AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು ಈಗ ಉಲ್ಟಾ ಪಲ್ಟಾ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗೆ ತೆರೆಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ಆರ್​ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ.

RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು ಈಗ ಉಲ್ಟಾ ಪಲ್ಟಾ
Ambati Rayudu
ಝಾಹಿರ್ ಯೂಸುಫ್
|

Updated on:Jun 04, 2025 | 12:55 PM

Share

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಪ್ ಗೆಲ್ಲಬಾರದು ಎಂದಿದ್ದ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಇದೀಗ ಯೂ ಟರ್ನ್ ಹೊಡೆದಿದ್ದಾರೆ. ಅದು ಸಹ ಚಾಂಪಿಯನ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆ ಸಲ್ಲಿಸುವ ಮೂಲಕ ಎಂಬುದು ವಿಶೇಷ.

ಐಪಿಎಲ್ ಆರಂಭಕ್ಕೂ ಮುನ್ನ ಅಂಬಾಟಿ ರಾಯುಡು ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲಬಾರದು ಎಂದಿದ್ದರು. ಎಸ್ ಬ್ರದಿನಾಥ್ ನಡೆಸಿದ ಚಿಟ್​ ಚಾಟ್​ನಲ್ಲಿ ಕಾಣಿಸಿಕೊಂಡಿದ್ದ ರಾಯುಡುಗೆ ಈ ಬಾರಿಯಾದರೂ ಆರ್​ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು.

ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್​ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು. ಅಲ್ಲದೆ ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.

ಇದಕ್ಕೂ ಮುನ್ನ ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದಿದ್ದರು.

ಆದರೆ ಅಂಬಾಟಿ ರಾಯುಡು ಅವರ ಪ್ರಾರ್ಥನೆ ಫಲಿಸಲಿಲ್ಲ. ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ದಾಖಲಿಸಿದೆ.

ಇದನ್ನೂ ಓದಿ: IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

ಈ ಗೆಲುವಿನ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ RCB ತಂಡಕ್ಕೆ ಅಭಿನಂದನೆ ಸಲ್ಲಿಸಿ ಅಂಬಾಟಿ ರಾಯುಡು ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

ಕೊನೆಗೂ! ಆರ್‌ಸಿಬಿ ಮತ್ತು ಅವರ ಅದ್ಭುತ ತಂಡ ಮತ್ತು ಅಭಿಮಾನಿಗಳಿಗೆ ತುಂಬಾ ಸಂತೋಷವಾಗಿದೆ.. ನಿಜವಾಗಿಯೂ ಅದಕ್ಕೆ ನೀವು ಅರ್ಹರು ಎಂದು ಚಾಂಪಿಯನ್ ಪಟ್ಟ ಅಲಂಕರಿಸಿ ಆರ್​ಸಿಬಿ ತಂಡಕ್ಕೆ ಅಂಬಾಟಿ ರಾಯುಡು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Published On - 12:53 pm, Wed, 4 June 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ