AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮಳೆಯಿಂದ ಕೋಲ್ಕತ್ತಾ- ಪಂಜಾಬ್ ಪಂದ್ಯ ರದ್ದು; ತಲಾ ಒಂದೊಂದು ಅಂಕ ಹಂಚಿಕೆ

IPL 2025 KKR vs PBKS: ಏಪ್ರಿಲ್ 26ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ 201 ರನ್ ಕಲೆಹಾಕಿತು. ಆದರೆ ಕೋಲ್ಕತ್ತಾ ತಂಡದ ಇನ್ನಿಂಗ್ಸ್ ಆರಂಭವಾದ ತಕ್ಷಣ ಮಳೆ ಆರಂಭವಾಯಿತು. ಒಂದೂವರೆ ಗಂಟೆಗಳ ಕಾಲ ಕಾಯ್ದು ನಂತರ ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಿದರು. ಇದು ಈ ಸೀಸನ್‌ನ ಮೊದಲ ರದ್ದಾದ ಪಂದ್ಯ.

IPL 2025: ಮಳೆಯಿಂದ ಕೋಲ್ಕತ್ತಾ- ಪಂಜಾಬ್ ಪಂದ್ಯ ರದ್ದು; ತಲಾ ಒಂದೊಂದು ಅಂಕ ಹಂಚಿಕೆ
Kkr Vs Pbks
ಪೃಥ್ವಿಶಂಕರ
|

Updated on:Apr 26, 2025 | 11:43 PM

Share

ಐಪಿಎಲ್ 2025 (IPL 2025) ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ (KKR vs PBKS) ನಡುವಿನ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಏಪ್ರಿಲ್ 26 ರ ಶನಿವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಅದ್ಭುತ ಬ್ಯಾಟಿಂಗ್ ಮಾಡಿ ಆತಿಥೇಯ ನೈಟ್ ರೈಡರ್ಸ್ ಮುಂದೆ ದೊಡ್ಡ ಸ್ಕೋರ್ ಕಲೆಹಾಕಿತು. ಆದರೆ ಕೋಲ್ಕತ್ತಾದ ಇನ್ನಿಂಗ್ಸ್ ಆರಂಭವಾದ ತಕ್ಷಣ ಮಳೆ ಸುರಿಯಲಾರಂಭಿಸಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಕಾದ ನಂತರ, ಅಂಪೈರ್‌ಗಳು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು. ಈ ಸೀಸನ್‌ನಲ್ಲಿ ಪಂದ್ಯವೊಂದು ರದ್ದಾಗಿರುವುದು ಇದೇ ಮೊದಲು.

ಪ್ರಿಯಾಂಶ್-ಪ್ರಭ್‌ಸಿಮ್ರಾನ್‌ ಸ್ಫೋಟಕ ಬ್ಯಾಟಿಂಗ್

ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ಗೆ ಮೊದಲ ಸೀಸನ್ ಆಡುತ್ತಿರುವ ಪ್ರಿಯಾಂಶ್ ಆರ್ಯ (69 ರನ್) ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಪ್ರಿಯಾಂಶ್ ಮತ್ತು ಪ್ರಭ್ಸಿಮ್ರಾನ್ ಪವರ್‌ಪ್ಲೇನಲ್ಲಿ ತಂಡಕ್ಕೆ ಅರ್ಧಶತಕದ ಜೊತೆಯಾಟವನ್ನು ನೀಡಿದರು. ಪ್ರಿಯಾಂಶ್ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಈ ಸೀಸನ್‌ನಲ್ಲಿ ಎರಡನೇ ಬಾರಿಗೆ 50 ರನ್‌ಗಳ ಗಡಿ ದಾಟಿದರು.

ಮತ್ತೊಂದೆಡೆ, ಪ್ರಭ್ಸಿಮ್ರನ್ ಸಿಂಗ್ ಕೂಡ ಅದ್ಭುತ ಅರ್ಧಶತಕ ಗಳಿಸಿದರು. ಪ್ರಿಯಾಂಶ್ ಔಟಾದಾಗ 11.5 ಓವರ್‌ಗಳಲ್ಲಿ ಇಬ್ಬರ ನಡುವೆ 120 ರನ್‌ಗಳ ಪಾಲುದಾರಿಕೆ ಇತ್ತು. ಇದಾದ ನಂತರ ಪ್ರಭ್ಸಿಮ್ರನ್ ಸ್ಫೋಟಕ ಬ್ಯಾಟಿಂಗ್ ನಡೆಸಿ 83 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಇಬ್ಬರ ಬ್ಯಾಟಿಂಗ್ ಆಧಾರದ ಮೇಲೆ ಪಂಜಾಬ್ 20 ಓವರ್‌ಗಳಲ್ಲಿ 201 ರನ್ ಗಳಿಸಿತು.

IPL 2025: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್​ಸಿಬಿ; ಡೆಲ್ಲಿ ಗದ್ದುಗೆ ಏರುತ್ತಾ ರಜತ್ ಪಡೆ?

ಕೆಕೆಆರ್‌ ಪ್ಲೇಆಫ್‌ ಹಾದಿ ಮತ್ತಷ್ಟು ದುರ್ಗಮ

ಇದಕ್ಕೆ ಉತ್ತರವಾಗಿ, ಕೋಲ್ಕತ್ತಾದ ಇನ್ನಿಂಗ್ಸ್‌ನ ಮೊದಲ ಓವರ್ ಮುಗಿದ ಕೂಡಲೇ ಇದ್ದಕ್ಕಿದ್ದಂತೆ ಮಳೆ ಸುರಿಯಲು ಪ್ರಾರಂಭಿಸಿತು. ಒಮ್ಮೆ ಪ್ರಾರಂಭವಾದ ಮಳೆ ನಿಲ್ಲಲಿಲ್ಲ. ಕೊನೆಗೆ, ರಾತ್ರಿ 11 ಗಂಟೆ ಸುಮಾರಿಗೆ, ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು. ಇದರರ್ಥ ಎರಡೂ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು.

ಇದರ ಲಾಭವನ್ನು ಪಂಜಾಬ್ ಕಿಂಗ್ಸ್ ಪಡೆದುಕೊಂಡಿದ್ದು ತಂಡವು 11 ಅಂಕಗಳೊಂದಿಗೆ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿತು. ಆದರೆ ಕೋಲ್ಕತ್ತಾ 7 ಅಂಕಗಳೊಂದಿಗೆ ಇನ್ನೂ 7 ನೇ ಸ್ಥಾನದಲ್ಲೇ ಉಳಿಯಿತು. ಪ್ಲೇಆಫ್ ರೇಸ್‌ನಲ್ಲಿ ಈಗಾಗಲೇ ಹಿಂದುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಇನ್ನು ಮುಂದೆ ಯಾವುದೇ ಬೆಲೆ ತೆತ್ತಾದರೂ ಉಳಿದ ಎಲ್ಲಾ 5 ಪಂದ್ಯಗಳನ್ನು ಗೆಲ್ಲಲೇಬೇಕಾಗುತ್ತದೆ, ಆ ನಂತರವೇ ತಂಡವು ಪ್ಲೇಆಫ್ ತಲುಪಲು ಸಾಧ್ಯವಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 pm, Sat, 26 April 25

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?