IPL 2025: ಅವರೊಬ್ಬರು ಇದ್ದರೆ ಸಾಕು, ಚಿಂತೆಯೇ ಇಲ್ಲ: ರಜತ್ ಪಾಟಿದಾರ್

IPL 2025 KKR vs RCB: ಐಪಿಎಲ್ ಸೀಸನ್ 18 ರ ಮೊದಲ ಪಂದ್ಯದಲ್ಲೇ ಆರ್​ಸಿಬಿ ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸುವ ಮೂಲಕ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಪಾಯಿಂಟ್ ಖಾತೆ ತೆರೆದಿದೆ.

IPL 2025: ಅವರೊಬ್ಬರು ಇದ್ದರೆ ಸಾಕು, ಚಿಂತೆಯೇ ಇಲ್ಲ: ರಜತ್ ಪಾಟಿದಾರ್
Rajat Patidar

Updated on: Mar 23, 2025 | 8:23 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್​ ಕಲೆಹಾಕಿತು.

175 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ ಪರ ಆರಂಭಿಕರಾದ ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ (59) ಸ್ಪೋಟಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್​ಸಿಬಿ ತಂಡವು ಕೇವಲ 16.2 ಓವರ್​ಗಳಲ್ಲಿ 177 ರನ್ ಬಾರಿಸಿ 7 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಗೆಲುವಿನ ಸಂಪೂರ್ಣ ಶ್ರೇಯಸ್ಸನ್ನು ಬೌಲರ್​ಗಳಿಗೆ ನೀಡಿದರು. ನಿಜವಾಗಿಯೂ ಇದು ನಾಯಕನಾಗಿ ನನ್ನ ಮೊದಲ ಪಂದ್ಯವಾಗಿದ್ದರಿಂದ ಒತ್ತಡವಿತ್ತು. ಆದರೆ ಆರ್​ಸಿಬಿ ಗೆಲುವಿನೊಂದಿಗೆ ನನ್ನ ಪಾಲಿಗೆ ಒಳ್ಳೆಯ ದಿನವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ನಾವು ಹೀಗೆ ಗೆಲ್ಲುವುದನ್ನು ಮುಂದುವರಿಸಿದರೆ, ಅದು ಒಳ್ಳೆಯ ದಿನವಾಗಿರುತ್ತದೆ. ಹೀಗಾಗಿ ಈ ಗೆಲುವಿನ ಲಯ ಮುಂದುವರೆಸುವ ವಿಶ್ವಾಸವಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಸುಯಶ್ ಶರ್ಮಾ ಅವರನ್ನು ಕಣಕ್ಕಿಳಿಸಿದ ಬಗ್ಗೆ ಮಾತನಾಡಿದ ರಜತ್, ಸುಯಶ್ ಅವರು ರನ್ ನೀಡುವುದರಲ್ಲಿ ನನಗೆ ಯಾವುದೇ ಅಭ್ಯಂತರವಿಲ್ಲ. ಏಕೆಂದರೆ ಅವರು ನಮ್ಮ ಪ್ರಮುಖ ವಿಕೆಟ್ ಟೇಕಿಂಗ್ ಬೌಲರ್. ಹಾಗಾಗಿ ನಾನು ಅವರನ್ನು ಬೆಂಬಲಿಸಿದೆ.

ಇಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಕೃನಾಲ್ ಪಾಂಡ್ಯ ಹಾಗೂ ಸುಯಶ್ ಶರ್ಮಾ. ಈ ಎಲ್ಲಾ ಕ್ರೆಡಿಟ್ ಇಬ್ಬರಿಗೆ ಸಲ್ಲುತ್ತದೆ. 13 ಓವರ್‌ಗಳಿಂದ ಇಬ್ಬರೂ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಅವರು ತಮ್ಮ ಧೈರ್ಯ ಮತ್ತು ದೃಢನಿಶ್ಚಯವನ್ನು ತೋರಿಸಿದರು. ರನ್​ಗಳಿಕೆಯ ನಡುವೆ ವಿಕೆಟ್ ಪಡೆಯುವ ಅವರ ಮನಸ್ಥಿತಿ ನಿಜವಾಗಿಯೂ ಅದ್ಭುತವಾಗಿತ್ತು ಎಂದು ರಜತ್ ಪಾಟಿದಾರ್ ಆರ್​ಸಿಬಿ ಸ್ಪಿನ್ನರ್​ಗಳನ್ನು ಹಾಡಿಹೊಗಳಿದರು.

ಇದನ್ನೂ ಓದಿ: IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

ಇನ್ನು ವಿರಾಟ್ ಕೊಹ್ಲಿ ಅವರಂತಹ ಆಟಗಾರ ಜೊತೆಗಿದ್ದಾಗ, ಚಿಂತಿಸುವ ಅಗತ್ಯವಿಲ್ಲ. ಅವರು ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಅವರಿಂದ ಕಲಿಯಲು ಇದು ನನಗೆ ಉತ್ತಮ ಅವಕಾಶ. ಹೀಗಾಗಿ ಮೊದಲ ಪಂದ್ಯದಲ್ಲಿ ನಾನು ನಿರ್ಭಿತಿಯಿಂದ ತಂಡವನ್ನು ಮುನ್ನಡೆಸಲು ಸಾಧ್ಯವಾಗಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.