AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಒಂದು ವಿಷಯದಲ್ಲಿ RCB ಗಿಂತ ಮುಂದಿದೆ ಪಂಜಾಬ್ ಕಿಂಗ್ಸ್

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ. ಈ ಬಾರಿಯ ಐಪಿಎಲ್​ನಲ್ಲಿ ಉಭಯ ತಂಡಗಳು ಮೂರು ಬಾರಿ ಮೂಖಾಮುಖಿಯಾಗಿದ್ದು, ಈ ವೇಳೆ 2 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆಲುವು ದಾಖಲಿಸಿದೆ. ಇದಾಗ್ಯೂ ಅಹಮದಾಬಾದ್​​​ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನ ನೀಡಿದ ಇತಿಹಾಸವಿದೆ.

IPL 2025: ಈ ಒಂದು ವಿಷಯದಲ್ಲಿ RCB ಗಿಂತ ಮುಂದಿದೆ ಪಂಜಾಬ್ ಕಿಂಗ್ಸ್
Rcb Vs Pbks
ಝಾಹಿರ್ ಯೂಸುಫ್
|

Updated on: Jun 03, 2025 | 11:54 AM

Share

IPL 2025: ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ತಂಡ ಗುರುತಿಸಿಕೊಂಡರೂ, ಈ ಒಂದು ವಿಷಯದಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 5 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಸೋಲನುಭವಿಸಿದೆ.

ಇದೇ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ವೇಳೆ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, 2 ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ.

ಇನ್ನು ಅಹಮದಾಬಾದ್​ ಪಿಚ್​ನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಒಮ್ಮೆ ಮಾತ್ರ ಮುಖಾಮುಖಿಯಾಗಿದೆ. 2021ರ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಪಂಜಾಬ್ ಕಿಂಗ್ಸ್​ 34 ರನ್​ಗಳಿಂದ ಸೋಲಿಸಿತ್ತು.

ಈ ಮೇಲಿನ ಅಂಕಿ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡರೆ, ಅಹಮದಾಬಾದ್​ ಪಿಚ್​ನಲ್ಲಿ ಪಂಜಾಬ್ ಕಿಂಗ್ಸ್​ ಮೇಲುಗೈ ಹೊಂದಿರುವುದು ಸ್ಪಷ್ಟ. ಅದರಲ್ಲೂ ಈ ಹಿಂದೆ ಆರ್​ಸಿಬಿ ತಂಡಕ್ಕೆ ಸೋಲುಣಿಸಿದ ಇತಿಹಾಸವನ್ನು ಸಹ ಹೊಂದಿದ್ದಾರೆ.

ಹೀಗಾಗಿ ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುತಿಸಿಕೊಂಡರೂ, ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್, ಬ್ಲೆಸಿಂಗ್ ಮುಝರಬಾನಿ.

ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್

ಪಂಜಾಬ್ ಕಿಂಗ್ಸ್ ತಂಡ: ಪ್ರಿಯಾಂಶ್ ಆರ್ಯ, ಪ್ರಭ್​ಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋನಿಸ್, ಅಝ್ಮತುಲ್ಲಾ ಒಮರ್​ಝಾಹಿ, ಕೈಲ್ ಜೇಮಿಸನ್, ವಿಜಯ್‌ಕುಮಾರ್ ವೈಶಾಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಹರ್​​ಪ್ರೀತ್ ಬ್ರಾರ್, ಸೂರ್ಯಂಶ್ ಶೆಡ್ಗೆ, ಪ್ರವೀಣ್ ದುಬೆ, ಕ್ಸೇವಿಯರ್ ಬಾರ್ಟ್ಲೆಟ್, ವಿಷ್ಣು ವಿನೋದ್, ಯಶ್ ಠಾಕೂರ್, ಆರೋನ್ ಹಾರ್ಡಿ, ಕುಲದೀಪ್ ಸೇನ್, ಮಿಚೆಲ್ ಓವನ್, ಹರ್ನೂರ್ ಸಿಂಗ್, ಮುಶೀರ್ ಖಾನ್, ಪೈಲಾ ಅವಿನಾಶ್.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ