AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಾಟ್ ಎ ರಿವ್ಯೂವ್ ಜಿತೇಶ್..!; ಆರ್​ಸಿಬಿ ಸೋಲುವ ಪಂದ್ಯ ಗೆದ್ದಿದ್ದು ಇಲ್ಲೇ; ವಿಡಿಯೋ ನೋಡಿ

RCB vs RR: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿಗೆ ಜಿತೇಶ್ ಶರ್ಮಾ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ಉತ್ತಮ ಫಾರ್ಮ್‌ನಲ್ಲಿದ್ದ ಧ್ರುವ್ ಜುರೆಲ್ ಅವರನ್ನು ಜಿತೇಶ್ ತೆಗೆದುಕೊಂಡ ಡಿಆರ್‌ಎಸ್ ಪೆವಿಲಿಯನ್‌ಗೆ ಕಳುಹಿಸುವಲ್ಲಿ ಪ್ರಮುಖ ಪಾತ್ರವಹಿಸಿತು.

IPL 2025: ವಾಟ್ ಎ ರಿವ್ಯೂವ್ ಜಿತೇಶ್..!; ಆರ್​ಸಿಬಿ ಸೋಲುವ ಪಂದ್ಯ ಗೆದ್ದಿದ್ದು ಇಲ್ಲೇ; ವಿಡಿಯೋ ನೋಡಿ
Jitesh Sharma
ಪೃಥ್ವಿಶಂಕರ
|

Updated on:Apr 25, 2025 | 8:59 AM

Share

ಆರ್​ಸಿಬಿ ವಿರುದ್ಧದ ಪಂದ್ಯವನ್ನು 11 ರನ್​​ಗಳಿಂದ ಸೋತಿರುವ ರಾಜಸ್ಥಾನ್ ರಾಯಲ್ಸ್ (RCB vs RR) ತಂಡಕ್ಕೆ 2025 ರ ಐಪಿಎಲ್ (IPL 2025) ಇನ್ನು ಮುಂದೆ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಈಗಾಗಲೇ ಆಡಿರುವ 9 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ಪ್ರಸ್ತುತ 8ನೇ ಸ್ಥಾನದಲ್ಲಿದ್ದು, ತಂಡದ ಪ್ರದರ್ಶನವನ್ನು ನೋಡಿದರೆ, ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಅಸಾಧ್ಯದ ಮಾತಾಗಿದೆ. ಹೀಗಾಗಿಯೇ ರಾಜಸ್ಥಾನ್ ಪ್ಲೇ ಆಫ್ ಕನಸು ನುಚ್ಚು ನೂರಾಗಿದೆ. ತಂಡದ ಈ ಕಳಪೆ ಪ್ರದರ್ಶನಕ್ಕೆ ಮಧ್ಯಮ ಕ್ರಮಾಂಕದ ವೈಫಲ್ಯವೇ ಪ್ರಮುಖ ಕಾರಣ ಎನ್ನಬಹುದು. ಸತತ ಮೂರು ಪಂದ್ಯಗಳಲ್ಲಿ ರಾಜಸ್ಥಾನ್ ತಾನು ಮಾಡಿದ ತಪ್ಪುಗಳಿಂದಲೇ ಸೋತಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ಅದೇ ತಪ್ಪನ್ನು ಮಾಡಿ ಸೋತಿತ್ತಾದರೂ ಇಲ್ಲಿ ಆರ್​ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ (Jitesh Sharma) ತೋರಿದ ಚಾಣಾಕ್ಷತೆ ಆರ್​ಸಿಬಿ ಗೆಲುವಿಗೆ ಪ್ರಮುಖ ಕಾರಣವಾಯಿತು.

ರಾಜಸ್ಥಾನ್​ಗೆ ಅಬ್ಬರದ ಆರಂಭ

ಆರ್​ಸಿಬಿ ನೀಡಿದ 205 ರನ್​ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್​ಗೆ ನಿರೀಕ್ಷೆಗೂ ಮೀರಿದ ಆರಂಭ ನೀಡುವಲ್ಲಿ ಆರಂಭಿಕರು ಯಶಸ್ವಿಯಾದರು. ತಂಡ ಕೇವಲ 9 ಓವರ್​ಗಲ್ಲಿ 3 ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿತು. ಆದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ ರಾಜಸ್ಥಾನ್​ಗೆ ಮತ್ತೊಂದು ಸೋಲಿನ ಆಘಾತ ನೀಡಿತು. ಅದರಲ್ಲೂ 18ನೇ ಓವರ್​ನಲ್ಲಿ 22 ರನ್​ ಕಲೆಹಾಕಿ ರಾಜಸ್ಥಾನ್​ಗೆ ಗೆಲುವಿನ ಭರವಸೆ ಮೂಡಿಸಿದ್ದ ಧೃವ್ ಜುರೇಲ್ 19ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದು ತಂಡವನ್ನು ಸೋಲಿನ ದವಡೆಗೆ ಸಿಲುಕಿಸಿತು. ಆದಾಗ್ಯೂ ಈ ವಿಕೆಟ್​ನ ಕ್ರೆಡಿಟ್ ಆರ್​ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾಗೆ ಸಲ್ಲಬೇಕು.

ಇದನ್ನೂ ಓದಿ
Image
ರಾಜಸ್ಥಾನ್ ಬ್ಯಾಟರ್​​ಗಳಿಗೆ ಕ್ರೆಡಿಟ್ ನೀಡಿದ ಆರ್​ಸಿಬಿ ನಾಯಕ
Image
ಮತ್ತೊಂದು ಗೆಲ್ಲುವ ಪಂದ್ಯ ಕೈಚೆಲ್ಲಿದ ರಾಜಸ್ಥಾನ್; ನಾಯಕ ಹೇಳಿದ್ದೇನು?
Image
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
Image
ರೋಚಕ ಪಂದ್ಯದಲ್ಲಿ ಗೆದ್ದು 3ನೇ ಸ್ಥಾನಕ್ಕೇರಿದ ಆರ್​ಸಿಬಿ

ಕೊನೆಯ 3 ಓವರ್​ಗಳಲ್ಲಿ 40 ರನ್

ವಾಸ್ತವವಾಗಿ ರಾಜಸ್ಥಾನ್ ಗೆಲುವಿಗೆ ಕೊನೆಯ 3 ಓವರ್​ಗಳಲ್ಲಿ 40 ರನ್ ಬೇಕಾಗಿದ್ದವು. ಈ ವೇಳೆ ಆರ್​ಸಿಬಿ ಮೇಲುಗೈ ಸಾಧಿಸಿತ್ತು. ಆದರೆ 18ನೇ ಓವರ್ ಬೌಲ್ ಮಾಡಿದ ಭುವನೇಶ್ವರ್ ಬರೋಬ್ಬರಿ 22 ರನ್ ಬಿಟ್ಟುಕೊಟ್ಟರು. ಈ ಓವರ್​ನಲ್ಲಿ ಜುರೇಲ್ 1 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ ಆರ್​ಸಿಬಿಗೆ ಕಂಟಕವಾಗಿದ್ದರು. ಕೊನೆಯ 2 ಓವರ್​ಗಳಲ್ಲಿ 18 ರನ್ ಬೇಕಿದ್ದಾಗ ವಿಜಯಲಕ್ಷ್ಮಿ ರಾಜಸ್ಥಾನ್ ಪರ ವಾಲಿದ್ದಂತೆ ಕಾಣುತ್ತಿತ್ತು. ಆದರೆ 19ನೇ ಓವರ್​ನಲ್ಲಿ ದಾಳಿಗಿಳಿದ ಹೇಜಲ್​ವುಡ್ ಪಂದ್ಯವನ್ನು ಮತ್ತೆ ಆರ್​ಸಿಬಿಯತ್ತ ತಿರುಗಿಸಿದರು.

ಹೇಜಲ್​ವುಡ್ ಬೆಂಕಿ ಬೌಲಿಂಗ್

ಈ ಓವರ್​ನಲ್ಲಿ ಹೇಜಲ್​ವುಡ್ ಕೇವಲ 1 ರನ್​ ನೀಡಿ 2 ಪ್ರಮುಖ ವಿಕೆಟ್‌ಗಳನ್ನು ಉರುಳಿಸಿದರು. ಅದರಲ್ಲೂ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಜುರೇಲ್ ವಿಕೆಟ್ ಉರುಳಿಸುವ ಮೂಲಕ ಹೇಜಲ್​ವುಡ್​ ತಂಡದ ಗೆಲುವಿನ ಖಚಿತಪಡಿಸಿದರು. ಈ ವಿಕೆಟ್ ಉರುಳಿಸಿದ್ದು ಹೇಜಲ್​ವುಡ್ ಆದರೂ ವಿಕೆಟ್ ಕೀಪರ್ ಜಿತೇಶ್ ಅವರ ಚುರುಕುತನ ವಿಕೆಟ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿತು.

IPL 2025: ಟಾಸ್ ಸೋತರೂ ಪಂದ್ಯ ಗೆದ್ದ ಖುಷಿಯಲ್ಲಿ ಆರ್​ಸಿಬಿ ನಾಯಕ ರಜತ್ ಹೇಳಿದ್ದಿದು

ಆರ್​ಸಿಬಿಗೆ ಗೆಲುವು ತಂದ ಜಿತೇಶ್ ನಿರ್ಧಾರ

ವಾಸ್ತವವಾಗಿ ಹೇಜಲ್​ವುಡ್ 19ನೇ ಓವರ್​ನ 3ನೇ ಎಸೆತವನ್ನು ಯಾರ್ಕರ್ ಬೌಲ್ ಮಾಡಿದರು. ಈ ಎಸೆತವನ್ನು ಸಿಕ್ಸರ್​ಗಟ್ಟಲು ಧೃವ್ ಯತ್ನಿಸಿದರು. ಆದರೆ ಆ ಯತ್ನದಲ್ಲಿ ಅವರು ಸಫಲರಾಗಲಿಲ್ಲ. ಚೆಂಡು ನೇರವಾಗಿ ವಿಕೆಟ್ ಕೀಪರ್​ ಕೈಗೆ ಹೋಯಿತು. ಈ ಹಂತದಲ್ಲಿ ಎಲ್ಲರೂ ಇದು ಡಾಟ್ ಬಾಲ್ ಎಂದು ಭಾವಿಸಿದ್ದರು. ಆದರೆ ಚೆಂಡು ಧೃವ್ ಅವರ ಬ್ಯಾಟ್​ಗೆ ತಾಗಿದೆ ಎಂಬುದು ಜಿತೇಶ್​ಗೆ ಮಾತ್ರ ಗೊತ್ತಿತ್ತು. ಹೀಗಾಗಿ ಮೊದಲು ಅಂಪೈರ್ ಬಳಿ ಔಟ್​ಗೆ ಮನವಿ ಮಾಡಿದ ಜಿತೇಶ್, ಅಂಪೈರ್ ಔಟ್ ನೀಡದಿದ್ದಾಗ ರಜತ್​ಗೆ ರಿವ್ಯೂವ್ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಆರಂಭದಲ್ಲಿ ರಜತ್​ ಇದಕ್ಕೆ ಹಿಂದೇಟು ಹಾಕಿದರೂ, ಪಟ್ಟು ಬಿಡದ ಜಿತೇಶ್ ರಿವ್ಯೂವ್ ತೆಗೆದುಕೊಳ್ಳುವಂತೆ ಕೇಳಿಕೊಂಡರು. ಕೊನೆಗೂ ಒತ್ತಡಕ್ಕೆ ಮಣಿದ ರಜತ್ ರಿವ್ಯೂವ್ ತೆಗೆದುಕೊಂಡರು. ರಿವ್ಯೂವ್​ನಲ್ಲಿ ಚೆಂಡು ಧೃವ್ ಅವರ ಬ್ಯಾಟ್​ಗೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸಿತು. ಹೀಗಾಗಿ ಮೊದಲು ನಾಟೌಟ್ ನೀಡಿದ್ದ ಅಂಪೈರ್ ಆ ಬಳಿಕ ತಮ್ಮ ನಿರ್ಧಾರವನ್ನು ಬದಲಿಸಬೇಕಾಯಿತು. ಇತ್ತ ಧೃವ್ ಔಟಾದ ಬಳಿಕ ರಾಜಸ್ಥಾನದ ಸೋಲು ಕೂಡ ಖಚಿತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:55 am, Fri, 25 April 25

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು