Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 2025 ರ ಐಪಿಎಲ್ ವೇಳಾಪಟ್ಟಿಯಲ್ಲಿ ಹಠಾತ್ ಬದಲಾವಣೆ

KKR vs LSG IPL 2025 Match Postponed: ಐಪಿಎಲ್ 2025ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ದಿನಾಂಕವನ್ನು ಬದಲಾಯಿಸಲಾಗಿದೆ. ಏಪ್ರಿಲ್ 6 ರಂದು ನಡೆಯಬೇಕಿದ್ದ ಪಂದ್ಯವನ್ನು ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಕೋಲ್ಕತ್ತಾ ಪೊಲೀಸರ ವಿನಂತಿಯ ಮೇರೆಗೆ ಈ ಬದಲಾವಣೆ ಮಾಡಲಾಗಿದೆ. ಪಂದ್ಯದ ಸ್ಥಳದಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿಯೇ ನಡೆಯಲಿದೆ.

IPL 2025: 2025 ರ ಐಪಿಎಲ್ ವೇಳಾಪಟ್ಟಿಯಲ್ಲಿ ಹಠಾತ್ ಬದಲಾವಣೆ
Ipl 2025
Follow us
ಪೃಥ್ವಿಶಂಕರ
|

Updated on:Mar 28, 2025 | 10:26 PM

ಐಪಿಎಲ್ 2025 (IPL 2025) ರ ವೇಳಾಪಟ್ಟಿಯಲ್ಲಿ ಹಠಾತ್ ಬದಲಾವಣೆಯಾಗಿದೆ. ಹಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿ ಇದೀಗ ನಿಜವಾಗಿದ್ದು, ಎರಡು ಬಲಿಷ್ಠ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದ ದಿನಾಂಕವನ್ನು ಬದಲಾಯಿಸಿರುವುದಾಗಿ ಬಿಸಿಸಿಐ (BCCI) ಅಧಿಕೃತ ಮಾಹಿತಿ ನೀಡಿದೆ. ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವಿನ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಪಂದ್ಯದ ದಿನಾಂಕವನ್ನು ಬದಲಾಯಿಸಲಾಗಿದೆ. ಪೂರ್ವ ನಿಗದಿಯಂತೆ, ಏಪ್ರಿಲ್ 6 ರಂದು ನಡೆಯಬೇಕಿದ್ದ ಪಂದ್ಯವನ್ನು ಏಪ್ರಿಲ್ 8 ರಂದು ನಡೆಸುವುದಾಗಿ ಬಿಸಿಸಿಐ ತಿಳಿಸಿದೆ. ಅಂದರೆ ಪಂದ್ಯದ ದಿನಾಂಕವನ್ನು ಬದಲಾಯಿಸಲಾಗಿದೆಯಾದರೂ ಸ್ಥಳದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪಂದ್ಯದ ದಿನಾಂಕದಲ್ಲಿ ಬದಲಾವಣೆ

ಐಪಿಎಲ್ 2025 ರ 19 ನೇ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಈ ಪಂದ್ಯ ಏಪ್ರಿಲ್ 6 ರಂದು ಕೋಲ್ಕತ್ತಾದ ತವರು ಮೈದಾನ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿತ್ತು. ಆದರೆ ಏಪ್ರಿಲ್ 6 ರಂದು ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ, ಈ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಕೋಲ್ಕತ್ತಾ ಪೊಲೀಸರು ಬಿಸಿಸಿಐಗೆ ಕೇಳಿಕೊಂಡಿದ್ದರು. ನಗರದಲ್ಲಿ ನಡೆಯಲಿರುವ ಉತ್ಸವದ ಭದ್ರತಾ ವ್ಯವಸ್ಥೆಗಳನ್ನು ಉಲ್ಲೇಖಿಸಿ ಕೋಲ್ಕತ್ತಾ ಪೊಲೀಸರು ಈ ಬದಲಾವಣೆಯನ್ನು ಕೋರಿದ್ದರು. ಅಂದಿನಿಂದ, ಬಿಸಿಸಿಐ ಒಳಗೆ ಇದರ ಬಗ್ಗೆ ನಿರಂತರ ಚರ್ಚೆ ನಡೆಯುತ್ತಿತ್ತು.

ಇದನ್ನೂ ಓದಿ
Image
ಸಿಎಸ್​ಕೆ ಕಳಪೆ ಫಿಲ್ಡಿಂಗ್; 4 ರನ್​ಗಳ ಅಂತರದಲ್ಲಿ 3 ಕ್ಯಾಚ್ ಡ್ರಾಪ್
Image
ಕೊಹ್ಲಿಯನ್ನು ಕೆರಳಿಸಿದ ಪತಿರಾನ ಬೌನ್ಸರ್; ಮುಂದೆ ನಡೆದಿದ್ದೇನು? ವಿಡಿಯೋ
Image
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
Image
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ

ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುವ ಮೊದಲು, ಈ ಪಂದ್ಯವನ್ನು ಕೋಲ್ಕತ್ತಾದ ಬದಲು ಗುವಾಹಟಿಯಲ್ಲಿ ನಡೆಸಲಾಗುವುದು ಎಂಬ ಊಹಾಪೋಹಗಳು ಮತ್ತು ವದಂತಿಗಳು ನಿರಂತರವಾಗಿ ಹರಡುತ್ತಿದ್ದವು. ಆದರೆ ಬಿಸಿಸಿಐ, ಬಂಗಾಳ ಕ್ರಿಕೆಟ್ ಸಂಸ್ಥೆ ಮತ್ತು ಕೋಲ್ಕತ್ತಾ ಸರ್ಕಾರ ಇಂತಹ ವದಂತಿಗಳನ್ನು ತಿರಸ್ಕರಿಸಿ, ಪಂದ್ಯವನ್ನು ಕೋಲ್ಕತ್ತಾದಲ್ಲಿ ಮಾತ್ರ ನಡೆಸಲಾಗುವುದು ಎಂದು ಹೇಳಿದ್ದವು. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಂದರ್ಭದಲ್ಲಿ ಬಿಸಿಸಿಐ ತನ್ನ ನಿರ್ಧಾರವನ್ನು ಪ್ರಕಟಿಸಿದ್ದು, ಪಂದ್ಯದ ಸ್ಥಳದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ. ಆದರೆ ಏಪ್ರಿಲ್ 6 ರ ಭಾನುವಾರದ ಬದಲು ಈ ಪಂದ್ಯವು ಏಪ್ರಿಲ್ 8 ರ ಮಂಗಳವಾರ ನಡೆಯಲಿದೆ. ಆದಾಗ್ಯೂ, ಮಂಗಳವಾರ ಈ ಪಂದ್ಯವು ಮಧ್ಯಾಹ್ನ 3.30 ಕ್ಕೆ ಪ್ರಾರಂಭವಾಗಲಿದೆ.

ಈ ಮೊದಲು ಈ ಪಂದ್ಯ ಭಾನುವಾರ ಮಧ್ಯಾಹ್ನ 3.30ಕ್ಕೆ ನಡೆಯಬೇಕಿತ್ತು. ಆದರೆ ಈಗ ಈ ಬದಲಾವಣೆಯಿಂದಾಗಿ, ಏಪ್ರಿಲ್ 6 ರ ಭಾನುವಾರದಂದು ಡಬಲ್ ಹೆಡರ್ ಬದಲಿಗೆ ಒಂದೇ ಒಂದು ಪಂದ್ಯ ನಡೆಯಲಿದೆ. ಪೂರ್ವ ನಿರ್ಧಾರಿತ ವೇಳಾಪಟ್ಟಿಯ ಪ್ರಕಾರ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಅಹಮದಾಬಾದ್‌ನಲ್ಲಿ ಸಂಜೆ 7.30 ಕ್ಕೆ ಏಕೈಕ ಪಂದ್ಯ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Fri, 28 March 25

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ