AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ನೆಲದಲ್ಲೇ ತಾನು ಹೊರಹಾಕಿದ ಆಟಗಾರನಿಂದಲೇ ಸೋಲು; ಸಪ್ಪೆ ಮೊರೆ ಹಾಕಿ ಕುಳಿತ ಕಾವ್ಯ ಮಾರನ್

Sunrisers Hyderabad's Crushing IPL Defeat: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ನ ಸೋಲು ಕಾವ್ಯಾ ಮಾರನ್ ಅವರಿಗೆ ದೊಡ್ಡ ಆಘಾತ ನೀಡಿದೆ. ಹಿಂದೆ ತಂಡದಿಂದ ಕೈಬಿಡಲಾಗಿದ್ದ ನಿಕೋಲಸ್ ಪೂರನ್ 70 ರನ್ ಗಳಿಸಿ ಮಾಜಿ ತಂಡದ ಸೋಲಿಗೆ ಕಾರಣವಾಗಿರುವುದು ಕಾವ್ಯ ಬೇಸರಗೊಳ್ಳುವಂತೆ ಮಾಡಿದೆ. ಕಾವ್ಯಾ ಅವರ ನಿರಾಶೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ತನ್ನ ನೆಲದಲ್ಲೇ ತಾನು ಹೊರಹಾಕಿದ ಆಟಗಾರನಿಂದಲೇ ಸೋಲು; ಸಪ್ಪೆ ಮೊರೆ ಹಾಕಿ ಕುಳಿತ ಕಾವ್ಯ ಮಾರನ್
Nicholas Pooran, Kavya Maran
ಪೃಥ್ವಿಶಂಕರ
|

Updated on:Mar 28, 2025 | 4:16 PM

Share

ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಭಾರಿ ಅಂತರದಿಂದ ಸೋಲಿಸಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ (SRH vs LSG) ವಿರುದ್ಧವೂ ಪ್ರಬಲ ಗೆಲುವು ಸಾಧಿಸುತ್ತದೆ ಎಂದು ತಂಡದ ಒಡತಿ ಕಾವ್ಯ ಮಾರನ್ (kavya maran) ಆಶಿಸಿದ್ದರು. ಆದರೆ ಹೈದರಾಬಾದ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಇದಕ್ಕೆ ತದ್ವಿರುದ್ಧವಾದ ಫಲಿತಾಂಶ ಹೊರಬಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್‌ 190 ರನ್‌ಗಳನ್ನು ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಲಕ್ನೋ ಕೇವಲ 16.1 ಓವರ್‌ಗಳಲ್ಲಿ ಜಯದ ನಗೆ ಬೀರಿತು.

ಇದಕ್ಕಿಂತ ಇನ್ನೊಂದು ನೋವಿನ ಸಂಗತಿಯೆಂದರೆ ಕಾವ್ಯ ಮಾರನ್ ಯಾವ ಆಟಗಾರನನ್ನು ತಂಡದಿಂದ ಹೊರಹಾಕಿದ್ದರೋ ಆ ಆಟಗಾರನೇ ಹೈದರಾಬಾದ್ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ. ಆ ಬ್ಯಾಟ್ಸ್‌ಮನ್ ಮತ್ತ್ಯಾರು ಅಲ್ಲ, ಕೆಲವು ಸೀಸನ್​ಗಳ ಹಿಂದೆ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆಡಿದ್ದ ನಿಕೋಲಸ್ ಪೂರನ್. ಇದೀಗ ಲಕ್ನೋ ಪರ ಆಡುತ್ತಿರುವ ಪೂರನ್ ತನ್ನ ಹೊಡಿಬಡಿ ಆಟದ ಮೂಲಕ ಹೈದರಾಬಾದ್ ತಂಡದ ಮಾಲಕಿ ಸಪ್ಪೆ ಮೊರೆ ಹಾಕಿ ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಕಾವ್ಯ ಸೋಲಿನ ನೋವಿನಲ್ಲಿ ಕುಳಿತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ
Image
ಆರ್‌ಸಿಬಿಯನ್ನು ಮತ್ತೊಮ್ಮೆ ಗೇಲಿ ಮಾಡಿದ ರಾಯುಡು
Image
ಹೈದರಾಬಾದ್‌ಗೆ ಪಾಠ ಕಲಿಸಿದ ಪೂರನ್-ಮಾರ್ಷ್
Image
ಅತಿ ವೇಗದ ಅರ್ಧಶತಕ ಸಿಡಿಸಿದ ನಿಕೋಲಸ್ ಪೂರನ್
Image
2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್​ಗೆ ಪರ್ಪಲ್ ಕ್ಯಾಪ್

ಕಾವ್ಯ ಮಾರನ್​ಗೆ ನಿರಾಶೆ

ವಾಸ್ತವವಾಗಿ 191 ರನ್‌ಗಳ ಗುರಿಯನ್ನು ಲಕ್ನೋ ತಂಡ ಬೆನ್ನಟ್ಟಲು ನಮ್ಮ ತಂಡದ ಬೌಲರ್​ಗಳು ಬಿಡುವುದಿಲ್ಲ ಎಂಬುದು ಕಾವ್ಯ ಮಾರನ್ ನಿರೀಕ್ಷೆಯಾಗಿತ್ತು. ಆದರೆ ನಿಕೋಲಸ್ ಪೂರನ್, ಕಾವ್ಯ ಅವರ ಭರವಸೆಗಳನ್ನು ಹುಸಿಗೊಳಿಸಿದರು. ಎರಡನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದ ಪೂರನ್ ಸಿಕ್ಸರ್ ಮತ್ತು ಬೌಂಡರಿಗಳ ಮಳೆಗರೆದರು. ಪೂರನ್ ಅವರ ಆಕ್ರಮಣಕಾರಿ ಆಟದಿಂದ ಸೋಲು ಖಚಿತ ಎಂಬುದನ್ನು ಅರಿತುಕೊಂಡ ಕಾವ್ಯ ಮಾರನ್ ಸಪ್ಪೆ ಮೊರೆ ಹಾಕಿಕೊಂಡು ಮೌನಕ್ಕೆ ಜಾರಿದರು. ಅವರ ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಕಾಲೆಳೆದಿದ್ದಾರೆ.

ಸೇಡು ತೀರಿಸಿಕೊಂಡ ಪೂರನ್

ವಾಸ್ತವವಾಗಿ, ನಿಕೋಲಸ್ ಪೂರನ್ 2019 ರಲ್ಲಿ ಪಂಜಾಬ್ ಕಿಂಗ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. 3 ಸೀಸನ್‌ಗಳ ನಂತರ, ಕಾವ್ಯ ಮಾರನ್ 2022 ರ ಸೀಸನ್​ನಲ್ಲಿ 10.75 ಕೋಟಿ ಬೆಲೆಗೆ ಪೂರನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡರು. ಹೈದರಾಬಾದ್‌ ಪರ 14 ಪಂದ್ಯಗಳನ್ನಾಡಿದ್ದ ಪೂರನ್ 144 ಸ್ಟ್ರೈಕ್ ರೇಟ್‌ನಲ್ಲಿ 306 ರನ್ ಕಲೆಹಾಕಿದ್ದರು. ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, 2023 ರ ಹರಾಜಿಗೂ ಮುನ್ನ ಅವರನ್ನು ತಂಡದಿಂದ ಕೈಬಿಡಲಾಯಿತು. ನಂತರ ಲಕ್ನೋ ಸೂಪರ್ ಜೈಂಟ್ಸ್ ನಿಕೋಲಸ್ ಪೂರನ್ ಅವರನ್ನು ಖರೀದಿಸಿತು. ಈಗ ಅವರು ಹೈದರಾಬಾದ್ ವಿರುದ್ಧ ಕೇವಲ 26 ಎಸೆತಗಳಲ್ಲಿ 269 ಸ್ಟ್ರೈಕ್ ರೇಟ್‌ನಲ್ಲಿ 70 ರನ್ ಗಳಿಸುವ ಮೂಲಕ ತಮ್ಮ ಸೇಡನ್ನು ತೀರಿಸಿಕೊಂಡಿದ್ದಾರೆ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Fri, 28 March 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ