AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಅಶ್ಲೀಲವಾಗಿ ಬೈದ ಹಾರ್ದಿಕ್ ಪಾಂಡ್ಯ: ಜಿದ್ದಿಗೆ ನಿಂತ ಸಾಯಿ ಕಿಶೋರ್

Gujarat Titans vs Mumbai Indians: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಚೇಸಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಹಾಗೂ ಸಾಯಿ ಕಿಶೋರ್ ನಡುವೆ ಸಣ್ಣ ಕಿರಿಕ್ ಕೂಡ ನಡೆದಿದೆ.

VIDEO: ಅಶ್ಲೀಲವಾಗಿ ಬೈದ ಹಾರ್ದಿಕ್ ಪಾಂಡ್ಯ: ಜಿದ್ದಿಗೆ ನಿಂತ ಸಾಯಿ ಕಿಶೋರ್
Hardik Pandya - Sai Kishore
ಝಾಹಿರ್ ಯೂಸುಫ್
|

Updated on: Mar 30, 2025 | 7:32 AM

Share

IPL 2025″ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ಗುಜರಾತ್ ಟೈಟಾನ್ಸ್ ಸ್ಪಿನ್ನರ್ ಸಾಯಿ ಕಿಶೋರ್ (Sai Kishore) ನಡುವೆ ಜಿದ್ದಾಟ ಕಂಡು ಬಂದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ (63) ಅರ್ಧಶತಕ ಬಾರಿಸಿದರೆ, ಶುಭ್​​ಮನ್ ಗಿಲ್ 38 ರನ್​ಗಳಿಸಿದರು.

ಇನ್ನು ಜೋಸ್ ಬಟ್ಲರ್ 39 ರನ್​ಗಳ ಕೊಡಗೆ ನೀಡಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

197 ರನ್​ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (8) ಮೊದಲ ಓವರ್​ನಲ್ಲಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಯಾನ್ ರಿಕೆಲ್ಟನ್​ (6)  ರನ್ನು ಬೌಲ್ಡ್ ಮಾಡಿ ಮೊಹಮ್ಮದ್ ಸಿರಾಜ್ 2ನೇ ಯಶಸ್ಸು ತಂದುಕೊಟ್ಟರು.

ಈ ಹಂತದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ (39) ಹಾಗೂ ಸೂರ್ಯಕುಮಾರ್ ಯಾದವ್ (48) ಉತ್ತಮ ಮೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆದರೆ ಆ ಬಳಿಕ ಬಂದ ಹಾರ್ದಿಕ್ ಪಾಂಡ್ಯ ರನ್​ಗಳಿಸಲು ಹೆಣಗಾಡಿದ್ದರು.

ಅದರಲ್ಲೂ ಸ್ಪಿನ್ನರ್ ಸಾಯಿ ಕಿಶೋರ್ ಎಸೆತಗಳಲ್ಲಿ ಬಿಗ್ ಶಾಟ್ ಬಾರಿಸಲು ತಡಕಾಡಿದರು. ಇದೇ ವೇಳೆ ಕೋಪದಿಂದ ಬೌಲರ್​​ನತ್ತ ನೋಡಿ ಅಶ್ಲೀಲವಾಗಿ ಬೈದಿದ್ದಾರೆ.

ತಿರುಗಿ ನಿಂತ ಸಾಯಿ ಕಿಶೋರ್:

ಹಾರ್ದಿಕ್ ಪಾಂಡ್ಯ ತನ್ನನ್ನು ಗುರಿಯಾಗಿಸಿ ಅಶ್ಲೀಲವಾಗಿ ಬೈದಿರುವುದು ಕೇಳಿಸಿಕೊಂಡ ಸಾಯಿ ಕಿಶೋರ್ ನೇರವಾಗಿ ಹೋಗಿ ಹಾರ್ದಿಕ್ ಪಾಂಡ್ಯರನ್ನು ದಿಟ್ಟಿಸಿ ನೋಡಿದರು. ಅತ್ತ ಕಡೆ ಮೊದಲೇ ಕೋಪದಲ್ಲಿದ್ದ ಹಾರ್ದಿಕ್ ಪಾಂಡ್ಯ ಕೂಡ ಮುಂದೆ ಬಂದು ಕಣ್ಣನಲ್ಲಿ ಕಣ್ಣಿಟ್ಟು ಗುರಾಯಿಸಿದರು. ಅಷ್ಟರಲ್ಲಾಗಲೇ ಅಂಪೈರ್ ಹಾಗೂ ಸಹ ಆಟಗಾರರು ಮಧ್ಯಪ್ರವೇಶಿಸಿ ಉಭಯರನ್ನು ದೂರ ಮಾಡಿದರು. ಇದೀಗ ಈ ಜಿದ್ದಾಟದ ವಿಡಿಯೋ ವೈರಲ್ ಆಗಿದೆ.

ಹಾರ್ದಿಕ್ ಪಾಂಡ್ಯ-ಸಾಯಿ ಕಿಶೋರ್ ಜಿದ್ದಾಟ:

ಇನ್ನು ಈ ಪಂದ್ಯದಲ್ಲಿ 197 ರನ್​ಗಳನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಅಂತಿಮವಾಗಿ 160 ರನ್​ಗಳಿಸಿ 36 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಸಾಯಿ ಕಿಶೋರ್ ಹಾಗೂ ಹಾರ್ದಿಕ್ ಪಾಂಡ್ಯ ಮುಖಾಮುಖಿಯಾಗಿದ್ದರು. ಈ ವೇಳೆ ಇಬ್ಬರು ಆಟಗಾರರು ಪರಸ್ಪರ ನಗುತ್ತಾ ಆಲಿಂಗಿಸಿಕೊಳ್ಳುವ ಮೂಲಕ ಎಲ್ಲಾ ಕಿತ್ತಾಟಗಳಿಗೂ ತೆರೆ ಎಳೆದಿರುವುದು ವಿಶೇಷ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ರೋಹಿತ್ ಶರ್ಮಾ , ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್) , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ನಮನ್ ಧೀರ್ , ಮಿಚೆಲ್ ಸ್ಯಾಂಟ್ನರ್ , ದೀಪಕ್ ಚಹರ್ , ಟ್ರೆಂಟ್ ಬೌಲ್ಟ್ , ಮುಜೀಬ್ ಉರ್ ರೆಹಮಾನ್ , ಸತ್ಯನಾರಾಯಣ ರಾಜು.

ಇದನ್ನೂ ಓದಿ: ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11: ಶುಭ್​ಮನ್ ಗಿಲ್ (ನಾಯಕ) , ಸಾಯಿ ಸುದರ್ಶನ್ , ಜೋಸ್ ಬಟ್ಲರ್ (ವಿಕೆಟ್ ಕೀಪರ್) , ಶೆರ್ಫೇನ್ ರುದರ್ಫೋರ್ಡ್ , ಶಾರುಖ್ ಖಾನ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಸಾಯಿ ಕಿಶೋರ್ , ಕಗಿಸೋ ರಬಾಡ , ಮೊಹಮ್ಮದ್ ಸಿರಾಜ್ , ಪ್ರಸಿದ್ಧ್ ಕೃಷ್ಣ , ಇಶಾಂತ್ ಶರ್ಮಾ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ