AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೇಯ್​… ಫ್ರೀ ಹಿಟ್​ ತಪ್ಪಿಸಿಕೊಂಡಿದ್ದಕ್ಕೆ ಕಾವ್ಯ ಮಾರನ್ ಫುಲ್ ಗರಂ

IPL 2025 CSK vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2025) 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 154 ರನ್ ಕಲೆಹಾಕಿದರೆ, ಈ ಗುರಿಯನ್ನು ಎಸ್​ಆರ್​ಹೆಚ್ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ.

IPL 2025: ಹೇಯ್​... ಫ್ರೀ ಹಿಟ್​ ತಪ್ಪಿಸಿಕೊಂಡಿದ್ದಕ್ಕೆ ಕಾವ್ಯ ಮಾರನ್ ಫುಲ್ ಗರಂ
Kavya Maran - Kamindu
ಝಾಹಿರ್ ಯೂಸುಫ್
|

Updated on: Apr 26, 2025 | 8:32 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದ ವೇಳೆ ಕಾಣಿಸಿಕೊಂಡ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಮಾಲಕಿ ಕಾವ್ಯ ಮಾರನ್ (Kavya Maran) ಅವರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೀಗೆ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಕಾವ್ಯ ಬ್ಯಾಟರ್​​ ಮೇಲೆ ಕೋಪಗೊಂಡಿರುವುದು. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಸಿಎಸ್​ಕೆ ತಂಡವನ್ನು ಬ್ಯಾಟಿಂಗ್​​ಗೆ ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ಪರ ಕಮಿಂಡು ಮೆಂಡಿಸ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಎಚ್ಚರಿಕೆಯೊಂದಿಗೆ ಬ್ಯಾಟಿಂಗ್ ಪ್ರದರ್ಶಿಸಿದ ಕಮಿಂದು ಮೆಂಡಿಸ್​ಗೆ 16ನೇ ಓವರ್​ನಲ್ಲಿ ಫ್ರೀ ಹಿಟ್​ ಲಭಿಸಿದೆ. ನೂರ್ ಅಹ್ಮದ್ ಎಸೆದ 16ನೇ ಓವರ್​ನ 3ನೇ ಎಸೆತವು ಲೈ ನೋಬಾಲ್ ಆಗಿತ್ತು. ಹೀಗಾಗಿ ಅಂಪೈರ್ ಫ್ರೀ ಹಿಟ್ ಕರೆದರು. ಆದರೆ ಫ್ರೀ ಹಿಟ್​ನಲ್ಲಿ ಕಮಿಂದುಗೆ ಒಂದೇ ಒಂದು ರನ್​ ಕಲೆಹಾಕಲು ಸಾಧ್ಯವಾಗಲಿಲ್ಲ.

ಇತ್ತ ಕಮಿಂದು ಮೆಂಡಿಸ್ ಫ್ರೀ ಹಿಟ್ ಎಸೆತವನ್ನು ತಪ್ಪಿಸಿಕೊಳ್ಳುತ್ತಿದ್ದಂತೆ ಅತ್ತ ಸ್ಟೇಡಿಯಂ ಗ್ಯಾಲರಿಯಲ್ಲಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಕೋಪಗೊಂಡು ಕೈ ತೋರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಎಸ್​ಆರ್​ಹೆಚ್ ಓನರ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ವಿಡಿಯೋಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ.

ಕಾವ್ಯ ಮಾರನ್ ರಿಯಾಕ್ಷನ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೀಡಿದ 155 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ಪರ ಎಡಗೈ ದಾಂಡಿಗ ಕಮಿಂದು ಮೆಂಡಿಸ್ 22 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ ಅಜೇಯ 32 ರನ್ ಬಾರಿಸಿದರು. ಮತ್ತೊಂದೆಡೆ ನಿತೀಶ್ ಕುಮಾರ್ ರೆಡ್ಡಿ 13 ಎಸೆತಗಳಲ್ಲಿ 2 ಫೋರ್​ಗಳೊಂದಿಗೆ ಅಜೇಯ 19 ರನ್ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು 18.4 ಓವರ್​ಗಳಲ್ಲಿ ಗುರಿ ಮುಟ್ಟಿಸಿ 5 ವಿಕೆಟ್​ಗಳ ಜಯ ತಂದುಕೊಟ್ಟಿದ್ದಾರೆ.

ಇದನ್ನೂ ಓದಿ: VIDEO: ಹೀಗೂ ಉಂಟೆ… ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್

ಈ ಗೆಲುವಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ. ಅಲ್ಲದೆ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅತ್ತ ಎಸ್​ಆರ್​ಹೆಚ್ ವಿರುದ್ಧ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಅಲಂಕರಿಸಿದೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ