Sign In

By signing in or creating an account, you agree with Associated Broadcasting Company's Terms & Conditions and Privacy Policy.

7/3, 65/5, 211/9: ಹೊಸ ಇತಿಹಾಸ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2205 DC vs LSG: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೃಹತ್ ಮೊತ್ತ ಚೇಸ್ ಮಾಡಿ ಗೆದ್ದಿರುವುದು ಅಪರೂಪ. ಆದರೆ ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲೇ ಡಿಸಿ ಪಡೆ ಪರಾಕ್ರಮ ಮೆರೆದಿದೆ. ಅದು ಸಹ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಈ ಗೆಲುವಿನ ರೂವಾರಿ ಅಶುತೋಷ್ ಶರ್ಮಾ.

7/3, 65/5, 211/9: ಹೊಸ ಇತಿಹಾಸ ಬರೆದ ಡೆಲ್ಲಿ ಕ್ಯಾಪಿಟಲ್ಸ್
Dc Vs Lsg
Follow us
ಝಾಹಿರ್ ಯೂಸುಫ್
|

Updated on: Mar 25, 2025 | 7:03 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 4ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಈ ರೋಚಕ ಹೋರಾಟದಲ್ಲಿ ಗೆದ್ದು ಬೀಗಿದ್ದು ಡೆಲ್ಲಿ ಕ್ಯಾಪಿಟಲ್ಸ್ (Delhi Capitals). ಅದು ಸಹ ಕೊನೆಯ ವಿಕೆಟ್ ಇರುವಾಗ ಸಿಕ್ಸ್​ ಸಿಡಿಸುವ ಮೂಲಕ ಎಂಬುದೇ ವಿಶೇಷ. ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಸ್ಪೋಟಕ ಇನಿಂಗ್ಸ್ ಆಡಿದರು. ಈ ಇನಿಂಗ್ಸ್​ನ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

210 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಮತ್ತೆರಡು ವಿಕೆಟ್ ಪತನವಾಯಿತು.

ಪರಿಣಾಮ ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ಸೋಲಿನತ್ತ ಮುಖ ಮಾಡಿದ್ದರು. ಆದರೆ ಈ ಹಂತದಲ್ಲಿ ಕಣಕ್ಕಿಳಿದ ಅಶುತೋಷ್ ಶರ್ಮಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಟ್ರಿಸ್ಟನ್ ಸ್ಟಬ್ಸ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಅಶುತೋಷ್ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

ಈ ಹಂತದಲ್ಲಿ ಸ್ಟಬ್ಸ್ (34) ಔಟಾದರು. ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಪ್ರಾಜ್ ನಿಗಮ್ ಸ್ಪೋಟಕ ಇನಿಂಗ್ಸ್​ನೊಂದಿಗೆ ಅಶುತೋಷ್​ಗೆ ಸಾಥ್ ನೀಡಿದರು. ಪರಿಣಾಮ 16 ಓವರ್ ಆಗುವಷ್ಟರಲ್ಲಿ ಡೆಲ್ಲಿ ಪಡೆಯ ಸ್ಕೋರ್ 160 ರ ಗಡಿದಾಟಿತು.

ಇದರ ನಡುವೆ ವಿಪ್ರಾಜ್ ನಿಗಮ್ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 39 ರನ್ ಬಾರಿಸಿ ಔಟಾದರು. ಇದಾಗ್ಯೂ ಸೋಲು ಒಪ್ಪಿಕೊಳ್ಳಲು ಅಶುತೋಷ್ ಶರ್ಮಾ ಸಿದ್ಧರಿರಲಿಲ್ಲ. ಅಲ್ಲದೆ ಏಕಾಂಗಿ ಹೋರಾಟವನ್ನು ಮುಂದುವರೆಸಿದರು.

ಅಂತಿಮ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 22 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕುಲ್ದೀಪ್ ಯಾದವ್ ರನೌಟ್ ಆದರು. ಆದರೆ ಕೊನೆಯ ವಿಕೆಟ್​ನೊಂದಿಗೆ ಹೋರಾಟ ಮುಂದುವರೆಸಿದ ಅಶುತೋಷ್ ಶರ್ಮಾ 19ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ 12 ರನ್​ ಕಲೆಹಾಕಿದರು.

ಪರಿಣಾಮ ಅಂತಿಮ ಓವರ್​ನಲ್ಲಿ ಆರು ರನ್ ಬೇಕಿತ್ತು. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ಅವಶ್ಯಕತೆ. ಆದರೆ ಸ್ಟ್ರೈಕ್​ನಲ್ಲಿದ್ದ ಮೋಹಿತ್ ಶರ್ಮಾ, ಶಹಬಾಝ್ ಅಹ್ಮದ್ ಎಸೆದ ಕೊನೆಯ ಓವರ್​ನ ಮೊದಲ ಎಸೆತವನ್ನು ಡಾಟ್ ಮಾಡಿದರು. ಅಲ್ಲದೆ 2ನೇ ಎಸೆತದಲ್ಲಿ ಸಿಂಗಲ್ ತೆಗೆದರು. ಮೂರನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಅಶುತೋಷ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಪಂದ್ಯದಲ್ಲಿ ಅಶುತೋಷ್ ಶರ್ಮಾ ಎದುರಿಸಿದ ಮೊದಲ 20 ಎಸೆತಗಳಲ್ಲಿ ಕಲೆಹಾಕಿದ್ದು 20 ರನ್​ಗಳು ಮಾತ್ರ. ಆ ಬಳಿಕ ಎದುರಿಸಿದ 11 ಎಸೆತಗಳಲ್ಲಿ 46 ರನ್​ ಚಚ್ಚಿದರು. ಈ ಮೂಲಕ 31 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಡೆಲ್ಲಿ ಕ್ಯಾಪಿಟಲ್ಸ್ ಜಯಭೇರಿ:

ಡೆಲ್ಲಿ ಪಡೆಗೆ ಐತಿಹಾಸಿಕ ಜಯ:

2008 ರಿಂದ ಐಪಿಎಲ್​ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ (ಡೆಲ್ಲಿ ಡೇರ್​ ಡೆವಿಲ್ಸ್) ತಂಡವು 200+ ರನ್ ಚೇಸ್ ಮಾಡಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದಕ್ಕೂ ಮುನ್ನ ಭರ್ಜರಿ ಗೆಲುವು ದಾಖಲಿಸಿದ್ದು 2017 ರಲ್ಲಿ.

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 209 ರನ್​ಗಳನ್ನು ಬೆನ್ನತ್ತುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಶ್ರೇಷ್ಠ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಡಿಸಿ ಪಡೆ ಅಮೋಘ ಗೆಲುವು ದಾಖಲಿಸಿರಲಿಲ್ಲ. ಆದರೆ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ 210 ರನ್​ಗಳನ್ನು ಬೆನ್ನತ್ತಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್