AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs MI: ನಮ್ಮ ಗೆಲುವಿನ ಸೀಕ್ರೆಟ್ ಏನೆಂದರೆ….!

IPL 2025: ಮುಂಬೈ ಇಂಡಿಯನ್ಸ್ (Mumbai Indians) ತಂಡವು ಬ್ಯಾಕ್ ಟು ಬ್ಯಾಕ್ ಗೆಲುವುಗಳ ಮೂಲಕ ಇದೀಗ ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ ಪ್ಲೇಆಫ್​ಗೆ ಪ್ರವೇಶಿಸಬಹುದು.

SRH vs MI: ನಮ್ಮ ಗೆಲುವಿನ ಸೀಕ್ರೆಟ್ ಏನೆಂದರೆ....!
Hardik Pandya
Follow us
ಝಾಹಿರ್ ಯೂಸುಫ್
|

Updated on:Apr 24, 2025 | 10:27 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 143 ರನ್​ ಕಲೆಹಾಕಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (70) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 15.4 ಓವರ್​ಗಳಲ್ಲಿ 146 ರನ್ ಬಾರಿಸಿ 7 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಜಯವು ನಿಜಕ್ಕೂ ಖುಷಿ ಕೊಟ್ಟಿದೆ. ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನೋಡಿ ಸಂತೋಷವಾಯಿತು. ಎಲ್ಲಾ ಆಟಗಾರರು ಫಾರ್ಮ್‌ನಲ್ಲಿರುವಾಗ, ನಾವು ಪ್ರಾಬಲ್ಯ ಸಾಧಿಸುತ್ತೇವೆ. ಇದುವೇ ನಮ್ಮ ಗೆಲುವಿನ ಸೀಕ್ರೆಟ್ ಎಂದಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇನ್ನು ದೀಪಕ್ ಚಹರ್ ಮತ್ತು ಟ್ರೆಂಟ್​ ಬೌಲ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಪ್ರತಿಯೊಬ್ಬರು ಉತ್ತಮ ಪ್ರದರ್ಶನ ನೀಡಿದರೆ ಗೆಲುವು ಸುಲಭ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದೇ ವೇಳೆ ದೀಪಕ್ ಚಹರ್​ಗೆ ಸತತ 4 ಓವರ್​ಗಳನ್ನು ನೀಡಿರುವ ಬಗ್ಗೆ ಕೇಳಿದಾಗ, ಕೆಲ ಬಾರಿ ಪರಿಸ್ಥಿತಿಗೆ ಅನುಗುಣವಾಗಿ ನಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅನೇಕ ವಿಷಯಗಳನ್ನು ಮುಂಚಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಅವರು ಪವರ್‌ಪ್ಲೇನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರು. ಹೀಗಾಗಿ ಓವರ್ ಅನ್ನು ನಿಲ್ಲಿಸಲು ಯಾವುದೇ ಕಾರಣವಿರಲಿಲ್ಲ. ಹೀಗಾಗಿ ಅವರಿಂದಲೇ ಬ್ಯಾಕ್ ಟು ಬ್ಯಾಕ್ ಓವರ್​ಗಳನ್ನು ಹಾಕಿಸಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ನನ್ನ ದೇಶದ ಕೈವಾಡವಿದೆ: ಪಾಕ್ ಕ್ರಿಕೆಟಿಗನ ಹೇಳಿಕೆ..!

ಸದ್ಯ ಆಡಿರುವ 9 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಇನ್ನುಳಿದ 5 ಮ್ಯಾಚ್​ಗಳಲ್ಲಿ ಮುಂಬೈ ಪಡೆ 3 ಗೆಲುವು ದಾಖಲಿಸಿದರೆ, ಪ್ಲೇಆಫ್​ಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಇದೇ ಪ್ರದರ್ಶನ ಮುಂದುವರೆಸಿದರೆ ಹಾರ್ದಿಕ್ ಪಾಂಡ್ಯ ಪಡೆಯನ್ನು ಪ್ಲೇಆಫ್​​ನಲ್ಲೂ ಎದುರು ನೋಡಬಹುದು.

Published On - 10:25 am, Thu, 24 April 25

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್