AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತವರಿನಲ್ಲಿ ಸತತ ಸೋಲು; ಬದಲಾಗುತ್ತಾ ಆರ್​​ಸಿಬಿ ಪ್ಲೇಯಿಂಗ್ 11?

IPL 2025 RCB vs PBKS: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಹೊರಗೆ ಸತತ ಗೆಲುವು ಸಾಧಿಸುತ್ತಿದ್ದರೂ, ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣ ಅವರಿಗೆ ದುಸ್ವಪ್ನವಾಗಿದೆ. ಇಲ್ಲಿ ಟಾಸ್ ಗೆದ್ದ ತಂಡಕ್ಕೆ ಲಾಭವಾಗುತ್ತದೆ ಹೀಗಾಗಿ ಆರ್​ಸಿಬಿ ವಿಭಿನ್ನ ತಂತ್ರಗಾರಿಕೆಯೊಂದಿಗೆ ಈ ಪಂದ್ಯಕ್ಕಿಳಿಯಬೇಕಿದೆ. ಹಾಗೆಯೇ ಈ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.

IPL 2025: ತವರಿನಲ್ಲಿ ಸತತ ಸೋಲು; ಬದಲಾಗುತ್ತಾ ಆರ್​​ಸಿಬಿ ಪ್ಲೇಯಿಂಗ್ 11?
Rcb Vs Pbks
ಪೃಥ್ವಿಶಂಕರ
|

Updated on: Apr 17, 2025 | 11:09 PM

Share

ತವರಿನಿಂದ ಹೊರಗೆ ನಡೆಯುತ್ತಿರುವ ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ತವರು ಮೈದಾನ ಮಾತ್ರ ದುಸ್ವಪ್ನವಾಗಿ ಕಾಡುತ್ತಿದೆ. ಆರ್​ಸಿಬಿಗೆ ತವರು ಮೈದಾನವಾಗಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ಇದುವರೆಗೂ ತವರಿನ ತಂಡಕ್ಕೆ ಯಾವ ರೀತಿಯಲ್ಲೂ ನೆರವಿಗೆ ಬಂದಿಲ್ಲ. ಇಲ್ಲಿ ಟಾಸ್ ಗೆದ್ದ ತಂಡಕ್ಕೆ ಬಹುಪಾಲು ಲಾಭವಾಗುತ್ತಿರುವ ಕಾರಣ ಆರ್​ಸಿಬಿ ವಿಶೇಷ ತಂತ್ರಗಾರಿಕೆಯೊಂದಿಗೆ ಅಖಾಡಕ್ಕಿಳಿಯಬೇಕಿದೆ. ಹೀಗಾಗಿ ತವರಿನಲ್ಲಿ ಆಡಿರುವ ಎರಡು ಪಂದ್ಯಗಳನ್ನು ಸೋತಿರುವ ಆರ್​ಸಿಬಿ ಪಿಚ್​ಗೆ ಅನುಗುಣವಾಗಿ ತನ್ನ ಪ್ಲೇಯಿಂಗ್ 11 ಸಿದ್ದಪಡಿಸಬೇಕಿದೆ.

ಆರ್​ಸಿಬಿಗೆ ಬೇಕು ವಿಶೇಷ ತಂತ್ರಗಾರಿಕೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ಸಾಂಘಿಕ ಹೋರಾಟ ನೀಡಿತ್ತಾದರೂ ಈ ಮೈದಾನದಲ್ಲಿ ಗುರಿ ಬೆನ್ನಟ್ಟುವ ತಂಡಕ್ಕೆ ಹೆಚ್ಚಿನ ನೆರವು ಸಿಗುವ ಕಾರಣ ಪಂದ್ಯವನ್ನು ಸೋಲಬೇಕಾಯಿತು. ಅಂದರೆ ಈ ಎರಡೂ ಪಂದ್ಯಗಳಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್​ಸಿಬಿಗೆ 200 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಲು ಸಾಧ್ಯವಾಗಲಿಲ್ಲ. ಹೀಗಾಗಿ ಗುರಿ ಬೆನ್ನಟ್ಟುವ ತಂಡಕ್ಕೆ ಸುಲಭ ಗುರಿ ಸಿಗುತ್ತಿತ್ತು. ಇದೀಗ ನಾಳಿನ ಪಂದ್ಯದಲ್ಲೂ ಆರ್​ಸಿಬಿ ಒಂದು ವೇಳೆ ಟಾಸ್ ಸೋತರೆ ಮೊದಲು ಬ್ಯಾಟಿಂಗ್‌ ಮಾಡಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಆರ್​ಸಿಬಿ ಈ ಪಂದ್ಯದಲ್ಲಾದರೂ 200 ಕ್ಕೂ ಅಧಿಕ ರನ್ ಕಲೆಹಾಕಲು ಪ್ರಯತ್ನಿಸಬೇಕು. ಇದರರ್ಥ ತಂಡದ ಬ್ಯಾಟರ್​ಗಳು ಅಮೋಘ ಪ್ರದರ್ಶನ ನೀಡಬೇಕು.

ಪಂಜಾಬ್ ತಂಡದಲ್ಲಿ 2 ಬದಲಾವಣೆ

ಇನ್ನು ತಂಡದ ಪ್ಲೇಯಿಂಗ್ 11 ಬಗ್ಗೆ ಹೇಳುವುದಾದರೆ.. ತವರಿನಲ್ಲಿ 2 ಪಂದ್ಯಗಳನ್ನು ಸೋತಿದ್ದರೂ ತವರಿನ ಹೊರಗೆ ಆಡಿದ್ದ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಕಾರಣ ಆರ್​ಸಿಬಿ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಇತ್ತ ಪಂಜಾಬ್ ತಂಡ ಕೂಡ ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕಿ ಗೆಲುವು ಸಾಧಿಸಿರುವ ಕಾರಣ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ತರುವ ಸಾಧ್ಯತೆ ಕಡಿಮೆ. ಆದಾಗ್ಯೂ ಕಳೆದ ಪಂದ್ಯದಲ್ಲಿ ಪರಿಣಾಮಕಾರಿಯಾಗದ ಸೂರ್ಯಾಂಶ್ ಶೆಡ್ಜ್ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಷ್ ಬದಲು ಮಾರ್ಕಸ್ ಸ್ಟೊಯಿನಿಸ್ ಮತ್ತು ವಿಜಯ್‌ಕುಮಾರ್ ವೈಶಾಕ್​ರನ್ನು ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಬಹುದು.

IPL 2025: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಪಂಜಾಬ್ ಪಂದ್ಯ?

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಆರ್​ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.

ಪಂಜಾಬ್ ಕಿಂಗ್ಸ್‌: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಯಾನ್ಸನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ವಿಜಯ್‌ಕುಮಾರ್ ವೈಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!