AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ನಾಟೌಟ್ ಆಗಿದ್ದರೂ ಧೋನಿ ಔಟ್: ಅಂಪೈರ್ ವಿವಾದಾತ್ಮಕ ತೀರ್ಪು

IPL 2025 CSK vs KKR: ಚೆಪಾಕ್ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮೂರನೇ ಬಾರಿ ಸೋಲನುಭವಿಸಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ಕೇವಲ 103 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಕೆಕೆಆರ್ 10.1 ಓವರ್​ಗಳಲ್ಲಿ ಚೇಸ್ ಮಾಡಿದೆ.

VIDEO: ನಾಟೌಟ್ ಆಗಿದ್ದರೂ ಧೋನಿ ಔಟ್: ಅಂಪೈರ್ ವಿವಾದಾತ್ಮಕ ತೀರ್ಪು
Ms Dhoni
ಝಾಹಿರ್ ಯೂಸುಫ್
|

Updated on: Apr 12, 2025 | 8:03 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 25ನೇ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪುವೊಂದು ಇದೀಗ ವಿವಾದಕ್ಕೀಡಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಸಿಎಸ್​ಕೆ ತಂಡವು 72 ರನ್​ ಕಲೆಹಾಕುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ, ಸುನಿಲ್ ನರೈನ್ ಎಸೆತದಲ್ಲಿ ಎಲ್​ಬಿ ಆದರು. ಇತ್ತ ಧೋನಿ ಎಲ್​ಬಿ ಆಗುತ್ತಿದ್ದಂತೆ ಕೆಕೆಆರ್ ಆಟಗಾರರು ಅಪೀಲ್ ಮಾಡಿದರು.

ಇದನ್ನೂ ಓದಿ
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
PSL​ನಲ್ಲಿ ಕಣಕ್ಕಿಳಿಯಲಿರುವ ವಿದೇಶಿ ಆಟಗಾರರ ಪಟ್ಟಿ ಪ್ರಕಟ
Image
ಮುಂಬೈ ಇಂಡಿಯನ್ಸ್ ಬಳಗಕ್ಕೆ ಕ್ವಿಂಟನ್ ಡಿಕಾಕ್ ಎಂಟ್ರಿ

ಧೋನಿ ವಿಕೆಟ್ ವಿಡಿಯೋ:

ಈ ಮನವಿಗೆ ಫೀಲ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ. ಇದರ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ ರಿವ್ಯೂ ತೆಗೆದುಕೊಂಡಿದ್ದಾರೆ. ರಿವ್ಯೂ ವೇಳೆ ಚೆಂಡು ಧೋನಿಯ ಬ್ಯಾಟ್ ಸವರಿ ಸಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಇದರಿಂದ ಅಲ್ಟ್ರಾಎಡ್ಜ್​ ಮೀಟರ್​ನಲ್ಲೂ ಸ್ಪೈಕ್​ಗಳು ಕಾಣಿಸಿಕೊಂಡಿದೆ.

ಚೆಂಡು ಧೋನಿ ಬ್ಯಾಟ್​ಗೆ ತಾಗಿರುವುದಕ್ಕೆ ಸಾಕ್ಷಿ:

ಆದರೆ ಇದನ್ನು ಸರಿಯಾಗಿ ಪರಿಶೀಲಿಸದೇ ಮೂರನೇ ಅಂಪೈರ್ ಧೋನಿಯನ್ನು ಎಲ್​ಬಿಡಬ್ಲ್ಯೂ ಎಂದು ಔಟ್ ನೀಡಿದ್ದಾರೆ. ಇತ್ತ ನಿರಾಸೆಯಿಂದಲೇ ಮಹೇಂದ್ರ ಸಿಂಗ್ ಧೋನಿ (1) ಪೆವಿಲಿಯನ್ ಕಡೆ ಹೆಜ್ಜೆಹಾಕಿದರು.

ಧೋನಿ ಬ್ಯಾಟ್​ಗೆ ಚೆಂಡು ತಾಗಿರುವುದು:

ಇದೀಗ ಮಹೇಂದ್ರ ಸಿಂಗ್ ಧೋನಿ ನಾಟೌಟ್ ಆಗಿದ್ದರೂ ಔಟ್ ತೀರ್ಪು ನೀಡಿರುವ ಅಂಪೈರ್ ನಿರ್ಧಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳು ವ್ಯಕ್ತವಾಗಿದೆ. ಅದರಲ್ಲೂ ಧೋನಿ ಬ್ಯಾಟ್​ಗೆ ಚೆಂಡು ತಾಗಿರುವ ಫೋಟೋಗಳನ್ನು ತಳಾ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಅಂಪೈರ್ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ.

ಈ ಫೋಟೋಗಳು ಹಾಗೂ ವಿಡಿಯೋವನ್ನು ಪರಿಶೀಲಿಸಿದರೆ, ಮೇಲ್ನೋಟಕ್ಕೆ ನಾಟೌಟ್ ಎಂದು ಗೊತ್ತಾಗುತ್ತಿದ್ದರೂ, ಮೂರನೇ ಅಂಪೈರ್ ಔಟ್ ನೀಡಿದ್ದೇಕೆ ಎಂಬುದೇ ಈಗ ಪ್ರಶ್ನೆಯಾಗಿ ಉಳಿದಿದೆ.

ಒಟ್ಟಿನಲ್ಲಿ ಧೋನಿಯ ಈ ವಿಕೆಟ್​ನೊಂದಿಗೆ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ಓವರ್​ಗಳಲ್ಲಿ 103 ರನ್​​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ: ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಸತತ ಸೋಲಿನೊಂದಿಗೆ CSK ಹಿಸ್ಟರಿ

104 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್​ಗಳಲ್ಲಿ 107 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ