AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ ಗೆದ್ದು ಕೊಡ್ತೀನಿ… RCB ಅಭಿಮಾನಿಗಳ ಮುಂದಿಟ್ಟ ಶಪಥ ಈಡೇರಿಸಿದ ಕೃನಾಲ್ ಪಾಂಡ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗೆ ತೆರೆಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ಆರ್​ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಐಪಿಎಲ್​ನ 52ನೇ ಪಂದ್ಯದ ವೇಳೆಯೇ ಕೃನಾಲ್ ಪಾಂಡ್ಯ ಈ ಸಲ ಕಪ್ ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದರು. ಆ ಶಪಥದಂತೆ ಅವರು ಕೊನೆಯ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ವಿಶೇಷ.

ಕಪ್ ಗೆದ್ದು ಕೊಡ್ತೀನಿ... RCB ಅಭಿಮಾನಿಗಳ ಮುಂದಿಟ್ಟ ಶಪಥ ಈಡೇರಿಸಿದ ಕೃನಾಲ್ ಪಾಂಡ್ಯ
Krunal Pandya
ಝಾಹಿರ್ ಯೂಸುಫ್
|

Updated on: Jun 04, 2025 | 10:34 AM

Share

IPL 2025:  17 ವರ್ಷಗಳು…ಒಂದೇ ಒಂದು ಕಪ್ ಗೆದ್ದಿಲ್ಲ…ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ…ಕೊನೆಗೆ ನೋವಿನ ವಿದಾಯ…ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿರಲಿಲ್ಲ. ಪ್ರತಿ ಬಾರಿಯಂತೆ ಈ ಬಾರಿ ಕೂಡ ಆರ್​ಸಿಬಿ ಅಭಿಮಾನಿಗಳಿಂದ ಭರಪೂರ ಬೆಂಬಲ ವ್ಯಕ್ತವಾಗಿತ್ತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎರಡು ಬಾರಿ ಬಗ್ಗು ಬಡಿದ ರಾಯಲ್ ಪಡೆಗೆ ಅಭಿಮಾನಿಗಳು ಮಧ್ಯರಾತ್ರಿ ನೀಡಿದ ಸ್ವಾಗತ ನೋಡಿ ಖುದ್ದು ಆರ್​ಸಿಬಿ ಆಟಗಾರರೇ ರೋಮಾಂಚನಗೊಂಡಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ಓವರ್​ಗಳಲ್ಲಿ 211 ರನ್​ಗಳಿಸಿ ನಿಯಂತ್ರಿಸಿ ಆರ್​ಸಿಬಿ ತಂಡ 2 ರನ್​ಗಳ ರೋಚಕ ಗೆಲುವು ದಾಖಲಿಸಿತು.

ಈ ಗೆಲುವಿನೊಂದಿಗೆ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಅಷ್ಟೇ ಅಲ್ಲದೆ ಆರ್​ಸಿಬಿ ಆಟಗಾರರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಬರುವ ತನಕ ಅಭಿಮಾನಿಗಳು ಕಾದು ನಿಂತಿದ್ದರು. ರಸ್ತೆಯುದ್ದಕ್ಕೂ ಕಾದು ನಿಂತಿದ್ದ ಫ್ಯಾನ್ಸ್ ಘೋಷವ್ಯಾಕ್ಯದೊಂದಿಗೆ ಆರ್​ಸಿಬಿ ತಂಡದ ಬಸ್​ ಅನ್ನು ಸ್ವಾಗತಿಸಿ ತಮ್ಮ ಅಭಿಮಾನ ಮರೆದಿದ್ದರು.

ಮಧ್ಯರಾತ್ರಿಯವರೆಗೆ ಕಾದು ನಿಂತು ತೋರಿದ ಈ ಅಭಿಮಾನಕ್ಕೆ ಆರ್​ಸಿಬಿ ಆಟಗಾರರು ಪುಳಕಿತರಾಗಿದ್ದರು ಅಷ್ಟೇ ಅಲ್ಲದೆ ಈ ಕ್ರೇಝ್ ನೋಡಿ ರೋಮಾಂಚನಗೊಂಡ ಕೃನಾಲ್ ಪಾಂಡ್ಯ, ಈ ಸಲ ಇವರಿಗಾಗಿ ನಾವು ಕಪ್ ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದರು. ಈ ಶಪಥವನ್ನು ಇದೀಗ ಪಾಂಡ್ಯ ಈಡೇರಿಸಿದ್ದಾರೆ. ಅದು ಕೂಡ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ.

ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಒಂದು ಹಂತದವರೆಗೆ ಉತ್ತಮ ಸ್ಥಿತಿಯಲ್ಲಿಯೇ ಇತ್ತು. ಆದರೆ ಯಾವಾಗ ಕೃನಾಲ್ ಪಾಂಡ್ಯ ಬೌಲಿಂಗ್ ಶುರು ಮಾಡಿದರೋ, ಇಡೀ ಪಂದ್ಯದ ಗತಿ ಬದಲಾಯಿತು.

ಫಿಂಗರ್ ಸ್ಪಿನ್ ಮೂಲಕ ದಾಳಿ ಸಂಘಟಿಸಿದ ಕೃನಾಲ್ ಪಾಂಡ್ಯ 4 ಓವರ್​ಗಳಲ್ಲಿ ನೀಡಿದ್ದು ಕೇವಲ 17 ರನ್​ಗಳು ಮಾತ್ರ. ಇದರ ಜೊತೆಗೆ ಡೇಂಜರಸ್ ಜೋಶ್ ಇಂಗ್ಲಿಸ್ ಹಾಗೂ ಪಭ್​ಸಿಮ್ರಾನ್ ಸಿಂಗ್ ಅವರ ವಿಕೆಟ್​ಗಳನ್ನು ಸಹ ಪಡೆದರು. ಈ ಮೂಲಕ ಫೈನಲ್ ಪಂದ್ಯದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದರು.

ಇದನ್ನೂ ಓದಿ: ದಾಖಲೆ ಭರ್ಜರಿ ದಾಖಲೆ… ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB

ಈ ಮೂಲಕ ತಿಂಗಳ ಹಿಂದೆ ಆರ್​ಸಿಬಿ ಅಭಿಮಾನಿಗಳ ಮುಂದೆ ಮಾಡಿದ ಶಪಥವನ್ನು ಕೃನಾಲ್ ಪಾಂಡ್ಯ ಈಡೇರಿಸಿದ್ದಾರೆ. ಅಷ್ಟೇ ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಆರ್​ಸಿಬಿ ಅಭಿಮಾನಿಗಳನ್ನು ನೊಡಿ ಕೃನಾಲ್ ಪಾಂಡ್ಯ ಶಪಥ ಮಾಡಿದ ವಿಡಿಯೋ:

ಸದ್ಯ ಟ್ರೋಫಿ ಗೆದ್ದಿರುವ ಆರ್​ಸಿಬಿ ಪಡೆ ಇಂದು (ಜೂ.4) ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ 3.30 ರಿಂದ ರಾಯಲ್ ಪಡೆಯ ವಿಜಯಯಾತ್ರೆ ನಡೆಯಲಿದೆ. ಈ ವಿಜಯೋತ್ಸವದ ಯಾತ್ರೆಯು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂವರೆಗೆ ಮುಂದುವರೆಯಲಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ