AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ವಿರುದ್ಧ ಸೋಲು, ಪಿಚ್​ ಬದಲಿಸಲು KKR ಪಟ್ಟು

IPL 2025 KKR: ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ತವರಿನಲ್ಲಿ 7 ಪಂದ್ಯಗಳನ್ನಾಡಲಿದೆ. ಅಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲೀಗ್ ಹಂತದಲ್ಲಿ ಏಳು ಪಂದ್ಯಗಳಲ್ಲಿ ಕಣಕ್ಕಿಳಿಯಬೇಕಿದೆ. ಆದರೆ ಮೊದಲ ಪಂದ್ಯದಲ್ಲೇ ತವರಿನಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ಪಿಚ್​ ಬಗ್ಗೆ ಅಪಸ್ವರ ಎತ್ತಿದ್ದಾರೆ.

IPL 2025: RCB ವಿರುದ್ಧ ಸೋಲು, ಪಿಚ್​ ಬದಲಿಸಲು KKR ಪಟ್ಟು
Kkr Vs Rcb
ಝಾಹಿರ್ ಯೂಸುಫ್
|

Updated on: Mar 26, 2025 | 9:31 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು  ಭಾರೀ ಮುಖಭಂಗಕ್ಕೊಳಗಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಪಿಚ್ ಬಗ್ಗೆ ಅಪಸ್ವರ ಎತ್ತಿದ್ದಾರೆ.

ಪಿಚ್ ಬದಲಿಸಲು ಒತ್ತಾಯ:

ಆರ್​ಸಿಬಿ ವಿರುದ್ಧದ ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ, ‘ಸ್ಪಿನ್ ಬೌಲರ್‌ಗಳಿಗೆ ಸಹಾಯಕವಾಗುವಂತಹ ಪಿಚ್ ನಮಗೆ ಬೇಕು. ಆದರೆ ಈ ಪಿಚ್​ ಕಳೆದ ಒಂದೂವರೆ ದಿನಗಳಿಂದ ಮುಚ್ಚಿಡಲಾಗಿತ್ತು ಎಂದಿದ್ದರು.

ಅಲ್ಲದೆ ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿಯಂತಹ ಗುಣಮಟ್ಟದ ಸ್ಪಿನ್ನರ್‌ಗಳಿದ್ದಾರೆ. ಅವರು ಯಾವುದೇ ಪಿಚ್‌ನಲ್ಲಿ ಬೌಲಿಂಗ್ ಮಾಡಬಲ್ಲರು. ಇದಾಗ್ಯೂ ನಮಗೆ ತವರು ಮೈದಾನವು ಸಹಾಯಕವಾಗಬೇಕೆಂದು ರಹಾನೆ ಆಗ್ರಹಿಸಿದ್ದರು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಪಿಚ್ ಬದಲಾವಣೆಗೆ ನಕಾರ:

ಐಪಿಎಲ್ ನಿಯಮಗಳ ಪ್ರಕಾರ, ಫ್ರಾಂಚೈಸಿಗಳು ಪಿಚ್‌ನಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಾನು ಕ್ಯುರೇಟರ್ ಆಗಿದ್ದಾಗಿನಿಂದ ಈಡನ್ ಗಾರ್ಡನ್ಸ್ ಮೈದಾನದ ಪಿಚ್ ಒಂದೇ ಆಗಿದೆ. ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಕ್ಯುರೇಟರ್ ಸುಜನ್ ಮುಖರ್ಜಿ ತಿಳಿಸಿದ್ದಾರೆ.

ಏಕೆಂದರೆ ಆರ್​ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯದಲ್ಲಿ ಕೃನಾಲ್ ಪಾಂಡ್ಯ (3 ವಿಕೆಟ್) ಮತ್ತು ಸುಯಾಶ್ ಶರ್ಮಾ (1 ವಿಕೆಟ್) ವಿಕೆಟ್ ಕಬಳಿಸಿದ್ದರು. ಹಾಗೆಯೇ ಕೆಕೆಆರ್ ಪರ ವರುಣ್ ಚಕ್ರವರ್ತಿ (1 ವಿಕೆಟ್) ಹಾಗೂ ಸುನಿಲ್ ನರೈನ್ (1 ವಿಕೆಟ್)  ಸಹ  ವಿಕೆಟ್ ಪಡೆದಿದ್ದರು. ಈ ಪಿಚ್ ಸ್ಪಿನ್ ಸ್ನೇಹಿಯಾಗಿಲ್ಲದಿದ್ದರೆ, ಆರ್​ಸಿಬಿ ಬೌಲರ್​ಗಳು 4 ವಿಕೆಟ್ ಪಡೆದಿರುವುದು ಹೇಗೆ? ಸುಜನ್ ಮುಖರ್ಜಿ ಪ್ರಶ್ನಿಸಿದ್ದಾರೆ.

10 ವರ್ಷದಿಂದ ಒಂದೇ ಪಿಚ್:

2015 ರಲ್ಲಿ ಸೌರವ್ ಗಂಗೂಲಿ ಅವರು ಸುಜನ್ ಮುಖರ್ಜಿ ಅವರನ್ನು ಈಡನ್ ಗಾರ್ಡನ್ಸ್​ ಕ್ರೀಡಾಂಗಣದ ಕ್ಯುರೇಟರ್ ಆಗಿ ನೇಮಿಸಿದರು. ಅಂದಿನಿಂದ ಇಲ್ಲಿನ ಪಿಚ್ ಸಮತೋಲಿತ ಮತ್ತು ಕ್ರೀಡಾಭರಿತವಾಗಿದೆ.

ಇದಾಗ್ಯೂ 2023 ರಲ್ಲಿ ಕೆಕೆಆರ್ ತಂಡಕ್ಕೆ ‘ಹೋಮ್ ಅಡ್ವಾಂಟೇಜ್’ ಸಿಗಲಿಲ್ಲ ಎಂದು ಅಂದಿನ ನಾಯಕ ನಿತೀಶ್ ರಾಣಾ ದೂರಿದ್ದರು. ಆದರೆ 2024 ರಲ್ಲಿ ಕೆಕೆಆರ್ ತಂಡವು ತವರಿನಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ಹೀಗಾಗಿ ಪಿಚ್ ಬಗ್ಗೆ ಯಾವುದೇ ತಕರಾರು ಇರಲಿಲ್ಲ.

ಇದನ್ನೂ ಓದಿ: David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಸೋಲಿನ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪಿಚ್ ಬದಲಿಸಬೇಕೆಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗೆ ಕೊಲ್ಕತ್ತಾ ಕ್ರಿಕೆಟ್ ಬೋರ್ಡ್​ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ