AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಟ್ರೋಫಿ ಗೆದ್ದಿದ್ದೇವೆ, ಯಾವಾಗಲೂ ಗೆಲ್ಲೋಕೆ ಆಗಲ್ಲ: ಹಾರ್ದಿಕ್ ಪಾಂಡ್ಯ ಅಚ್ಚರಿಯ ಹೇಳಿಕೆ

IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಐದು ಟ್ರೋಫಿ ಗೆದ್ದಿದ್ದೇವೆ, ಯಾವಾಗಲೂ ಗೆಲ್ಲೋಕೆ ಆಗಲ್ಲ: ಹಾರ್ದಿಕ್ ಪಾಂಡ್ಯ ಅಚ್ಚರಿಯ ಹೇಳಿಕೆ
Hardik Pandya
ಝಾಹಿರ್ ಯೂಸುಫ್
|

Updated on: May 27, 2025 | 8:34 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮುಂಬೈ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ (62) ಹಾಗೂ ಜೋಶ್ ಇಂಗ್ಲಿಸ್ (73) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿತು. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾದರೆ, ಅತ್ತ ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬೇಕಿದೆ.

ಹೀಗಾಗಿಯೇ ಈ ಸೋಲಿನ ಬಳಿಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ನಿರಾಶರಾಗಿದ್ದರು. ಅಲ್ಲದೆ ಪಂದ್ಯದ ಬಳಿಕ ಮಾತನಾಡಿದ ಪಾಂಡ್ಯ, ನಾವು 20 ರನ್​ಗಳನ್ನು ಕಡಿಮೆ ಕಲೆಹಾಕಿದ್ದೇವೆ ಎಂದೆನಿಸುತ್ತದೆ. ಇದುವೇ ಸೋಲಿಗೆ ಕಾರಣ. ಏಕೆಂದರೆ ಪಂಜಾಬ್ ಕಿಂಗ್ಸ್ ಈ ಪಿಚ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ.

ನಾವು ಇನ್ನೂ ಹೆಚ್ಚುವರಿ 20 ರನ್​ಗಳನ್ನು ಕಲೆಹಾಕಬೇಕಿತ್ತು. ನಾವು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ಎಡವಿದ್ದೇವೆ. ಇದು ಕೇವಲ ಒಂದು ಸಣ್ಣ ತಪ್ಪು. ಇದರಿಂದ ಕಲಿತು, ನಾವು ನಾಕೌಟ್‌ ಪಂದ್ಯಕ್ಕಾಗಿ ಸಿದ್ಧರಾಗುತ್ತೇವೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡವು  ಉತ್ತಮ ಕ್ರಿಕೆಟ್ ಆಡುತ್ತಿದೆ. ಇಂದು ನಮ್ಮ ಅತ್ಯುತ್ತಮ ಕ್ರಿಕೆಟ್ ಆಡಲು ಸಾಧ್ಯವಾಗದ ದಿನಗಳಲ್ಲಿ ಒಂದು ಅಷ್ಟೇ. ಐಪಿಎಲ್ ಅಂದರೆನೇ ಹಾಗೆ, ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಐದು ಟ್ರೋಫಿಗಳನ್ನು ಗೆದ್ದಿದೆ. ಆದರೆ ಯಾವಾಗಲೂ ಪಂದ್ಯಗಳನ್ನು ಗೆಲ್ಲೋದಕ್ಕೆ ಆಗುವುದಿಲ್ಲ.

ಕೆಲವೊಮ್ಮೆ ಸೋಲುಗಳು ಎದುರಾಗುತ್ತವೆ. ಈ ಸೋಲಿನಿಂದ ಪಾಠ ಕಲಿತು ಮುಂದೆ ಸಾಗಬೇಕಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಾವು ಮಾಡಿ ತಪ್ಪೇನು ಎಂಬುದನ್ನು ವಿಮರ್ಶಿಸಲಿದ್ದೇವೆ. ಎಲ್ಲಿ ನಾವು 20 ರನ್​ಗಳನ್ನು ಗಳಿಸಲು ವಿಫಲರಾಗಿದ್ದೇವೆ ಎಂಬುದನ್ನು ಅವಲೋಕಿಸಬೇಕಿದೆ. ಈ ಎಲ್ಲಾ ಲೆಕ್ಕಚಾರಗಳ ಮೂಲಕ ಎಲಿಮಿನೇಟರ್ ಪಂದ್ಯದಲ್ಲಿ ಕಂಬ್ಯಾಕ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಆರ್​ಸಿಬಿ ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೇ 30 ರಂದು ನಡೆಯಲಿರುವ ಎಲಿಮಿನೇಟರ್ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ಗೆದ್ದರೆ, ರಾಯಲ್ ಪಡೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಸೋತರೆ ಮುಂಬೈ ಇಂಡಿಯನ್ಸ್ ಜೊತೆ ಆರ್​ಸಿಬಿ ಎಲಿಮಿನೇಟರ್ ಪಂದ್ಯವಾಡಲಿದೆ.

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ