AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7/3, 65/5, 211/9: ಹೊಸ ಇತಿಹಾಸ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2205 DC vs LSG: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೃಹತ್ ಮೊತ್ತ ಚೇಸ್ ಮಾಡಿ ಗೆದ್ದಿರುವುದು ಅಪರೂಪ. ಆದರೆ ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲೇ ಡಿಸಿ ಪಡೆ ಪರಾಕ್ರಮ ಮೆರೆದಿದೆ. ಅದು ಸಹ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಈ ಗೆಲುವಿನ ರೂವಾರಿ ಅಶುತೋಷ್ ಶರ್ಮಾ.

7/3, 65/5, 211/9: ಹೊಸ ಇತಿಹಾಸ ಬರೆದ ಡೆಲ್ಲಿ ಕ್ಯಾಪಿಟಲ್ಸ್
Dc Vs Lsg
Follow us
ಝಾಹಿರ್ ಯೂಸುಫ್
|

Updated on: Mar 25, 2025 | 7:03 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 4ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಈ ರೋಚಕ ಹೋರಾಟದಲ್ಲಿ ಗೆದ್ದು ಬೀಗಿದ್ದು ಡೆಲ್ಲಿ ಕ್ಯಾಪಿಟಲ್ಸ್ (Delhi Capitals). ಅದು ಸಹ ಕೊನೆಯ ವಿಕೆಟ್ ಇರುವಾಗ ಸಿಕ್ಸ್​ ಸಿಡಿಸುವ ಮೂಲಕ ಎಂಬುದೇ ವಿಶೇಷ. ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಸ್ಪೋಟಕ ಇನಿಂಗ್ಸ್ ಆಡಿದರು. ಈ ಇನಿಂಗ್ಸ್​ನ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

210 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಮತ್ತೆರಡು ವಿಕೆಟ್ ಪತನವಾಯಿತು.

ಪರಿಣಾಮ ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ಸೋಲಿನತ್ತ ಮುಖ ಮಾಡಿದ್ದರು. ಆದರೆ ಈ ಹಂತದಲ್ಲಿ ಕಣಕ್ಕಿಳಿದ ಅಶುತೋಷ್ ಶರ್ಮಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಟ್ರಿಸ್ಟನ್ ಸ್ಟಬ್ಸ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಅಶುತೋಷ್ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

ಈ ಹಂತದಲ್ಲಿ ಸ್ಟಬ್ಸ್ (34) ಔಟಾದರು. ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಪ್ರಾಜ್ ನಿಗಮ್ ಸ್ಪೋಟಕ ಇನಿಂಗ್ಸ್​ನೊಂದಿಗೆ ಅಶುತೋಷ್​ಗೆ ಸಾಥ್ ನೀಡಿದರು. ಪರಿಣಾಮ 16 ಓವರ್ ಆಗುವಷ್ಟರಲ್ಲಿ ಡೆಲ್ಲಿ ಪಡೆಯ ಸ್ಕೋರ್ 160 ರ ಗಡಿದಾಟಿತು.

ಇದರ ನಡುವೆ ವಿಪ್ರಾಜ್ ನಿಗಮ್ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 39 ರನ್ ಬಾರಿಸಿ ಔಟಾದರು. ಇದಾಗ್ಯೂ ಸೋಲು ಒಪ್ಪಿಕೊಳ್ಳಲು ಅಶುತೋಷ್ ಶರ್ಮಾ ಸಿದ್ಧರಿರಲಿಲ್ಲ. ಅಲ್ಲದೆ ಏಕಾಂಗಿ ಹೋರಾಟವನ್ನು ಮುಂದುವರೆಸಿದರು.

ಅಂತಿಮ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 22 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕುಲ್ದೀಪ್ ಯಾದವ್ ರನೌಟ್ ಆದರು. ಆದರೆ ಕೊನೆಯ ವಿಕೆಟ್​ನೊಂದಿಗೆ ಹೋರಾಟ ಮುಂದುವರೆಸಿದ ಅಶುತೋಷ್ ಶರ್ಮಾ 19ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ 12 ರನ್​ ಕಲೆಹಾಕಿದರು.

ಪರಿಣಾಮ ಅಂತಿಮ ಓವರ್​ನಲ್ಲಿ ಆರು ರನ್ ಬೇಕಿತ್ತು. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ಅವಶ್ಯಕತೆ. ಆದರೆ ಸ್ಟ್ರೈಕ್​ನಲ್ಲಿದ್ದ ಮೋಹಿತ್ ಶರ್ಮಾ, ಶಹಬಾಝ್ ಅಹ್ಮದ್ ಎಸೆದ ಕೊನೆಯ ಓವರ್​ನ ಮೊದಲ ಎಸೆತವನ್ನು ಡಾಟ್ ಮಾಡಿದರು. ಅಲ್ಲದೆ 2ನೇ ಎಸೆತದಲ್ಲಿ ಸಿಂಗಲ್ ತೆಗೆದರು. ಮೂರನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಅಶುತೋಷ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಪಂದ್ಯದಲ್ಲಿ ಅಶುತೋಷ್ ಶರ್ಮಾ ಎದುರಿಸಿದ ಮೊದಲ 20 ಎಸೆತಗಳಲ್ಲಿ ಕಲೆಹಾಕಿದ್ದು 20 ರನ್​ಗಳು ಮಾತ್ರ. ಆ ಬಳಿಕ ಎದುರಿಸಿದ 11 ಎಸೆತಗಳಲ್ಲಿ 46 ರನ್​ ಚಚ್ಚಿದರು. ಈ ಮೂಲಕ 31 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಡೆಲ್ಲಿ ಕ್ಯಾಪಿಟಲ್ಸ್ ಜಯಭೇರಿ:

ಡೆಲ್ಲಿ ಪಡೆಗೆ ಐತಿಹಾಸಿಕ ಜಯ:

2008 ರಿಂದ ಐಪಿಎಲ್​ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ (ಡೆಲ್ಲಿ ಡೇರ್​ ಡೆವಿಲ್ಸ್) ತಂಡವು 200+ ರನ್ ಚೇಸ್ ಮಾಡಿ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದಕ್ಕೂ ಮುನ್ನ ಭರ್ಜರಿ ಗೆಲುವು ದಾಖಲಿಸಿದ್ದು 2017 ರಲ್ಲಿ.

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 209 ರನ್​ಗಳನ್ನು ಬೆನ್ನತ್ತುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಶ್ರೇಷ್ಠ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಡಿಸಿ ಪಡೆ ಅಮೋಘ ಗೆಲುವು ದಾಖಲಿಸಿರಲಿಲ್ಲ. ಆದರೆ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ 210 ರನ್​ಗಳನ್ನು ಬೆನ್ನತ್ತಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ