AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?

IPL 2025: ಈ ಬಾರಿಯ ಐಪಿಎಲ್​ಗೂ ಮುನ್ನ ಆಟಗಾರರ ಮೆಗಾ ಹರಾಜು ನಡೆಯಲಿದೆ. ಇತ್ತ ಮೆಗಾ ಹರಾಜು ನಡೆಯುವುದರಿಂದ ಪ್ರತಿ ತಂಡಗಳು ನಾಲ್ಕೈದು ಆಟಗಾರರನ್ನು ಉಳಿಸಿ ಉಳಿದವರೆಲ್ಲರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಬೇಕೆಂದು ಕೆಲ ಫ್ರಾಂಚೈಸಿಗಳು ಬಿಸಿಸಿಐಗೆ ಮನವಿ ಸಲ್ಲಿಸಿದೆ.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Jul 29, 2024 | 12:08 PM

Share

ಐಪಿಎಲ್ 2025ರ ಸಿದ್ಧತೆಗಳು ಶುರುವಾದ ಬೆನ್ನಲ್ಲೇ RTM ಆಯ್ಕೆಯು ಚರ್ಚಾ ವಿಷಯವಾಗಿದೆ. ಹೀಗೆ ಚರ್ಚೆಯಾಗಲು ಮುಖ್ಯ ಕಾರಣ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ RTM ಆಯ್ಕೆ ನೀಡಬೇಕೆಂಬ ಬೇಡಿಕೆಯಿಟ್ಟಿರುವುದು. ಈ ಬೇಡಿಕೆಯ ಬೆನ್ನಲ್ಲೇ ಏನಿದು ಆರ್​ಟಿಎಂ ಎಂಬ ಪ್ರಶ್ನೆ ಕೂಡ ಕೂಡ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಆರ್​ಟಿಎಂ ಕಾರ್ಡ್​ ಎಂದರೆ ರೈಟ್ ಟು ಮ್ಯಾಚ್ (RTM) ಆಯ್ಕೆ. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು.

ಇಲ್ಲಿ ಒಂದು ಫ್ರಾಂಚೈಸಿಯು ಆರ್​ಟಿಎಂ ಆಯ್ಕೆ ಬಳಸಿ ಆಟಗಾರರನ್ನು ಬಿಡುಗಡೆ ಮಾಡಿದರೂ, ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ.

ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ರಿಲೀಸ್ ಮಾಡಿದರೆ, ಪಾಟಿದಾರ್ ಖರೀದಿ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

ಇನ್ನು ಆರ್​ಟಿಎಂ ಆಯ್ಕೆ ಬಳಸಿ ಬಿಡುಗಡೆ ಮಾಡಲಾದ ರಜತ್ ಪಾಟಿದಾರ್​ಗಾಗಿ ಸಿಎಸ್​ಕೆ ಫ್ರಾಂಚೈಸಿಯು 10 ಕೋಟಿ ರೂ. ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಆರ್​ಸಿಬಿ ಪಾಟಿದಾರ್ ಅವರನ್ನು ಮರಳಿ ಖರೀದಿಸಬಹುದು.

ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಹೀಗಾಗಿಯೇ ಈ ಆಯ್ಕೆಯನ್ನು ಆಟಗಾರರ ಮೇಲಿನ ಹಕ್ಕುಸ್ವಾಮ್ಯ ಎನ್ನಲಾಗುತ್ತದೆ.

ಈ ಆಯ್ಕೆ ಏಕೆ?

ಆರ್​ಟಿಎಂ ಆಯ್ಕೆಯಲ್ಲಿ ಬಿಡುಗಡೆಯಾದ ಆಟಗಾರರು ಬಿಡ್ಡಿಂಗ್​ ಮೂಲಕ ಹೆಚ್ಚಿನ ಮೊತ್ತ ಪಡೆಯಬಹುದು. ಒಂದು ವೇಳೆ ಯಾರು ಸಹ ಬಿಡ್ಡಿಂಗ್ ಮಾಡದಿದ್ದರೆ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ಆರ್​ಟಿಎಂ ಬಳಸಿದ ಫ್ರಾಂಚೈಸಿ ತಂಡದಲ್ಲೇ ಉಳಿಯುತ್ತಾರೆ.

ಈ ಆಯ್ಕೆಗೆ ಯಾಕೆ ಬೇಡಿಕೆ?

ಐಪಿಎಲ್​ನಲ್ಲಿ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ ಈ ಆಯ್ಕೆ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಇದಕ್ಕೆ ಮುಖ್ಯ ಕಾರಣ ರಿಟೈನ್ ಆಟಗಾರರ ಸಂಖ್ಯೆ ಕಡಿಮೆ ಇರುವುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೇವಲ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿದರೆ, ಉಳಿದ 21 ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಇದರಿಂದ ಮೆಗಾ ಹರಾಜಿನ ಬಳಿಕ ಇಡೀ ತಂಡ ಬದಲಾಗುವ ಸಾಧ್ಯತೆ ಹೆಚ್ಚು. ಅದರಲ್ಲೂ ಒಂದು ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತದೆ.

ಉದಾಹರಣೆಗೆ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕಳೆದ ಸೀಸನ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ತಂಡದ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲು ಕೆಕೆಆರ್ ಬಯಸುತ್ತಿದೆ. ಆ ಆಟಗಾರರನ್ನು ಉಳಿಸಿಕೊಳ್ಳಬೇಕಿದ್ದರೆ ಆರ್​ಟಿಎಂ ಆಯ್ಕೆ ಇರಲೇಬೇಕು. ಇಲ್ಲದಿದ್ದರೆ ಕೆಕೆಆರ್ ಆಟಗಾರರು ಇತರೆ ಫ್ರಾಂಚೈಸಿಗಳ ಪಾಲಾಗುವ ಸಾಧ್ಯತೆ ಹೆಚ್ಚು.

ಇಲ್ಲಿ ಕೆಕೆಆರ್ ಫ್ರಾಂಚೈಸಿಯು 8 ಆರ್​ಟಿಎಂ ಆಯ್ಕೆಗಳಿಗಾಗಿ ಬೇಡಿಕೆಯಿಟ್ಟಿದೆ ಎಂದು ತಿಳಿದು ಬಂದಿದೆ. ಈ ಮೂಲಕ ತನ್ನ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದೆ. ಆದರೆ ಪಂಜಾಬ್ ಕಿಂಗ್ಸ್ ಸೇರಿದಂತೆ ಕೆಲವು ಫ್ರಾಂಚೈಸಿಗಳು ಆರ್​ಟಿಎಂ ಆಯ್ಕೆ ಇರಬಾರದೆಂಬ ವಾದವನ್ನು ಸಹ ಮುಂದಿಟ್ಟಿದ್ದಾರೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳಿಗೆ ಆರ್​ಟಿಎಂ ಆಯ್ಕೆಯನ್ನು ನೀಡಲಿದೆಯಾ ಎಂಬುದು ಪ್ರಶ್ನೆ.

ಆರ್​ಟಿಎಂ ಆಯ್ಕೆ ಬಳಸಲಾಗಿದೆಯಾ?

ಐಪಿಎಲ್ ಮೆಗಾ ಹರಾಜಿನ ವೇಳೆ ಮಾತ್ರ ಆರ್​ಟಿಎಂ ಆಯ್ಕೆಗಳನ್ನು ಬಳಸಲಾಗುತ್ತದೆ. 2018 ರ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ಪರಿಚಯಿಸಲಾಗಿತ್ತು. ಈ ವೇಳೆ ಮೂವರು ಆಟಗಾರರ ಮೇಲೆ ಆರ್​​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಲಾಗಿತ್ತು.

ಆದರೆ 2022 ರಲ್ಲಿ ನಡೆದ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ತೆಗೆದು ಹಾಕಲಾಗಿತ್ತು. ಇದಕ್ಕೆ ಮುಖ್ಯ ಕಾರಣ ಎರಡು ಹೊಸ ತಂಡಗಳ ಸೇರ್ಪಡೆ. ಅಂದರೆ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹರಾಜಿನಲ್ಲಿ ಕಾಣಿಸಿಕೊಂಡಿದ್ದರಿಂದ ಈ ನಿಮಯವನ್ನು ಬಳಸಲಾಗಿರಲಿಲ್ಲ.

ಈ ಬಾರಿಯ ಐಪಿಎಲ್​ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆಗಾಗಿ ಫ್ರಾಂಚೈಸಿಗಳು ಮನವಿ ಮಾಡಿದೆ. ಹೀಗಾಗಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಆರ್​ಟಿಎಂ ಆಯ್ಕೆ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್