AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸೋತಿದ್ದು ಒಳ್ಳೆಯದೇ ಆಯ್ತು… RCB ನಾಯಕನ ಅಚ್ಚರಿಯ ಹೇಳಿಕೆ

IPL 2025 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 65ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​​ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.5 ಓವರ್​ಗಳಲ್ಲಿ 189 ರನ್​ಗಳಿಸಿ 42 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ನಾವು ಸೋತಿದ್ದು ಒಳ್ಳೆಯದೇ ಆಯ್ತು... RCB ನಾಯಕನ ಅಚ್ಚರಿಯ ಹೇಳಿಕೆ
Jitesh Sharma
ಝಾಹಿರ್ ಯೂಸುಫ್
|

Updated on: May 24, 2025 | 9:32 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​​ಹೆಚ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಇಶಾನ್ ಕಿಶನ್ ಅಜೇಯ 94 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 231 ರನ್ ಕಲೆಹಾಕಿತು.

232 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ 43 ರನ್ ಬಾರಿಸಿದರೆ, ಫಿಲ್ ಸಾಲ್ಟ್ 62 ರನ್ ಸಿಡಿಸಿದರು. ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಪರಿಣಾಮ 19.5 ಓವರ್​ಗಳಲ್ಲಿ 189 ರನ್​ಗಳಿಸಿ ಆರ್​ಸಿಬಿ ತಂಡವು ಸರ್ವಪತನ ಕಂಡಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 42 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ಜಿತೇಶ್ ಶರ್ಮಾ, ಈ ಪಂದ್ಯದಲ್ಲಿ ನಾವು 20-30 ಹೆಚ್ಚುವರಿ ರನ್​ಗಳನ್ನು ನೀಡಿದ್ದು ನಮ್ಮ ಪಾಲಿಗೆ ದುಬಾರಿಯಾಯಿತು. ಇದೇ ಕಾರಣದಿಂದಾಗಿ ನಾವು ಸೋಲನುಭವಿಸಿದ್ದೇವೆ ಎಂದರು.

ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳಿಗೆ ಹೋಲಿಸಿದರೆ, ನಮ್ಮ ಬ್ಯಾಟಿಂಗ್​ನಲ್ಲಿ ತೀವ್ರತೆ ಇರಲಿಲ್ಲ ಎಂಬುದು ನನ್ನ ಭಾವನೆ. ಅದರಲ್ಲೂ ನಾನು ಔಟಾದ ರೀತಿಯು ನನ್ನಲ್ಲಿ ತುಂಬಾ ನಿರಾಸೆ ಮೂಡಿಸಿದೆ. ಇನ್ನು ಗಾಯಗೊಂಡ ಟಿಮ್ ಡೇವಿಡ್ ಕೂಡ ಬ್ಯಾಟಿಂಗ್ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ.

ಒಂದಾರ್ಥದಲ್ಲಿ ನಾವು ಈ ಪಂದ್ಯವನ್ನು ಸೋತಿದ್ದು ಒಳ್ಳೆಯದೇ ಆಯ್ತು ಅಂತ ನನಗನ್ನಿಸುತ್ತೆ. ಏಕೆಂದರೆ ಚೇಸಿಂಗ್ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕಿದೆ. ಈ ತಪ್ಪುಗಳನ್ನು ತಿದ್ದಿ ಮುಂಬರುವ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಪುಟಿದೇಳುತ್ತೇವೆ ಎಂಬ ವಿಶ್ವಾಸವಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: IPL 2025: ಹೀಗಾದ್ರೆ RCB ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತೆ..!

ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲು ನಮ್ಮ ಪಾಲಿಗೆ ಒಳ್ಳೆಯದೇ. ಪ್ಲೇಆಫ್ ಪಂದ್ಯಗಳಿಗೂ ಮುನ್ನ ಇದು ಎಚ್ಚರಿಕೆಯ ಕರೆಗಂಟೆ. ಈಗ ಅನುಭವಿಸಿರುವ ಹಿನ್ನಡೆಯನ್ನು ಸರಿಪಡಿಸಿ ಮುಂದಿನ ಪಂದ್ಯಗಳಿಗಾಗಿ ಸಜ್ಜಾಗಬೇಕಿದೆ. ಈ ಮೂಲಕ ನಾವು ಮುಂದಿನ ಮ್ಯಾಚ್​ನಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಆರ್​ಸಿಬಿ ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ ಹೇಳಿದ್ದಾರೆ.

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ