AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಯಾವ ತಂಡದಿಂದ ಎಷ್ಟು ವಿದೇಶಿ ಆಟಗಾರರು ತಾಯ್ನಾಡಿಗೆ ಮರಳಲಿದ್ದಾರೆ?

IPL 2025 Suspended: ಪಾಕಿಸ್ತಾನದಿಂದ ಭಾರತದ ಮೇಲೆ ನಡೆದ ಕ್ಷಿಪಣಿ ದಾಳಿಯಿಂದಾಗಿ ಐಪಿಎಲ್ 2025ರ ಉಳಿದ ಪಂದ್ಯಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಘಟನೆಯಿಂದಾಗಿ ಹಲವಾರು ವಿದೇಶಿ ಆಟಗಾರರು ಭಯಭೀತರಾಗಿ ತಮ್ಮ ದೇಶಕ್ಕೆ ಮರಳಲು ನಿರ್ಧರಿಸಿದ್ದಾರೆ. ಬಿಸಿಸಿಐ ಅವರ ಸುರಕ್ಷಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡುತ್ತಿದೆ. ವಿವಿಧ ತಂಡಗಳಿಂದ ಹಲವಾರು ಆಟಗಾರರು ಭಾರತ ತೊರೆಯುತ್ತಿದ್ದಾರೆ .

IPL 2025: ಯಾವ ತಂಡದಿಂದ ಎಷ್ಟು ವಿದೇಶಿ ಆಟಗಾರರು ತಾಯ್ನಾಡಿಗೆ ಮರಳಲಿದ್ದಾರೆ?
Ipl 2025
Follow us
ಪೃಥ್ವಿಶಂಕರ
|

Updated on:May 09, 2025 | 6:20 PM

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೇ 8 ರಂದು ಪಾಕಿಸ್ತಾನವು ಭಾರತದ ಹಲವಾರು ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಮತ್ತು ಡ್ರೋನ್‌ಗಳ ಮೂಲಕ ದಾಳಿ ಮಾಡಿತು. ಭಾರತೀಯ ಸೇನೆಯ ರಕ್ಷಣಾ ವ್ಯವಸ್ಥೆಯು ಎಲ್ಲಾ ದಾಳಿಗಳನ್ನು ವಿಫಲಗೊಳಿಸಿತು. ಇದೀಗ ಈ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ (BCCI) ಐಪಿಎಲ್ 2025 (IPL 2025) ರ ಉಳಿದ ಪಂದ್ಯಗಳನ್ನು ಒಂದು ವಾರ ಸ್ಥಗಿತಗೊಳಿಸಿದೆ. ಮತ್ತೊಂದೆಡೆ, ಯುದ್ಧದಂತಹ ಪರಿಸ್ಥಿತಿ ಮತ್ತು ಭಾರತದ ಮೇಲಿನ ದಾಳಿಯನ್ನು ನೋಡಿ ವಿದೇಶಿ ಆಟಗಾರರು ಭಯಭೀತರಾಗಿದ್ದು, ಆದಷ್ಟು ಬೇಗ ತನ್ನ ದೇಶಕ್ಕೆ ಮರಳಲು ಮುಂದಾಗಿದ್ದಾರೆ. ಹೀಗಾಗಿ ಯಾವ ತಂಡದಿಂದ ಎಷ್ಟು ಆಟಗಾರರು ಭಾರತ ತೊರೆಯಲಿದ್ದಾರೆ ಎಂಬುದರ ವಿವರ ಇಲ್ಲಿದೆ.

ಭಾರತ ತೊರೆಯಲಿರುವ ವಿದೇಶಿ ಆಟಗಾರರು

ಭಾರತದ ಮೇಲೆ ಪಾಕಿಸ್ತಾನ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಏತನ್ಮಧ್ಯೆ, ಒಂದೆಡೆ ವಿದೇಶಿ ಆಟಗಾರರು ಭಾರತವನ್ನು ತೊರೆಯಲು ಬಯಸಿದರೆ, ಮತ್ತೊಂದೆಡೆ, ಬಿಸಿಸಿಐ ಅವರನ್ನು ಸುರಕ್ಷಿತವಾಗಿ ತಮ್ಮ ದೇಶಕ್ಕೆ ಕಳುಹಿಸಲು ಪ್ರಯತ್ನಿಸುತ್ತಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ದೃಷ್ಟಿಯಿಂದ, ಸನ್‌ರೈಸರ್ಸ್ ಹೈದರಾಬಾದ್‌ನ ನಾಯಕ ಪ್ಯಾಟ್ ಕಮ್ಮಿನ್ಸ್, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಇಶಾನ್ ಮಾಲಿಂಗ, ಬ್ರೈಡನ್ ಕಾರ್ಸೆ ಮತ್ತು ಕಾಮಿಂದು ಮೆಂಡಿಸ್ ಸೇರಿದಂತೆ 6 ಆಟಗಾರರು ದೇಶವನ್ನು ತೊರೆಯಲಿದ್ದಾರೆ. ಅದೇ ಸಮಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್‌ನ 8 ಆಟಗಾರರಾದ ಕ್ವಿಂಟನ್ ಡಿ ಕಾಕ್, ರಹಮಾನಲ್ಲಾ ಗುರ್ಬಾಜ್, ಸುನಿಲ್ ನರೈನ್, ಆಂಡ್ರೆ ರಸೆಲ್, ರೋವ್‌ಮನ್ ಪೊವೆಲ್, ಮೊಯಿನ್ ಅಲಿ, ಅನ್ರಿಕ್ ನೋಕಿಯಾ ಮತ್ತು ಸ್ಪೆನ್ಸರ್ ಜಾನ್ಸನ್ ಕೂಡ ಭಾರತವನ್ನು ತೊರೆಯಲಿದ್ದಾರೆ. ಪಂಜಾಬ್ ಕಿಂಗ್ಸ್‌ ತಂಡದ 7 ಆಟಗಾರರಾದ, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಉಮರ್ಜೈ, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಆರನ್ ಹಾರ್ಡಿ ಕೂಡ ಈ ಪಟ್ಟಿಯಲ್ಲಿದ್ದಾರೆ.

ಟ್ರಿಸ್ಟಾನ್ ಸ್ಟಬ್ಸ್, ಮಿಚೆಲ್ ಸ್ಟಾರ್ಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ ಮತ್ತು ಸೆಡಿಕುಲ್ಲಾ ಅಟಲ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಭಾರತವನ್ನು ತೊರೆಯಲಿದ್ದಾರೆ. ಇವರಲ್ಲದೆ, ಜೋಸ್ ಬಟ್ಲರ್, ರಶೀದ್ ಖಾನ್, ಜೆರಾಲ್ಡ್ ಕೋಟ್ಜೀ, ಶರ್ಫಾನ್ ರುದರ್ಫೋರ್ಡ್, ಕರೀಮ್ ಜನತ್ ಮತ್ತು ದಾಸುನ್ ಶನಕ ಗುಜರಾತ್ ಟೈಟಾನ್ಸ್‌ ತಂಡದಿಂದ ತಮ್ಮ ದೇಶಗಳಿಗೆ ಮರಳಲಿದ್ದಾರೆ.

ಮುಂಬೈ ಇಂಡಿಯನ್ಸ್ ವೇಗಿ ಟ್ರೆಂಟ್ ಬೌಲ್ಟ್ ಸೇರಿದಂತೆ ಒಟ್ಟು 9 ಆಟಗಾರರನ್ನು ಅವರ ಮನೆಗಳಿಗೆ ಕಳುಹಿಸಲು ಬಿಸಿಸಿಐ ವ್ಯವಸ್ಥೆ ಮಾಡಲಿದೆ. ಇವರಲ್ಲಿ ರಯಾನ್ ರಿಕಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ರೀಸ್ ಟೋಪ್ಲಿ, ಕಾರ್ಬಿನ್ ಬಾಷ್, ಮುಜೀಬ್ ಉರ್ ರೆಹಮಾನ್ ಮತ್ತು ಬೆವನ್ ಜೇಕಬ್ಸ್ ಅವರ ಹೆಸರುಗಳೂ ಸೇರಿವೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್‌ನಿಂದ ಮಥಿಷಾ ಪತಿರಾನ, ನೂರ್ ಅಹ್ಮದ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಸ್ಯಾಮ್ ಕರನ್, ನಾಥನ್ ಎಲ್ಲಿಸ್, ಜೇಮೀ ಓವರ್ಟನ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಭಾರತದಿಂದ ಸುರಕ್ಷಿತವಾಗಿ ಕರೆದೊಯ್ಯಲಾಗುವುದು.

IPL 2025: ಒಂದು ವಾರ ಐಪಿಎಲ್ ಸ್ಥಗಿತ; ಬಿಸಿಸಿಐ ಅಧಿಕೃತ ಆದೇಶ

ಆರ್​ಸಿಬಿಯ 9 ಆಟಗಾರರು ತವರಿಗೆ

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಬಗ್ಗೆ ಹೇಳುವುದಾದರೆ, ಜಾಕೋಬ್ ಬೆಥೆಲ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್ ಮತ್ತು ನುವಾನ್ ತುಷಾರ ಸೇರಿದಂತೆ ಒಟ್ಟು 9 ಆಟಗಾರರು ಇದರಲ್ಲಿ ಸೇರಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್‌ನ ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ಬ್ರೀಟ್ಜ್ಕೆ ಮತ್ತು ಶಮರ್ ಜೋಸೆಫ್ ಕೂಡ ತಮ್ಮ ದೇಶಗಳಿಗೆ ಮರಳಲಿದ್ದಾರೆ. ಇವರಲ್ಲದೆ, ಈ ಎಲ್ಲಾ 10 ತಂಡಗಳಲ್ಲಿರುವ ವಿದೇಶಿ ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಸಹ ಅವರ ದೇಶಗಳಿಗೆ ಕಳುಹಿಸಲಾಗುತ್ತದೆ. ಇದರಲ್ಲಿ ಜಸ್ಟಿನ್ ಲ್ಯಾಂಗರ್, ರಿಕಿ ಪಾಂಟಿಂಗ್, ಬ್ರಾಡ್ ಹ್ಯಾಡಿನ್ ಮತ್ತು ಆಂಡಿ ಫ್ಲವರ್ ಸೇರಿದಂತೆ ಅನೇಕ ದೊಡ್ಡ ಹೆಸರುಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Fri, 9 May 25

ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ