AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 49 ನೆನಪಿದ್ಯಾ? RCB ಕಾಲೆಳೆದ KKR

IPL ಇತಿಹಾಸದಲ್ಲಿ ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕೆಟ್ಟ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಈ ಹೀನಾಯ ದಾಖಲೆಯನ್ನು ಪ್ರಸ್ತಾಪಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ಆರ್​ಸಿಬಿ ತಂಡದ ಕಾಲೆಳೆದಿದೆ. ಈ ಮೂಲಕ ಐಪಿಎಲ್​ ಆರಂಭಕ್ಕೂ ಮುನ್ನವೇ ಕೆಕೆಆರ್ ಮೈಂಡ್ ಗೇಮ್​ ಶುರು ಮಾಡಿದೆ.

IPL 2025: 49 ನೆನಪಿದ್ಯಾ? RCB ಕಾಲೆಳೆದ KKR
Rcb Vs Kkr
ಝಾಹಿರ್ ಯೂಸುಫ್
|

Updated on:Feb 18, 2025 | 2:21 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಾಲೆಳೆದಿದೆ. ಅದು ಕೂಡ 49 ರನ್​ಗಳ ಆಲೌಟ್ ಅನ್ನು ಪ್ರಸ್ತಾಪಿಸುವ ಮೂಲಕ ಎಂಬುದೇ ವಿಶೇಷ. 2017 ರಲ್ಲಿ ಆರ್​ಸಿಬಿ ತಂಡವು ಕೆಕೆಆರ್ ನೀಡಿದ 131 ರನ್​ಗಳ ಗುರಿಯನ್ನು ಬೆನ್ನತ್ತಿ ಕೇವಲ 49 ರನ್​ಗಳಿಗೆ ಆಲೌಟ್ ಆಗಿತ್ತು. ಈ ವೇಳೆ ಆರ್​ಸಿಬಿ ಪರ ಮೂಡಿಬಂದ ಗರಿಷ್ಠ ವೈಯುಕ್ತಿಕ ಸ್ಕೋರ್ 9 ರನ್​. ಇದನ್ನು ಬಾರಿಸಿದ್ದು ಕೇದರ್ ಜಾಧವ್.

ಅಂದು ಕೇವಲ 49 ರನ್​ಗೆ ಆಲೌಟ್ ಆಗುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಸರ್ವಪತನ ಕಂಡ ತಂಡವೆಂಬ ಕೆಟ್ಟ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದನ್ನೇ ಪ್ರಸ್ತಾಪಿಸಿ ಇದಿಗ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡು ಕೆಕೆಆರ್, ಆರ್​ಸಿಬಿ ತಂಡದ ಕಾಲೆಳೆದಿದೆ.

ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿರುವುದು. ಮಾರ್ಚ್ 22 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಕೆಕೆಆರ್​ ಹಳೆಯ ಸೋಲಿನ ಕಹಿ ನೆನಪನ್ನು ನೆನಪಿಸಿದೆ.

ಈ ಮೂಲಕ ಮೊದಲ ಪಂದ್ಯಕ್ಕೂ ಮುನ್ನವೇ ಕೊಲ್ಕತ್ತಾ ನೈಟ್ ರೈಡರ್ಸ್ ಆರ್​ಸಿಬಿ ವಿರುದ್ಧ ಮೈಂಡ್ ಗೇಮ್ ಆರಂಭಿಸಿದೆ. ಕೆಕೆಆರ್ ಕಾಲೆಳೆಯುವಿಕೆಗೆ ಆರ್​ಸಿಬಿ ಕಡೆಯಿಂದ ಈವರೆಗೆ ಯಾವುದೇ ಪ್ರತ್ಯುತ್ತರ ಬಂದಿಲ್ಲ.

ಅಂತಹದೊಂದು ಕೌಂಟರ್ ಅನ್ನು ಮಾರ್ಚ್​ 22 ರಂದು ನಿರೀಕ್ಷಿಸಬಹುದು. ಏಕೆಂದರೆ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಆರ್​ಸಿಬಿ ಬಗ್ಗು ಬಡಿದರೆ, ಸೋಷಿಯಲ್ ಮೀಡಿಯಾದಲ್ಲಿ 49 ರನ್​ಗಳ ಟ್ರೋಲ್​ಗೆ ಉತ್ತರ ಸಿಗಬಹುದು. ಅಲ್ಲಿಯವರೆಗೂ ಆರ್​ಸಿಬಿ ಅಭಿಮಾನಿಗಳು ಕಾಯಲೇಬೇಕು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ಇದನ್ನೂ ಓದಿ: IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ

ಕೊಲ್ಕತ್ತಾ ನೈಟ್ ರೈಡರ್ಸ್: ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣ್​​​ದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅನ್ರಿಕ್ ನೋಕಿಯ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಪೊವೆಲ್, ಲವ್​​ನೀತ್ ಸಿಸೋಡಿಯಾ, ಅಜಿಂಕ್ಯ ರಹಾನೆ, ಅನ್ಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್, ಸ್ಪೆನ್ಸರ್ ಜಾನ್ಸನ್.

Published On - 2:20 pm, Tue, 18 February 25

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ