AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಟ್ರೋಫಿ ಗೆದ್ದಿದ್ದೇವೆ, ಯಾವಾಗಲೂ ಗೆಲ್ಲೋಕೆ ಆಗಲ್ಲ: ಹಾರ್ದಿಕ್ ಪಾಂಡ್ಯ ಅಚ್ಚರಿಯ ಹೇಳಿಕೆ

IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಐದು ಟ್ರೋಫಿ ಗೆದ್ದಿದ್ದೇವೆ, ಯಾವಾಗಲೂ ಗೆಲ್ಲೋಕೆ ಆಗಲ್ಲ: ಹಾರ್ದಿಕ್ ಪಾಂಡ್ಯ ಅಚ್ಚರಿಯ ಹೇಳಿಕೆ
Hardik Pandya
ಝಾಹಿರ್ ಯೂಸುಫ್
|

Updated on: May 27, 2025 | 8:34 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮುಂಬೈ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ (62) ಹಾಗೂ ಜೋಶ್ ಇಂಗ್ಲಿಸ್ (73) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿತು. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾದರೆ, ಅತ್ತ ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬೇಕಿದೆ.

ಹೀಗಾಗಿಯೇ ಈ ಸೋಲಿನ ಬಳಿಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ನಿರಾಶರಾಗಿದ್ದರು. ಅಲ್ಲದೆ ಪಂದ್ಯದ ಬಳಿಕ ಮಾತನಾಡಿದ ಪಾಂಡ್ಯ, ನಾವು 20 ರನ್​ಗಳನ್ನು ಕಡಿಮೆ ಕಲೆಹಾಕಿದ್ದೇವೆ ಎಂದೆನಿಸುತ್ತದೆ. ಇದುವೇ ಸೋಲಿಗೆ ಕಾರಣ. ಏಕೆಂದರೆ ಪಂಜಾಬ್ ಕಿಂಗ್ಸ್ ಈ ಪಿಚ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ.

ನಾವು ಇನ್ನೂ ಹೆಚ್ಚುವರಿ 20 ರನ್​ಗಳನ್ನು ಕಲೆಹಾಕಬೇಕಿತ್ತು. ನಾವು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ಎಡವಿದ್ದೇವೆ. ಇದು ಕೇವಲ ಒಂದು ಸಣ್ಣ ತಪ್ಪು. ಇದರಿಂದ ಕಲಿತು, ನಾವು ನಾಕೌಟ್‌ ಪಂದ್ಯಕ್ಕಾಗಿ ಸಿದ್ಧರಾಗುತ್ತೇವೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡವು  ಉತ್ತಮ ಕ್ರಿಕೆಟ್ ಆಡುತ್ತಿದೆ. ಇಂದು ನಮ್ಮ ಅತ್ಯುತ್ತಮ ಕ್ರಿಕೆಟ್ ಆಡಲು ಸಾಧ್ಯವಾಗದ ದಿನಗಳಲ್ಲಿ ಒಂದು ಅಷ್ಟೇ. ಐಪಿಎಲ್ ಅಂದರೆನೇ ಹಾಗೆ, ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಐದು ಟ್ರೋಫಿಗಳನ್ನು ಗೆದ್ದಿದೆ. ಆದರೆ ಯಾವಾಗಲೂ ಪಂದ್ಯಗಳನ್ನು ಗೆಲ್ಲೋದಕ್ಕೆ ಆಗುವುದಿಲ್ಲ.

ಕೆಲವೊಮ್ಮೆ ಸೋಲುಗಳು ಎದುರಾಗುತ್ತವೆ. ಈ ಸೋಲಿನಿಂದ ಪಾಠ ಕಲಿತು ಮುಂದೆ ಸಾಗಬೇಕಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಾವು ಮಾಡಿ ತಪ್ಪೇನು ಎಂಬುದನ್ನು ವಿಮರ್ಶಿಸಲಿದ್ದೇವೆ. ಎಲ್ಲಿ ನಾವು 20 ರನ್​ಗಳನ್ನು ಗಳಿಸಲು ವಿಫಲರಾಗಿದ್ದೇವೆ ಎಂಬುದನ್ನು ಅವಲೋಕಿಸಬೇಕಿದೆ. ಈ ಎಲ್ಲಾ ಲೆಕ್ಕಚಾರಗಳ ಮೂಲಕ ಎಲಿಮಿನೇಟರ್ ಪಂದ್ಯದಲ್ಲಿ ಕಂಬ್ಯಾಕ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಆರ್​ಸಿಬಿ ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೇ 30 ರಂದು ನಡೆಯಲಿರುವ ಎಲಿಮಿನೇಟರ್ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಗೆದ್ದರೆ, ರಾಯಲ್ ಪಡೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಸೋತರೆ ಮುಂಬೈ ಇಂಡಿಯನ್ಸ್ ಜೊತೆ ಆರ್​ಸಿಬಿ ಎಲಿಮಿನೇಟರ್ ಪಂದ್ಯವಾಡಲಿದೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು