AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಆರಂಭಕ್ಕೂ ಮುನ್ನವೇ ವೇಳಾಪಟ್ಟಿ ಬದಲಾವಣೆ; ಕೊಲ್ಕತ್ತಾದಿಂದ ಗುವಾಹಟಿಗೆ ಪಂದ್ಯ ಶಿಫ್ಟ್

IPL 2025 Schedule Change: 2025ರ ಐಪಿಎಲ್‌ನ 18ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ಮೊದಲು ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು, ರಾಮನವಮಿ ಆಚರಣೆಯಿಂದಾಗಿ ಭದ್ರತಾ ಕಾರಣಗಳಿಗಾಗಿ ಗುವಾಹಟಿಗೆ ಸ್ಥಳಾಂತರಿಸಲಾಗಿದೆ. ಈ ಬದಲಾವಣೆಯಿಂದ ಬಂಗಾಳ ಕ್ರಿಕೆಟ್ ಸಂಸ್ಥೆಗೆ ಆರ್ಥಿಕ ನಷ್ಟ ಉಂಟಾಗಲಿದೆ. ಅಸ್ಸಾಂ ಕ್ರಿಕೆಟ್ ಸಂಸ್ಥೆ ಪಂದ್ಯಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡುವುದಾಗಿ ಭರವಸೆ ನೀಡಿದೆ.

ಐಪಿಎಲ್ ಆರಂಭಕ್ಕೂ ಮುನ್ನವೇ ವೇಳಾಪಟ್ಟಿ ಬದಲಾವಣೆ; ಕೊಲ್ಕತ್ತಾದಿಂದ ಗುವಾಹಟಿಗೆ ಪಂದ್ಯ ಶಿಫ್ಟ್
Kkr
ಪೃಥ್ವಿಶಂಕರ
|

Updated on:Mar 20, 2025 | 9:34 PM

Share

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಮಾರ್ಚ್ 22 ರಿಂದ ಪ್ರಾರಂಭವಾಗುತ್ತಿದೆ. ಆದರೆ ಈ ಲೀಗ್ ಪ್ರಾರಂಭವಾಗುವ ಮೊದಲೇ ಅದರ ವೇಳಾಪಟ್ಟಿ ಬದಲಾಗಿದೆ. ವಾಸ್ತವವಾಗಿ, ಈ ಲೀಗ್‌ನ ಒಂದು ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ಏಪ್ರಿಲ್ 6 ರಂದು ನಡೆಯಬೇಕಾಗಿದ್ದ ಕೆಕೆಆರ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ನಡುವಿನ ಪಂದ್ಯದ ಸ್ಥಳವನ್ನು ಬದಲಾಯಿಸಲಾಗಿದೆ. ಈ ಪಂದ್ಯವನ್ನು ಮೊದಲು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಈ ಪಂದ್ಯವನ್ನು ಗುವಾಹಟಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕೋಲ್ಕತ್ತಾದಲ್ಲಿ ರಾಮನವಮಿ ಆಚರಣೆಯ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಂಗಾಳ ಕ್ರಿಕೆಟ್ ಸಂಸ್ಥೆಗೆ ನಷ್ಟ

ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಈ ಮಾಹಿತಿ ನೀಡಿದ್ದು, ರಾಮನವಮಿ ದಿನದಂದು ನಗರದಲ್ಲಿ 20,000 ಕ್ಕೂ ಹೆಚ್ಚು ಮೆರವಣಿಗೆಗಳು ನಡೆಯುವುದರಿಂದ ಪಂದ್ಯಕ್ಕೆ ಸಂಪೂರ್ಣ ಭದ್ರತೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಕೋಲ್ಕತ್ತಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾವು ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಲು ಬಿಸಿಸಿಐ ಅನ್ನು ಕೇಳಿಕೊಂಡಿದ್ದೇವು. ಆ ಪ್ರಕಾರ ಈಗ ಈ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್‌ಜೈಂಟ್ಸ್ ನಡುವಿನ ಈ ಪಂದ್ಯವನ್ನು ಕೋಲ್ಕತ್ತಾದಿಂದ ಗುವಾಹಟಿಗೆ ಸ್ಥಳಾಂತರಿಸುವುದರಿಂದ ಬಂಗಾಳ ಕ್ರಿಕೆಟ್ ಅಸೋಸಿಯೇಷನ್​ಗೆ ಸಾಕಷ್ಟು ​​ನಷ್ಟ ಉಂಟಾಗಲಿದೆ. ಏಕೆಂದರೆ ಕೆಕೆಆರ್​ ತಂಡಕ್ಕೆ ಇದು ತವರು ಮೈದಾನ ಆಗಿರುವ ಕಾರಣ, ಈ ಪಂದ್ಯವನ್ನು ವೀಕ್ಷಿಸಲು ಸಾಕಷ್ಟು ಅಭಿಮಾನಿಗಳು ಮೈದಾನಕ್ಕೆ ಬರುವುದು ಖಚಿತವಾಗಿತ್ತು. ಇದರಿಂದ ಸಿಎಬಿ ಖಾತೆಗೆ ಬಹಳಷ್ಟು ಹಣ ಸೇರುತ್ತಿತ್ತು. ಆದರೆ ಈಗ ಈ ಹಣ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್‌ನ ಜೇಬಿಗೆ ಬೀಳಲಿದೆ.

ಇದನ್ನೂ ಓದಿ
Image
ಐಪಿಎಲ್ ಆಟಗಾರರ ಖಾತೆಗೆ ಬಿಳಲಿದೆ ಮತ್ತಷ್ಟು ಹಣ
Image
2ನೇ ಇನ್ನಿಂಗ್ಸ್​ನಲ್ಲಿ ಬೌಲಿಂಗ್ ಮಾಡುವ ತಂಡಕ್ಕೆ ಬಿಸಿಸಿಐ ಬಂಪರ್ ಗಿಫ್ಟ್
Image
ಐಪಿಎಲ್​ಗಾಗಿ 5 ವರ್ಷಗಳ ನಿಷೇಧವನ್ನು ರದ್ದುಗೊಳಿಸಿದ ಬಿಸಿಸಿಐ
Image
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್

ಐಪಿಎಲ್​ನಿಂದ ಅತಿ ಹೆಚ್ಚು ಹಣ ಸಂಪಾದಿಸಿದ ಟಾಪ್ 10 ಆಟಗಾರರಿವರು

ಗುವಾಹಟಿಯಲ್ಲಿ 3 ಪಂದ್ಯ

ರಾಜಸ್ಥಾನ ರಾಯಲ್ಸ್ ತಂಡವು ಗುವಾಹಟಿಯಲ್ಲಿ ಎರಡು ತವರು ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ಮಾರ್ಚ್ 26 ಮತ್ತು ಮಾರ್ಚ್ 30 ರಂದು ನಡೆಯಲಿವೆ. ಇದಾದ ನಂತರ, ಕೆಕೆಆರ್ ಹಾಗೂ ಲಕ್ನೋ ನಡುವಿನ ಪಂದ್ಯವೂ ಗುವಾಹಟಿಯಲ್ಲಿ ನಡೆಯಲಿದೆ. ಪಂದ್ಯಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವುದಾಗಿ ಅಸ್ಸಾಂ ಕ್ರಿಕೆಟ್ ಸಂಸ್ಥೆ ಭರವಸೆ ನೀಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Thu, 20 March 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ