Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಇದೆಂತಹ ಅವಮಾನ: ರೋಹಿತ್ ಶರ್ಮಾ ಸಲಹೆಗೆ ಕ್ಯಾರೆ ಮಾಡದ ಹಾರ್ದಿಕ್ ಪಾಂಡ್ಯ

IPL 2025 LSG vs MI: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಗಾಯದ ಕಾರಣ ರೋಹಿತ್ ಶರ್ಮಾ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಕೆಲ ಸಲಹೆಗಳನ್ನು ನೀಡಲು ರೋಹಿತ್ ಶರ್ಮಾ ಮೈದಾನಕ್ಕೆ ಆಗಮಿಸಿದ್ದರು.

VIDEO: ಇದೆಂತಹ ಅವಮಾನ: ರೋಹಿತ್ ಶರ್ಮಾ ಸಲಹೆಗೆ ಕ್ಯಾರೆ ಮಾಡದ ಹಾರ್ದಿಕ್ ಪಾಂಡ್ಯ
Hardik Pandya - Rohit Sharma
Follow us
ಝಾಹಿರ್ ಯೂಸುಫ್
|

Updated on: Apr 05, 2025 | 7:32 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 18ರ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಸ್ಪೋಟಕ ಆರಂಭ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ (60) ಹಾಗೂ ಐಡೆನ್ ಮಾರ್ಕ್ರಾಮ್ (53) ಪವರ್​ಪ್ಲೇನಲ್ಲಿ 69 ರನ್​ ಚಚ್ಚಿದ್ದರು. ಇತ್ತ ಮೊದಲ 6 ಓವರ್​ಗಳಲ್ಲಿ ವಿಕೆಟ್ ಪಡೆಯಲು ಮುಂಬೈ ಇಂಡಿಯನ್ಸ್ ಬೌಲರ್​ಗಳು ಹರಸಾಹಸಪಟ್ಟಿದ್ದರು.

ಇದರ ನಡುವೆ ಸ್ಟ್ರಾಟೆಜಿಕ್ ಟೈಮ್ ಔಟ್ ಸಂದರ್ಭದಲ್ಲಿ ಮೈದಾನಕ್ಕೆ ಆಗಮಿಸಿದ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಆಟಗಾರರೊಂದಿಗೆ ಚರ್ಚಿಸಿದ್ದಾರೆ. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ವಿಷಯದಲ್ಲಿ ಸಲಹೆ ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಆದರೆ ಅತ್ತ ರೋಹಿತ್ ಶರ್ಮಾ ಮಾತನಾಡುತ್ತಿದ್ದರೆ, ಇತ್ತ ಹಾರ್ದಿಕ್ ಪಾಂಡ್ಯ ಅವರ ಮಾತನ್ನು ನಿರ್ಲಕ್ಷಿಸಿ ಹೊರಟು ಹೋಗಿದ್ದಾರೆ. ಈ ಸನ್ನಿವೇಶವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಳೆದ ಸೀಸನ್​ನಲ್ಲೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾ ಅವರನ್ನು ತುಂಬಾ ಕೆಟ್ಟದಾಗಿ ನಡೆಸಿಕೊಂಡಿದ್ದರು. ಇದೀಗ ಮತ್ತೆ ಪಾಂಡ್ಯ ಕಡೆಯಿಂದ ಅಂತಹದ್ದೇ ನಡೆ ಕಂಡು ಬಂದಿದ್ದು, ಇದಕ್ಕೆ  ರೋಹಿತ್ ಶರ್ಮಾ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ.

ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯ ವಿಡಿಯೋ:

ಗೆದ್ದು ಬೀಗಿದ ಲಕ್ನೋ ಸೂಪರ್ ಜೈಂಟ್ಸ್:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು 12 ರನ್​ಗಳ ರೋಚಕ ಜಯ ಸಾಧಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ , ಮಿಚೆಲ್ ಮಾರ್ಷ್ , ನಿಕೋಲಸ್ ಪೂರನ್ , ರಿಷಭ್ ಪಂತ್ (ನಾಯಕ) , ಆಯುಷ್ ಬದೋನಿ , ಡೇವಿಡ್ ಮಿಲ್ಲರ್ , ಅಬ್ದುಲ್ ಸಮದ್ , ಶಾರ್ದೂಲ್ ಠಾಕೂರ್ , ದಿಗ್ವೇಶ್ ಸಿಂಗ್ ರಾಠಿ , ಆಕಾಶ್ ದೀಪ್ , ಅವೇಶ್ ಖಾನ್.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ವಿಲ್ ಜ್ಯಾಕ್ಸ್ , ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್) , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ (ನಾಯಕ) , ನಮನ್ ಧೀರ್ , ರಾಜ್ ಬಾವಾ , ಮಿಚೆಲ್ ಸ್ಯಾಂಟ್ನರ್ , ದೀಪಕ್ ಚಹಾರ್ , ಅಶ್ವನಿ ಕುಮಾರ್ , ವಿಘ್ನೇಶ್ ಪುತ್ತೂರ್ , ಟ್ರೆಂಟ್ ಬೌಲ್ಟ್.

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ