AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?

IPL 2025: ಈ ಬಾರಿಯ ಐಪಿಎಲ್​ಗೂ ಮುನ್ನ ಆಟಗಾರರ ಮೆಗಾ ಹರಾಜು ನಡೆಯಲಿದೆ. ಇತ್ತ ಮೆಗಾ ಹರಾಜು ನಡೆಯುವುದರಿಂದ ಪ್ರತಿ ತಂಡಗಳು ನಾಲ್ಕೈದು ಆಟಗಾರರನ್ನು ಉಳಿಸಿ ಉಳಿದವರೆಲ್ಲರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಬೇಕೆಂದು ಕೆಲ ಫ್ರಾಂಚೈಸಿಗಳು ಬಿಸಿಸಿಐಗೆ ಮನವಿ ಸಲ್ಲಿಸಿದೆ.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Jul 29, 2024 | 12:08 PM

Share

ಐಪಿಎಲ್ 2025ರ ಸಿದ್ಧತೆಗಳು ಶುರುವಾದ ಬೆನ್ನಲ್ಲೇ RTM ಆಯ್ಕೆಯು ಚರ್ಚಾ ವಿಷಯವಾಗಿದೆ. ಹೀಗೆ ಚರ್ಚೆಯಾಗಲು ಮುಖ್ಯ ಕಾರಣ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ RTM ಆಯ್ಕೆ ನೀಡಬೇಕೆಂಬ ಬೇಡಿಕೆಯಿಟ್ಟಿರುವುದು. ಈ ಬೇಡಿಕೆಯ ಬೆನ್ನಲ್ಲೇ ಏನಿದು ಆರ್​ಟಿಎಂ ಎಂಬ ಪ್ರಶ್ನೆ ಕೂಡ ಕೂಡ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಆರ್​ಟಿಎಂ ಕಾರ್ಡ್​ ಎಂದರೆ ರೈಟ್ ಟು ಮ್ಯಾಚ್ (RTM) ಆಯ್ಕೆ. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು.

ಇಲ್ಲಿ ಒಂದು ಫ್ರಾಂಚೈಸಿಯು ಆರ್​ಟಿಎಂ ಆಯ್ಕೆ ಬಳಸಿ ಆಟಗಾರರನ್ನು ಬಿಡುಗಡೆ ಮಾಡಿದರೂ, ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ.

ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ರಿಲೀಸ್ ಮಾಡಿದರೆ, ಪಾಟಿದಾರ್ ಖರೀದಿ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

ಇನ್ನು ಆರ್​ಟಿಎಂ ಆಯ್ಕೆ ಬಳಸಿ ಬಿಡುಗಡೆ ಮಾಡಲಾದ ರಜತ್ ಪಾಟಿದಾರ್​ಗಾಗಿ ಸಿಎಸ್​ಕೆ ಫ್ರಾಂಚೈಸಿಯು 10 ಕೋಟಿ ರೂ. ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಆರ್​ಸಿಬಿ ಪಾಟಿದಾರ್ ಅವರನ್ನು ಮರಳಿ ಖರೀದಿಸಬಹುದು.

ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಹೀಗಾಗಿಯೇ ಈ ಆಯ್ಕೆಯನ್ನು ಆಟಗಾರರ ಮೇಲಿನ ಹಕ್ಕುಸ್ವಾಮ್ಯ ಎನ್ನಲಾಗುತ್ತದೆ.

ಈ ಆಯ್ಕೆ ಏಕೆ?

ಆರ್​ಟಿಎಂ ಆಯ್ಕೆಯಲ್ಲಿ ಬಿಡುಗಡೆಯಾದ ಆಟಗಾರರು ಬಿಡ್ಡಿಂಗ್​ ಮೂಲಕ ಹೆಚ್ಚಿನ ಮೊತ್ತ ಪಡೆಯಬಹುದು. ಒಂದು ವೇಳೆ ಯಾರು ಸಹ ಬಿಡ್ಡಿಂಗ್ ಮಾಡದಿದ್ದರೆ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ಆರ್​ಟಿಎಂ ಬಳಸಿದ ಫ್ರಾಂಚೈಸಿ ತಂಡದಲ್ಲೇ ಉಳಿಯುತ್ತಾರೆ.

ಈ ಆಯ್ಕೆಗೆ ಯಾಕೆ ಬೇಡಿಕೆ?

ಐಪಿಎಲ್​ನಲ್ಲಿ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ ಈ ಆಯ್ಕೆ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಇದಕ್ಕೆ ಮುಖ್ಯ ಕಾರಣ ರಿಟೈನ್ ಆಟಗಾರರ ಸಂಖ್ಯೆ ಕಡಿಮೆ ಇರುವುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೇವಲ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿದರೆ, ಉಳಿದ 21 ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಇದರಿಂದ ಮೆಗಾ ಹರಾಜಿನ ಬಳಿಕ ಇಡೀ ತಂಡ ಬದಲಾಗುವ ಸಾಧ್ಯತೆ ಹೆಚ್ಚು. ಅದರಲ್ಲೂ ಒಂದು ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತದೆ.

ಉದಾಹರಣೆಗೆ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕಳೆದ ಸೀಸನ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ತಂಡದ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲು ಕೆಕೆಆರ್ ಬಯಸುತ್ತಿದೆ. ಆ ಆಟಗಾರರನ್ನು ಉಳಿಸಿಕೊಳ್ಳಬೇಕಿದ್ದರೆ ಆರ್​ಟಿಎಂ ಆಯ್ಕೆ ಇರಲೇಬೇಕು. ಇಲ್ಲದಿದ್ದರೆ ಕೆಕೆಆರ್ ಆಟಗಾರರು ಇತರೆ ಫ್ರಾಂಚೈಸಿಗಳ ಪಾಲಾಗುವ ಸಾಧ್ಯತೆ ಹೆಚ್ಚು.

ಇಲ್ಲಿ ಕೆಕೆಆರ್ ಫ್ರಾಂಚೈಸಿಯು 8 ಆರ್​ಟಿಎಂ ಆಯ್ಕೆಗಳಿಗಾಗಿ ಬೇಡಿಕೆಯಿಟ್ಟಿದೆ ಎಂದು ತಿಳಿದು ಬಂದಿದೆ. ಈ ಮೂಲಕ ತನ್ನ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದೆ. ಆದರೆ ಪಂಜಾಬ್ ಕಿಂಗ್ಸ್ ಸೇರಿದಂತೆ ಕೆಲವು ಫ್ರಾಂಚೈಸಿಗಳು ಆರ್​ಟಿಎಂ ಆಯ್ಕೆ ಇರಬಾರದೆಂಬ ವಾದವನ್ನು ಸಹ ಮುಂದಿಟ್ಟಿದ್ದಾರೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳಿಗೆ ಆರ್​ಟಿಎಂ ಆಯ್ಕೆಯನ್ನು ನೀಡಲಿದೆಯಾ ಎಂಬುದು ಪ್ರಶ್ನೆ.

ಆರ್​ಟಿಎಂ ಆಯ್ಕೆ ಬಳಸಲಾಗಿದೆಯಾ?

ಐಪಿಎಲ್ ಮೆಗಾ ಹರಾಜಿನ ವೇಳೆ ಮಾತ್ರ ಆರ್​ಟಿಎಂ ಆಯ್ಕೆಗಳನ್ನು ಬಳಸಲಾಗುತ್ತದೆ. 2018 ರ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ಪರಿಚಯಿಸಲಾಗಿತ್ತು. ಈ ವೇಳೆ ಮೂವರು ಆಟಗಾರರ ಮೇಲೆ ಆರ್​​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಲಾಗಿತ್ತು.

ಆದರೆ 2022 ರಲ್ಲಿ ನಡೆದ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ತೆಗೆದು ಹಾಕಲಾಗಿತ್ತು. ಇದಕ್ಕೆ ಮುಖ್ಯ ಕಾರಣ ಎರಡು ಹೊಸ ತಂಡಗಳ ಸೇರ್ಪಡೆ. ಅಂದರೆ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹರಾಜಿನಲ್ಲಿ ಕಾಣಿಸಿಕೊಂಡಿದ್ದರಿಂದ ಈ ನಿಮಯವನ್ನು ಬಳಸಲಾಗಿರಲಿಲ್ಲ.

ಈ ಬಾರಿಯ ಐಪಿಎಲ್​ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆಗಾಗಿ ಫ್ರಾಂಚೈಸಿಗಳು ಮನವಿ ಮಾಡಿದೆ. ಹೀಗಾಗಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಆರ್​ಟಿಎಂ ಆಯ್ಕೆ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!