AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಭರವಸೆ ನೀಡಿ ಮೋಸ; ಬಟ್ಲರ್‌ಗೆ ದ್ರೋಹ ಬಗೆಯಿತಾ ರಾಜಸ್ಥಾನ್ ಮ್ಯಾನೇಜ್​ಮೆಂಟ್?

Rajasthan Royals: ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್ 2025 ಮೆಗಾ ಹರಾಜಿಗೆ ಮುನ್ನ ಪ್ರಮುಖ ಆಟಗಾರ ಜೋಸ್ ಬಟ್ಲರ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ಬಟ್ಲರ್ ಅವರನ್ನು ಉಳಿಸಿಕೊಳ್ಳುವ ಭರವಸೆ ನೀಡಿದ್ದರೂ, ಕೊನೆಯ ಕ್ಷಣದಲ್ಲಿ ಅವರ ಹೆಸರನ್ನು ತೆಗೆದುಹಾಕಲಾಗಿತ್ತು. ಈ ನಿರ್ಧಾರದಿಂದ ಕ್ರಿಕೆಟ್ ತಜ್ಞರು ಆಘಾತಕ್ಕೊಳಗಾಗಿದ್ದು, ಬಟ್ಲರ್ ಅವರ ಸಾಧನೆಗಳನ್ನು ಪರಿಗಣಿಸಿದರೆ ಈ ನಿರ್ಧಾರ ಅರ್ಥಹೀನ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

IPL 2025: ಭರವಸೆ ನೀಡಿ ಮೋಸ; ಬಟ್ಲರ್‌ಗೆ ದ್ರೋಹ ಬಗೆಯಿತಾ ರಾಜಸ್ಥಾನ್ ಮ್ಯಾನೇಜ್​ಮೆಂಟ್?
Rajasthan Royals
ಪೃಥ್ವಿಶಂಕರ
|

Updated on: Apr 26, 2025 | 7:44 PM

Share

ಐಪಿಎಲ್ 2025 (IPL 2025) ಮೆಗಾ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿ ತಂಡದಲ್ಲಿದ್ದ ಅನೇಕ ಸ್ಟಾರ್ ಆಟಗಾರರನ್ನು ತಂಡದಿಂದ ಕೈಬಿಟ್ಟಿತ್ತು. ತಂಡದಲ್ಲಿದ್ದವರನ್ನು ಹರಾಜಿನಲ್ಲಿ ಮತ್ತೆ ಖರೀದಿಸಲು ಸಹ ಪ್ರಯತ್ನಿಸಲಿಲ್ಲ. ಫ್ರಾಂಚೈಸಿಯ ಈ ನಿರ್ಧಾರದ ಬಗ್ಗೆ ಅನೇಕ ಕ್ರಿಕೆಟ್ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದರು. ಇದೀಗ ಸತತ ಸೋಲುಗಳಿಂದ ಕಂಗೆಟ್ಟು ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿರುವ ರಾಜಸ್ಥಾನ್ ಬಗ್ಗೆ ಅಚ್ಚರಿಯ ಸುದ್ದಿಯೊಂದು ಬೆಳಕಿಗೆ ಬಂದಿದೆ. ತಂಡದಿಂದ ಬಿಡುಗಡೆ ಮಾಡುವ ಮುನ್ನ ತಂಡದ ಪ್ರಮುಖ ಆಟಗಾರ ಜೋಸ್ ಬಟ್ಲರ್ (Jos Buttler) ಅವರನ್ನು ಉಳಿಸಿಕೊಳ್ಳಲು ಫ್ರಾಂಚೈಸಿ ಭರವಸೆ ನೀಡಿತ್ತು. ಆದರೆ ಕೊನೆಯ ದಿನಾಂಕದಂದು ಅವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಯಿತು ಎಂದು ಮಾಧ್ಯಮ ವರದಿಗಳು ಹೇಳಿವೆ.

ಬಟ್ಲರ್‌ಗೆ ದ್ರೋಹ ಬಗೆದರೇ?

ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ಜೋಸ್ ಬಟ್ಲರ್ 2020 ರ ಸೀಸನ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೇರಿಕೊಂಡರು. ಅದಾದ ನಂತರ, ಅವರು ಅದೇ ಫ್ರಾಂಚೈಸಿ ಪರ 5 ಸೀಸನ್​ಗಳನ್ನು ಆಡಿದ್ದರು. ಅದರಲ್ಲೂ 2022 ರ ಐಪಿಎಲ್​ನಲ್ಲಿ ಅವರು 4 ಶತಕಗಳ ಸಹಾಯದಿಂದ 850 ಕ್ಕೂ ಹೆಚ್ಚು ರನ್ ಗಳಿಸಿ 2008 ರ ನಂತರ ಮೊದಲ ಬಾರಿಗೆ ರಾಜಸ್ಥಾನ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದರು. ಮುಂದಿನ ಎರಡು ಸೀಸನ್‌ನಲ್ಲಿ ಅವರು ಸತತವಾಗಿ 350 ಕ್ಕೂ ಹೆಚ್ಚು ರನ್ ಗಳಿಸಿದ್ದರು. ಅಲ್ಲದೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಅವರು ತಂಡಕ್ಕೆ ದೊಡ್ಡ ಪಂದ್ಯ ವಿಜೇತರಾಗಿ ಹೊರಹೊಮ್ಮಿದ್ದರು. ಆದ್ದರಿಂದ, ಫ್ರಾಂಚೈಸಿ ಅವರನ್ನು ಬಿಡುಗಡೆ ಮಾಡುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ.

ಆದರೀಗ ಬಟ್ಲರ್ ಅವರನ್ನು ತಂಡದಿಂದ ಕೈಬಿಟ್ಟ ಬಗ್ಗೆ ವರದಿ ಮಾಡಿರುವ ಸ್ಪೋರ್ಟ್ಸ್ ತಕ್, ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ಅವರನ್ನು ಅವಮಾನಿಸಿದೆ ಎಂದು ಹೇಳಿಕೊಂಡಿದೆ. ಬಟ್ಲರ್ ಅವರೊಂದಿಗೆ ಮಾತನಾಡಿದ್ದ ಫ್ರಾಂಚೈಸಿಯ ಆಡಳಿತ ಮಂಡಳಿಯ ಉನ್ನತ ಮಟ್ಟದ ಅಧಿಕಾರಿಗಳು, ಮೆಗಾ ಹರಾಜಿಗೆ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವ ಗಡುವಿಗೆ ಎರಡು ದಿನಗಳ ಮೊದಲು, ಬಟ್ಲರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿರುವುದಾಗಿ ಭರವಸೆ ನೀಡಿದ್ದರು. ಬಟ್ಲರ್ ಕೂಡ ತಮ್ಮ ಕಡೆಯಿಂದ ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವ ದಿನದಂದು ಅವರ ಹೆಸರು ಪಟ್ಟಿಯಿಂದ ಕಣ್ಮರೆಯಾಗಿತ್ತು. ಇಷ್ಟೇ ಅಲ್ಲ, ಇದಾದ ನಂತರ ಫ್ರಾಂಚೈಸಿ ಬಟ್ಲರ್ ಜೊತೆ ಮಾತನಾಡದೆ ಅವಮಾನಿಸಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

IPL 2025: ಸಿಎಸ್​ಕೆ ಸೋಲುತ್ತಿದ್ದಂತೆ ಕ್ರೀಡಾಂಗಣದಲ್ಲೇ ಕಣ್ಣೀರಿಟ್ಟ ಶೃತಿ ಹಸನ್; ವಿಡಿಯೋ ನೋಡಿ

ಉತ್ತಮ ಫಾರ್ಮ್‌ನಲ್ಲಿರುವ ಬಟ್ಲರ್

ಈ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಆಡಿರುವ 9 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಗೆದ್ದಿರುವುದರಿಂದ ಬಟ್ಲರ್ ಅವರ ಅನುಪಸ್ಥಿತಿ ತಂಡವನ್ನು ಕಾಡುತ್ತಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿರುವ ರಾಜಸ್ಥಾನ್ ಕೊನೆಯ 3 ಪಂದ್ಯಗಳನ್ನು ಕೈಯಾರೆ ಕಳೆದುಕೊಂಡಿತ್ತು. ಒಂದು ವೇಳೆ ಬಟ್ಲರ್ ತಂಡದಲ್ಲಿದ್ದಿದ್ದರೆ ರಾಜಸ್ಥಾನ್​ಗೆ ಖಂಡಿತವಾಗಿಯೂ ನೆರವಾಗುತ್ತಿದ್ದರು .

ಮತ್ತೊಂದೆಡೆ, ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಬಟ್ಲರ್ ಅವರ ಬ್ಯಾಟ್ ಜೋರಾಗಿ ಸದ್ದು ಮಾಡುತ್ತಿದೆ. ಇಲ್ಲಿಯವರೆಗೆ 8 ಪಂದ್ಯಗಳನ್ನಾಡಿರುವ ಬಟ್ಲರ್ 356 ರನ್ ಗಳಿಸಿದ್ದು, ಇದರಲ್ಲಿ 3 ಅರ್ಧಶತಕಗಳು ಸೇರಿವೆ. ಗುಜರಾತ್ ತಂಡ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಜಯಗಳಿಸಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?