AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ರಿಟರ್ನ್​… ಆದರೆ

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ಗೆ ಮೇ 17 ರಂದು ಮತ್ತೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ರಮುಖ ವೇಗಿ ಅಲಭ್ಯರಾಗುವುದು ಖಚಿತವಾಗಿದೆ.

IPL 2025: ಜೋಶ್ ಹೇಝಲ್​ವುಡ್ ರಿಟರ್ನ್​... ಆದರೆ
Josh Hazelwood
ಝಾಹಿರ್ ಯೂಸುಫ್
|

Updated on: May 15, 2025 | 12:59 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಶ್ರೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮೇ 8 ರಂದು ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ತವರಿಗೆ ತೆರಳಿದ್ದರು. ಇದೀಗ ಹೇಝಲ್​ವುಡ್​ ಅವರ ಆಪ್ತ ಮೂಲಗಳು ಅವರು ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಆಗಮಿಸಲಿದ್ದಾರೆ ಎಂದು ದೃಢಪಡಿಸಿದೆ. ಇದಾಗ್ಯೂ ಅವರು ಯಾವಾಗ ಬರಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಏಕೆಂದರೆ ಭುಜದ ನೋವಿನ ಕಾರಣ ಈ ಹಿಂದೆ ಜೋಶ್ ಹೇಝಲ್​ವುಡ್ ಐಪಿಎಲ್​ನ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಅವರು ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಅವರ ಫಿಟ್​ನೆಸ್ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಅಂದರೆ ಜೋಶ್ ಹೇಝಲ್​ವುಡ್ ಸಂಪೂರ್ಣ ಗುಣಮುಖರಾಗಿದ್ದರೆ ಮಾತ್ರ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದು ವೇಳೆ ಭುಜದ ನೋವಿನ ಸಮಸ್ಯೆಯಿದ್ದರೆ, ಅವರು ಪ್ಲೇಆಫ್ ಪಂದ್ಯದ ವೇಳೆ ಕಣಕ್ಕಿಳಿಯಬಹುದು. ಹೀಗಾಗಿ ಹೇಝಲ್​ವುಡ್ ಆಗಮಿಸಿದರೂ ಲೀಗ್ ಹಂತದ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುವುದಿಲ್ಲ.

ಇನ್ನು ಶನಿವಾರ ನಡೆಯಲಿರುವ ಲೀಗ್​ ಹಂತದ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಬೇಕಿದ್ದರೆ ಅವರು ಶುಕ್ರವಾರ ತಂಡವನ್ನು ಕೂಡಿಕೊಳ್ಳಬೇಕು.

ಆದರೆ ಶನಿವಾರದೊಳಗೆ ಹೇಝಲ್​ವುಡ್ ಆಗಮಿಸುವ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ. ಅಲ್ಲದೆ ಪ್ಲೇಆಫ್ ಹಂತದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಬಹುದು.

ಆರ್​ಸಿಬಿ ಮುಂದಿದೆ 3 ಪಂದ್ಯ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಪಂದ್ಯಗಳಲ್ಲಿ ಸೋತರೆ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಗೆಲುವುಗಳೊಂದಿಗೆ ಆರ್​ಸಿಬಿ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರುವುದು ಖಚಿತ.

ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯವಾಡಬೇಕಿದ್ದರೆ ಆರ್​ಸಿಬಿ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 22 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅಲ್ಲದೆ ಈ ಅಗ್ರಸ್ಥಾನದೊಂದಿಗೆ ಪ್ಲೇಆಫ್ ಹಂತದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

ಇದನ್ನೂ ಓದಿ: IPL 2025: RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

ಮೊದಲ ಕ್ವಾಲಿಫೈಯರ್ ಪಂದ್ಯವಾಡಿ ಗೆಲ್ಲುವ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತರೆ 2ನೇ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ದೊರೆಯುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನ ಅಲಂಕರಿಸುವ ಇರಾದೆಯನ್ನು ಹೊಂದಿದೆ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಿ ಫೈನಲ್​ಗೇರುವ ವಿಶ್ವಾಸದಲ್ಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ