AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಎಳೆದ ವೃತ್ತದಲ್ಲಿ ಸಿಲುಕಿ ಸೋತು ಸುಣ್ಣವಾದ ಡೆಲ್ಲಿ ಕ್ಯಾಪಿಟಲ್ಸ್​

KL Rahul: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ವೃತ್ತ ಎಳೆದು ಸಂಭ್ರಮಿಸಿದ ಕೆಎಲ್ ರಾಹುಲ್ ವಿರುದ್ಧ ಆರ್​ಸಿಬಿಯ ಕೆಲ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳನ್ನು ಹೊರಹಾಕಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇಆಫ್ ರೇಸ್​ನಿಂದ ಸೋಲುತ್ತಿದ್ದಂತೆ ರಾಹುಲ್ ಬರೆದ ವೃತ್ತದಲ್ಲಿ ಸಿಲುಕಿ ಸೋತು ಸುಣ್ಣವಾದ ಡೆಲ್ಲಿ ಕ್ಯಾಪಿಟಲ್ಸ್ ಎಂದು ಟ್ರೋಲ್ ಮಾಡಲಾಗುತ್ತಿದೆ.

ಕೆಎಲ್ ರಾಹುಲ್ ಎಳೆದ ವೃತ್ತದಲ್ಲಿ ಸಿಲುಕಿ ಸೋತು ಸುಣ್ಣವಾದ ಡೆಲ್ಲಿ ಕ್ಯಾಪಿಟಲ್ಸ್​
Kl Rahul
ಝಾಹಿರ್ ಯೂಸುಫ್
|

Updated on: May 22, 2025 | 9:55 AM

Share

IPL 2025: ಐಪಿಎಲ್​ ಸೀಸನ್-18ರ ಪ್ಲೇಆಫ್ ರೇಸ್​ನಿಂದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಹೊರಬಿದ್ದಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸುವ ಮೂಲಕ. ಈ ಸೋಲುಗಳ ನಡುವೆ ಡೆಲ್ಲಿ ಪಡೆಗೆ ಪ್ಲೇಆಫ್​ಗೆ ಪ್ರವೇಶಿಸಲು ಉತ್ತಮ ಅವಕಾಶವಿತ್ತು. ಈ ಅವಕಾಶ ಒದಗಿ ಬಂದಿದ್ದು ಮೊದಲ ಸುತ್ತಿನ ಪಂದ್ಯಗಳ ಜಯದಿಂದ ಎಂಬುದು ವಿಶೇಷ.

ಅಂದರೆ ಈ ಬಾರಿಯ ಐಪಿಎಲ್​ನ ಮೊದಲ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 5 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿತ್ತು. ಅದರಲ್ಲೂ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಡೆಲ್ಲಿ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಶುರುವಾಗಿದ್ದು, ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಎಂಬುದು ವಿಶೇಷ.

ವೃತ್ತ ಬರೆದ ಕೆಎಲ್ ರಾಹುಲ್:

ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಕನ್ನಡಿಗ ಕೆಎಲ್ ರಾಹುಲ್ ಕಾಂತಾರ ಶೈಲಿಯಲ್ಲಿ ವೃತ್ತ ಎಳೆದು ಸಂಭ್ರಮಿಸಿದ್ದರು. ಕಾಕತಾಳೀಯ ಎಂಬಂತೆ ಈ ವೃತ್ತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೋಲಿನ ಸುಳಿಗೆ ಸಿಲುಕಿತು.

ಕೆಎಲ್ ರಾಹುಲ್ ಕಾಂತಾರ ಸೆಲೆಬ್ರೇಷನ್ ವಿಡಿಯೋ:

ಏಕೆಂದರೆ ಆ ಬಳಿಕ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 12 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವನ್ನು ಟೈ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಅತ್ತ ಆರ್​ಆರ್ ಪಡೆ ಮಾಡಿದ ತಪ್ಪಿನಿಂದಾಗಿ ಸೂಪರ್ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಜಯ ದಕ್ಕಿತು ಎಂದರೆ ತಪ್ಪಾಗಲಾರದು.

ಇದಾದ ಬಳಿಕ ಗುಜರಾತ್ ಟೈಟಾನ್ಸ್ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಲಕ್ನೋ ಸೂಪರ್ ಜೈಂಟ್ಸ್ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಆ ಬಳಿಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗಳ ಹೀನಾಯ ಸೋಲು, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 14 ರನ್​ಗಳ ಸೋಲು, ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ರದ್ದು. ಗುಜರಾತ್ ಟೈಟಾನ್ಸ್ ವಿರುದ್ಧ 10 ವಿಕೆಟ್​ಗಳಿಂದ ಹೀನಾಯ ಸೋಲು.

ಹೀಗೆ ಸತತ ಪರಾಜಯಗಳೊಂದಿಗೆ ಕಂಗೆಟ್ಟ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಅವಕಾಶವಿತ್ತು. ಆದರೆ ಮುಂಬೈ ವಿರುದ್ಧ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ 59 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಅಂದರೆ ಇಲ್ಲಿ ಮೊದಲ ಸುತ್ತಿನ 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ 10 ಅಂಕಗಳನ್ನು ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಆ ಬಳಿಕ ಕಣಕ್ಕಿಳಿದ 6 ಮ್ಯಾಚ್​ಗಳಿಂದ ಪಡೆದಿರುವುದು ಕೇವಲ 3 ಪಾಯಿಂಟ್ಸ್ ಮಾತ್ರ.

ಇದನ್ನೂ ಓದಿ: VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ

ಅತ್ತ ಕೆಎಲ್ ರಾಹುಲ್ ಅವರ ಕಾಂತಾರ ಸೆಲೆಬ್ರೇಷನ್ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿರುವುದು 2 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ ಪಂದ್ಯಗಳಲ್ಲಿ ಸೋಲುವ ಮೂಲಕ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿಯೇ ರಾಹುಲ್ ಎಳೆದದ್ದು ವೃತ್ತ ಅಲ್ಲ, ಅದು ಸೋಲಿನ ಸುಳಿ ಎಂದು ಟ್ರೋಲ್ ಮಾಡಲಾಗುತ್ತಿದೆ.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ