AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಗ್ಲೆನ್ ಮ್ಯಾಕ್ಸ್​ವೆಲ್​ಗೆ ಶೇ.25 ರಷ್ಟು ದಂಡ, ಒಂದು ಪಾಯಿಂಟ್

IPL 2025 PBKS vs CSK: ಚಂಡೀಗಢ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 219 ರನ್ ಕಲೆಹಾಕಿದರೆ, ಈ ಗುರಿಯನ್ನು ಚೇಸ್ ಮಾಡಿದ ಸಿಎಸ್​ಕೆ 201 ರನ್​ ಮಾತ್ರ ಗಳಿಸಿತು.

Glenn Maxwell: ಗ್ಲೆನ್ ಮ್ಯಾಕ್ಸ್​ವೆಲ್​ಗೆ ಶೇ.25 ರಷ್ಟು ದಂಡ, ಒಂದು ಪಾಯಿಂಟ್
Glenn Maxwell
ಝಾಹಿರ್ ಯೂಸುಫ್
|

Updated on: Apr 09, 2025 | 8:23 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 22ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರ ವರ್ತನೆಗೆ ಮ್ಯಾಚ್ ರೆಫರಿ ದಂಡದ ಶಿಕ್ಷೆ ವಿಧಿಸಿದ್ದಾರೆ. ಈ ಪಂದ್ಯದ ವೇಳೆ ಅನುಚಿತವಾಗಿ ವರ್ತಿಸಿದ್ದ ಮ್ಯಾಕ್ಸ್​ವೆಲ್​ಗೆ  ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಿದ್ದಾರೆ.

ಐಪಿಎಲ್ ಬಿಡುಗಡೆ ಮಾಡಿದ ಮಾಧ್ಯಮ ವರದಿ ಪ್ರಕಾರ, ಪಂದ್ಯದ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮ್ಯಾಕ್ಸ್‌ವೆಲ್ ಈ ಶಿಕ್ಷೆಯನ್ನು ನೀಡಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮ್ಯಾಕ್ಸಿ ಕೆಲ ನಿಯಮಗಳನ್ನು ಉಲ್ಲಂಘಿಸಿದ್ದ್ದು, ಹೀಗಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ಹಾಗೂ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿರುವುದಾಗಿ ತಿಳಿಸಿದ್ದಾರೆ.

ಈ ಘಟನೆಯ ನಂತರ, ಗ್ಲೆನ್ ಮ್ಯಾಕ್ಸ್‌ವೆಲ್ ಲೆವೆಲ್ 1 ಅಪರಾಧವನ್ನು ಮತ್ತು ನೀತಿ ಸಂಹಿತೆ 2.2 ಅನ್ನು ಉಲ್ಲಂಘಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಇದು ಪಂದ್ಯಗಳ ಸಮಯದಲ್ಲಿ ಫಿಕ್ಸ್ಚರ್‌ಗಳು ಮತ್ತು ಫಿಟ್ಟಿಂಗ್‌ಗಳ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದ್ದು, ಹೀಗಾಗಿ ಮ್ಯಾಚ್ ರೆಫರಿ ಮ್ಯಾಕ್ಸ್​ವೆಲ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇನ್ನು ಈ ಪಂದ್ಯದಲ್ಲೂ ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಕ್ಸ್​ವೆಲ್ ಅವರನ್ನು ಕೇವಲ 1 ರನ್​ಗೆ ಔಟ್ ಮಾಡುವಲ್ಲಿ ಸಿಎಸ್​ಕೆ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಯಶಸ್ವಿಯಾಗಿದ್ದರು. ಇದಾಗ್ಯೂ ಬೌಲಿಂಗ್ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಪಂಜಾಬ್ ಕಿಂಗ್ಸ್ ತಂಡದ ಗೆಲುವಿಗೆ ಕೊಡುಗೆ ನೀಡಿದ್ದಾರೆ.

ಎರಡು ಓವರ್​ಗಳನ್ನು ಎಸೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಕೇವಲ 11 ರನ್ ನೀಡುವ ಮೂಲಕ ರಚಿನ್ ರವೀಂದ್ರ ಅವರ ವಿಕೆಟ್ ಪಡೆದಿದ್ದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದರು.

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ, ಪಂಜಾಬ್ ಕಿಂಗ್ಸ್ ತಂಡವು ಸಿಎಸ್‌ಕೆ ತಂಡವನ್ನು 18 ರನ್‌ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ (103) ಭರ್ಜರಿ ಶತಕ ಸಿಡಿಸಿದ್ದರು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಈ  ಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 219 ರನ್ ಗಳಿಸಿತು . ಇದಕ್ಕೆ ಉತ್ತರವಾಗಿ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 201 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಸಿಎಸ್​ಕೆ ವಿರುದ್ಧ ಗೆಲುವು ದಾಖಲಿಸಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ