AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಡೆಲ್ಲಿ ಬಾಯ್ಸ್ ಫೈಟ್: ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ ದಿಗ್ವೇಶ್​​ಗೆ ದಂಡ

IPL 2025 LSG vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ದಾಂಡಿಗ ಪ್ರಭ್​ಸಿಮ್ರಾನ್ ಸಿಂಗ್ ಕೇವಲ 34 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 69 ರನ್ ಬಾರಿಸಿದರು.

VIDEO: ಡೆಲ್ಲಿ ಬಾಯ್ಸ್ ಫೈಟ್: ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ ದಿಗ್ವೇಶ್​​ಗೆ ದಂಡ
Digvesh Rathi - Priyansh
ಝಾಹಿರ್ ಯೂಸುಫ್
|

Updated on:Apr 02, 2025 | 8:14 AM

Share

IPL 2025: ಐಪಿಎಲ್​ ಅಂಗಳದಲ್ಲಿ ಡೆಲ್ಲಿ ಬಾಯ್ಸ್ ಫೈಟ್ ಮುಂದುವರೆದಿದೆ. ಈ ಹಿಂದೆ ದೆಹಲಿ ಮೂಲದ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಕಿತ್ತಾಟಕ್ಕೆ ಐಪಿಎಲ್ ಸಾಕ್ಷಿಯಾಗಿತ್ತು. ಇದಾದ ಬಳಿಕ ದೆಹಲಿಯವರಾದ ನಿತೀಶ್ ರಾಣಾ ಹಾಗೂ ಹೃತಿಕ್ ಶೊಕೀನ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ದಿಗ್ವೇಶ್ ರಾಠಿ ಹಾಗೂ ಪ್ರಿಯಾಂಶ್ ಆರ್ಯ.

ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ರಾಠಿ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದಾರೆ. ವೆಸ್ಟ್ ಇಂಡೀಸ್​ನ ಕೆಸ್ರಿಕ್ ವಿಲಿಯಮ್ಸ್ ಶುರು ಮಾಡಿದ್ದ ಈ ಸೆಲೆಬ್ರೇಷನ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದೆ. ದೆಹಲಿ ರಾಜ್ಯದ ತಂಡದ ತನ್ನ ಸಹ ಆಟಗಾರನನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ಮಾಡಿದ ಈ ಸಂಭ್ರಮಾಚರಣೆಗೆ ಇದೀಗ ದಂಡದ ಬರೆ ಬಿದ್ದಿದೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಐಪಿಎಲ್​ನ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದಕ್ಕಾಗಿ ದಿಗ್ವೇಶ್ ರಾಠಿಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ಸಹ ನೀಡಲಾಗಿದೆ.

ಸದ್ಯ ಒಂದು ಡಿಮೆರಿಟ್ ಪಾಯಿಂಟ್ ಪಡೆದಿರುವ ದಿದಿಗ್ವೇಶ್ ರಾಠಿಗೆ ಮೂರು ವರ್ಷದೊಳಗೆ 4 ಡಿಮೆರಿಟ್ ಪಾಯಿಂಟ್ ಪಡೆದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ.

ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತಿದ್ದು, ಈ ಪಾಯಿಂಟ್ಸ್ ಮುಂದಿನ ಮೂರು ವರ್ಷಗಳವರೆಗೆ ಚಾಲ್ತಿಯಲ್ಲಿರಲಿದೆ. ಇಂತಹದೊಂದು ನಿಯಮವನ್ನು ಪರಿಚಯಿಸುವ ಮೂಲಕ ಐಪಿಎಲ್ ಗರ್ವನರ್ ಕಮಿಟಿ ಆಟಗಾರರಲ್ಲಿ ಶಿಸ್ತು ಮೂಡಿಸಲು ಮುಂದಾಗಿದೆ.

ದಿಗ್ವೇಶ್ ರಾಠಿ ನೋಟ್​ಬುಕ್ ಸೆಲೆಬ್ರೇಷನ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ದಾಂಡಿಗ ಪ್ರಭ್​ಸಿಮ್ರಾನ್ ಸಿಂಗ್ ಕೇವಲ 34 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 69 ರನ್ ಬಾರಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 52 ರನ್ ಚಚ್ಚಿದರು. ಈ ಮೂಲಕ 16.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿತು.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಮಿಚೆಲ್ ಮಾರ್ಷ್ , ಐಡೆನ್ ಮಾರ್ಕ್ರಾಮ್ , ನಿಕೋಲಸ್ ಪೂರನ್ , ರಿಷಭ್ ಪಂತ್ (ನಾಯಕ) , ಆಯುಷ್ ಬದೋನಿ , ಡೇವಿಡ್ ಮಿಲ್ಲರ್ , ಅಬ್ದುಲ್ ಸಮದ್ , ದಿಗ್ವೇಶ್ ಸಿಂಗ್ ರಾಠಿ , ಶಾರ್ದೂಲ್ ಠಾಕೂರ್ , ಅವೇಶ್ ಖಾನ್ , ರವಿ ಬಿಷ್ಣೋಯ್.

ಇದನ್ನೂ ಓದಿ: IPL 2025: ಬ್ಯಾನ್ ಬ್ಯಾನ್ ಬ್ಯಾನ್… ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ) , ಶಶಾಂಕ್ ಸಿಂಗ್ , ಮಾರ್ಕಸ್ ಸ್ಟೋನಿಸ್ , ಗ್ಲೆನ್ ಮ್ಯಾಕ್ಸ್ ವೆಲ್ , ಸೂರ್ಯಾಂಶ್ ಶೆಡ್ಜ್ , ಮಾರ್ಕೊ ಯಾನ್ಸೆನ್ , ಲಾಕಿ ಫರ್ಗುಸನ್ , ಯುಜ್ವೇಂದ್ರ ಚಹಲ್ , ಅರ್ಷದೀಪ್ ಸಿಂಗ್.

Published On - 7:40 am, Wed, 2 April 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?