AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀನಾಯ ಪ್ರದರ್ಶನ; 8 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡ ಸಿಎಸ್​ಕೆ

CSK vs PBKS IPL 2025: ಚೆಪಾಕ್‌ನಲ್ಲಿ ನಡೆದ ಐಪಿಎಲ್ 49ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 190 ರನ್ ಗಳಿಸಿತು. ಯುಜ್ವೇಂದ್ರ ಚಾಹಲ್ ಅವರು 19ನೇ ಓವರ್‌ನಲ್ಲಿ 4 ವಿಕೆಟ್‌ಗಳನ್ನು ಪಡೆಯುವುದರೊಂದಿಗೆ ಹ್ಯಾಟ್ರಿಕ್ ಕೂಡ ಸಾಧಿಸಿದರು. ಅಲ್ಲದೆ ಚೆನ್ನೈ ತಂಡ ಕೊನೆಯ 8 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು ಬೃಹತ್ ಮೊತ್ತ ಕಲೆಹಾಕುವುದನ್ನು ತಪ್ಪಿಸಿಕೊಂಡಿತು.

IPL 2025: ಹೀನಾಯ ಪ್ರದರ್ಶನ; 8 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡ ಸಿಎಸ್​ಕೆ
Csk
ಪೃಥ್ವಿಶಂಕರ
|

Updated on: Apr 30, 2025 | 10:50 PM

Share

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ (IPL 2025) 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ (CSK vs PBKS) ಮುಖಾಮುಖಿಯಾಗಿದ್ದವು. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ಬಹುಮುಖ್ಯವಾಗಿದ್ದ ಕಾರಣ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿತ್ತು. ಅದರಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್​ಕೆ ತಂಡ 190 ರನ್ ಕಲೆಹಾಕಿತು. ವಾಸ್ತವವಾಗಿ ಒಂದು ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 220 ರನ್ ಗಳಿಸುವ ನಿರೀಕ್ಷೆಯಿತ್ತು. ಆದರೆ ಪಂಜಾಬ್ ತಂಡವು ಕೊನೆಯ 8 ಎಸೆತಗಳಲ್ಲಿ ಚೆನ್ನೈ ತಂಡದ 5 ವಿಕೆಟ್ ಉರುಳಿಸುವ ಮೂಲಕ ಇಡೀ ತಂಡವನ್ನು ಕೇವಲ 190 ರನ್‌ಗಳಿಗೆ ಸೀಮಿತಗೊಳಿಸಿತು.

ಮೇಲೆ ಹೇಳಿದಂತೆ 18 ಓವರ್‌ಗಳ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಕೋರ್ 177 ರನ್‌ಗಳಾಗಿತ್ತು. ಹೀಗಾಗಿ ಚೆನ್ನೈ ಈ ಪಂದ್ಯದಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸುತ್ತದೆ ಎಂದು ತೋರುತ್ತಿತ್ತು. ಇದಕ್ಕೆ ಪೂರಕವಾಗಿ ಫಿನಿಶರ್ ಖ್ಯಾತಿಯ ಎಂ ಎಸ್ ಧೋನಿ ಹಾಗೂ ಸ್ಫೋಟಕ ದಾಂಟಿಗ ಶಿವಂ ದುಬೆ ಕ್ರೀಸ್​ನಲ್ಲಿದ್ದರು. ಹೀಗಾಗಿ ಕೊನೆಯ 12 ಎಸೆತಗಳಲ್ಲಿ ಸಿಎಸ್​ಕೆ ಭರ್ಜರಿ ಬ್ಯಾಟಿಂಗ್ ಮಾಡಬಹುದು ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯನ್ನು ಸಿಎಸ್​ಕೆ ಬ್ಯಾಟರ್​​ಗಳು ಹುಸಿಗೊಳಿಸಿದರು.

ಚಾಹಲ್​ಗೆ ಒಂದೇ ಓವರ್​ನಲ್ಲಿ 4 ವಿಕೆಟ್

ವಾಸ್ತವವಾಗಿ 19ನೇ ಓವರ್‌ ಬೌಲ್ ಮಾಡುವ ಜವಬ್ದಾರಿಯನ್ನು ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಾಹಲ್‌ಗೆ ವಹಿಸಿದರು. ಈ ವೇಳೆ ಎಂಎಸ್ ಧೋನಿ ಸ್ಟ್ರೈಕ್​ನಲ್ಲಿದ್ದರು. ನಿರೀಕ್ಷೆಯಂತೆ ಚಾಹಲ್ ಅವರ ಮೊದಲ ಎಸೆತವನ್ನು ಧೋನಿ ಸಿಕ್ಸರ್ ಬಾರಿಸಿದರು. ಮೊದಲ ಎಸೆತವೇ ಸಿಕ್ಸರ್ ಹೋದ ಕಾರಣ , ಮತ್ತೊಮ್ಮೆ ಧೋನಿ ಅಬ್ಬರಿಸಬಹುದು ಎಂದು ಎಲ್ಲರು ಅಂದುಕೊಂಡಿದ್ದರು. ಆದರೆ ಮುಂದಿನ ಎಸೆತದಲ್ಲೇ ಚಾಹಲ್, ಧೋನಿಯನ್ನು ಔಟ್ ಮಾಡಿದರು. ಆ ನಂತರ ಬಂದ ದೀಪಕ್ ಹೂಡಾ ಕೂಡ ಯಾವುದೇ ಪರಿಣಾಮ ಬೀರದೆ ಕ್ಯಾಚಿತ್ತು ಔಟಾದರು.

IPL 2025 Hat-trick: ಈ ಸೀಸನ್​ನ ಮೊದಲ ಹ್ಯಾಟ್ರಿಕ್ ವಿಕೆಟ್ ಪಡೆದ ಚದುರಂಗಿ ಚಾಹಲ್; ವಿಡಿಯೋ

8 ಎಸೆತಗಳಲ್ಲಿ 5 ವಿಕೆಟ್ ಪತನ

ಹೂಡಾ ವಿಕೆಟ್ ಬಳಿಕ ಬಂದ ಇಂಪ್ಯಾಕ್ಟ್ ಪ್ಲೇಯರ್ ಅನ್ಶುಲ್ ಕಾಂಬೋಜ್ ಕೂಡ ತಾವು ಎದುರಿಸಿದ ಮೊದ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. 9ನೇ ಕ್ರಮಾಂಕದಲ್ಲಿ ಬಂದ ನೂರ್ ಅಹ್ಮದ್ ಕೂಡ ಬಿಗ್ ಶಾಟ್ ಹೊಡೆಯುವ ಯತ್ನದಲ್ಲಿ ಕ್ಯಾಚಿತ್ತು ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಚಾಹಲ್ ಐಪಿಎಲ್‌ನಲ್ಲಿ 2ನೇ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಪಡೆದರೆ, ಸಿಎಸ್​ಕೆ ವಿರುದ್ಧ ಬೌಲರ್ ಒಬ್ಬ ಮೊದಲ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಪಡೆದ ದಾಖಲೆಯನ್ನು ಬರೆದರು. ಆ ನಂತರ ಅಂದರೆ 20ನೇ ಓವರ್​ ಬೌಲ್ ಮಾಡಿದ ಅರ್ಶ್ದೀಪ್ ಸಿಂಗ್, ಶಿವಂ ದುಬೆ ಅವರನ್ನು ಔಟ್ ಮಾಡುವ ಮೂಲಕ ಚೆನ್ನೈ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು. ಹೀಗಾಗಿ ಚೆನ್ನೈ ತಂಡದ ಕೊನೆಯ ಐದು ವಿಕೆಟ್‌ಗಳು ಕೇವಲ 8 ಎಸೆತಗಳಲ್ಲಿ ಪತನಗೊಂಡವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ