ ಧೋನಿ, ಆಂಡ್ರೆ ರಸೆಲ್ ಅವರ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು. ಹೀಗಾಗಿ 5 ಎಸೆತಗಳಲ್ಲಿ 2 ರನ್ ಬೇಕಾಗಿತ್ತು. ಮೂರನೇ ಎಸೆತದಲ್ಲಿ ಧೋನಿ ಸಿಂಗಲ್ ತೆಗೆದುಕೊಂಡು ಪಂದ್ಯವನ್ನು ಸಮಬಲಗೊಳಿಸಿದರು. ಮೂರು ಎಸೆತಗಳಲ್ಲಿ ಒಂದು ರನ್ ಬೇಕಿತ್ತು. ನಾಲ್ಕನೇ ಎಸೆತದಲ್ಲಿ ಕಾಂಬೋಜ್ ಬೌಂಡರಿ ಬಾರಿಸಿ ಗೆಲುವು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?