AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಉಚಿತ ಬಸ್, ಮೆಟ್ರೋ ಸೌಲಭ್ಯ; ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಸಿಎಸ್​ಕೆ

Chennai Super Kings IPL 2025: ಐಪಿಎಲ್ 2025ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದೆ. ಚೆನ್ನೈನಲ್ಲಿ ನಡೆಯುವ ಪಂದ್ಯಗಳಿಗೆ ಬರುವ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು. ಪಂದ್ಯದ ಟಿಕೆಟ್ ಹೊಂದಿರುವವರು ಈ ಸೌಲಭ್ಯ ಪಡೆಯಬಹುದು. ಚೆನ್ನೈ ಮೆಟ್ರೋ ಮತ್ತು ಸಾರಿಗೆ ನಿಗಮದೊಂದಿಗೆ ಸಿಎಸ್‌ಕೆ ಈ ಒಪ್ಪಂದ ಮಾಡಿಕೊಂಡಿದೆ.

IPL 2025: ಉಚಿತ ಬಸ್, ಮೆಟ್ರೋ ಸೌಲಭ್ಯ; ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಸಿಎಸ್​ಕೆ
ಸಿಎಸ್​ಕೆ
ಪೃಥ್ವಿಶಂಕರ
|

Updated on: Mar 16, 2025 | 4:42 PM

Share

18ನೇ ಆವೃತ್ತಿಯ ಐಪಿಎಲ್ (IPL 2025) ಆರಂಭಕ್ಕೆ ಇನ್ನು 6 ದಿನ ಮಾತ್ರ ಬಾಕಿ ಉಳಿದಿವೆ. ಮಾರ್ಚ್​ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆ ಬಳಿಕ ಟೂರ್ನಿಯ ಎರಡನೇ ದಿನದಂದು ಎರಡನೇ ಪಂದ್ಯದಲ್ಲಿ ಮತ್ತೆರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ತಮ್ಮ ತಮ್ಮ ಮೊದಲ ಪಂದ್ಯವನ್ನು ಆಡಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ (CSK) ಫ್ರಾಂಚೈಸಿ ತನ್ನ ತವರು ಅಭಿಮಾನಿಗಳಿಗೆ ವಿಶೇಷ ಉಡುಗೊರೆಯನ್ನು ನೀಡಿದೆ.

ಉಚಿತ ಪ್ರಯಾಣದ ಭಾಗ್ಯ

ಎಲ್ಲಾ ತಂಡಗಳಂತೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ತನ್ನ ತವರಿನಲ್ಲಿ ಅಂದರೆ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 7 ಪಂದ್ಯಗಳನ್ನು ಆಡಲಿದೆ. ಈ 7 ಪಂದ್ಯಗಳಿಗೂ ಅಭಿಮಾನಿಗಳನ್ನು ಸೆಳೆಯಲು ವಿಶೇಷ ಯೋಜನೆಯನ್ನು ಹಾಕಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ, ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಮತ್ತು ಮೆಟ್ರೋಪಾಲಿಟನ್ ಸಾರಿಗೆ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಅಡಿಯಲ್ಲಿ ಸಿಎಸ್​ಕೆ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಹೊಂದಿದ್ದಾರೆ.

ಇದನ್ನೂ ಓದಿ
Image
‘ಹಿಂದೆ ಏನೇ ನಡೆದರೂ ಅದರಲ್ಲಿ ನನಗೆ ತೃಪ್ತಿ ಇದೆ’; ಕೊಹ್ಲಿ
Image
ಐಪಿಎಲ್‌ನಲ್ಲಿ ಅಧಿಕ ಬಾರಿ ಸೊನ್ನೆಗೆ ಔಟಾದ ಟಾಪ್ 5 ಬ್ಯಾಟರ್​ಗಳಿವರು
Image
ಐಪಿಎಲ್ 2025: 5 ತಂಡಗಳಿಗೆ ನೂತನ ನಾಯಕರ ನೇಮಕ
Image
ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್‌ಗಳು ಇವರೇ..

ಉಚಿತ ಬಸ್, ಮೆಟ್ರೋ ಸೌಲಭ್ಯ ಪಡೆಯುವುದು ಹೇಗೆ?

ಚೆನ್ನೈನಲ್ಲಿ ನಡೆಯುವ ಪಂದ್ಯಗಳನ್ನು ನೋಡಲು ಕ್ರೀಡಾಂಗಣಕ್ಕೆ ತೆರಳುವ ಅಭಿಮಾನಿಗಳಿಗೆ ಸಿಎಸ್​ಕೆ ಫ್ರಾಂಚೈಸಿ ಉಚಿತ ಬಸ್ ಮತ್ತು ಮೆಟ್ರೋ ಪ್ರಯಾಣದ ಸೌಲಭ್ಯ ಒದಗಿಸಿದೆ. ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಚಿಸುವ ಅಭಿಮಾನಿಗಳು ಆ ದಿನದಂದು ನಡೆಯುವ ಪಂದ್ಯದ ಟಿಕೆಟ್ ಅನ್ನು ಖರೀದಿಸಿರಬೇಕು. ಯಾರ ಕೈಯಲ್ಲಿ ಅಂದಿನ ಪಂದ್ಯ ಟಿಕೆಟ್ ಇರುತ್ತದೆಯೋ, ಅವರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ಬಾರ್‌ಕೋಡ್ ಹೊಂದಿರುವ ಟಿಕೆಟ್‌ಗಳು ಮೆಟ್ರೋ ಟಿಕೆಟ್‌ಗಳಂತೆ ಕಾರ್ಯನಿರ್ವಹಿಸುತ್ತವೆ. ಇದರಿಂದಾಗಿ ಯಾವುದೇ ಅಭಿಮಾನಿಗಳು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.

ಇದನ್ನೂ ಓದಿ: IPL 2025: ಲಕ್ಷ ಮುಟ್ಟಿದ ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ..!

ಸಿಎಸ್​ಕೆ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಮಥೀಶ ಪತಿರಾಣ,ಎಂಎಸ್ ಧೋನಿ, ಡೆವೊನ್ ಕಾನ್ವೆ, ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ಆರ್ ಅಶ್ವಿನ್, ಖಲೀಲ್ ಅಹ್ಮದ್, ನೂರ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕರನ್, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಮುಖೇಶ್ ಚೌಧರಿ, ದೀಪಕ್ ಹೂಡಾ, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ