AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತವರಿನಲ್ಲಿ ಸತತ ಸೋಲು; ಬದಲಾಗುತ್ತಾ ಆರ್​​ಸಿಬಿ ಪ್ಲೇಯಿಂಗ್ 11?

IPL 2025 RCB vs PBKS: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಹೊರಗೆ ಸತತ ಗೆಲುವು ಸಾಧಿಸುತ್ತಿದ್ದರೂ, ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣ ಅವರಿಗೆ ದುಸ್ವಪ್ನವಾಗಿದೆ. ಇಲ್ಲಿ ಟಾಸ್ ಗೆದ್ದ ತಂಡಕ್ಕೆ ಲಾಭವಾಗುತ್ತದೆ ಹೀಗಾಗಿ ಆರ್​ಸಿಬಿ ವಿಭಿನ್ನ ತಂತ್ರಗಾರಿಕೆಯೊಂದಿಗೆ ಈ ಪಂದ್ಯಕ್ಕಿಳಿಯಬೇಕಿದೆ. ಹಾಗೆಯೇ ಈ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದರ ಚಿತ್ರಣ ಇಲ್ಲಿದೆ.

IPL 2025: ತವರಿನಲ್ಲಿ ಸತತ ಸೋಲು; ಬದಲಾಗುತ್ತಾ ಆರ್​​ಸಿಬಿ ಪ್ಲೇಯಿಂಗ್ 11?
Rcb Vs Pbks
Follow us
ಪೃಥ್ವಿಶಂಕರ
|

Updated on: Apr 17, 2025 | 11:09 PM

ತವರಿನಿಂದ ಹೊರಗೆ ನಡೆಯುತ್ತಿರುವ ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ತವರು ಮೈದಾನ ಮಾತ್ರ ದುಸ್ವಪ್ನವಾಗಿ ಕಾಡುತ್ತಿದೆ. ಆರ್​ಸಿಬಿಗೆ ತವರು ಮೈದಾನವಾಗಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ಇದುವರೆಗೂ ತವರಿನ ತಂಡಕ್ಕೆ ಯಾವ ರೀತಿಯಲ್ಲೂ ನೆರವಿಗೆ ಬಂದಿಲ್ಲ. ಇಲ್ಲಿ ಟಾಸ್ ಗೆದ್ದ ತಂಡಕ್ಕೆ ಬಹುಪಾಲು ಲಾಭವಾಗುತ್ತಿರುವ ಕಾರಣ ಆರ್​ಸಿಬಿ ವಿಶೇಷ ತಂತ್ರಗಾರಿಕೆಯೊಂದಿಗೆ ಅಖಾಡಕ್ಕಿಳಿಯಬೇಕಿದೆ. ಹೀಗಾಗಿ ತವರಿನಲ್ಲಿ ಆಡಿರುವ ಎರಡು ಪಂದ್ಯಗಳನ್ನು ಸೋತಿರುವ ಆರ್​ಸಿಬಿ ಪಿಚ್​ಗೆ ಅನುಗುಣವಾಗಿ ತನ್ನ ಪ್ಲೇಯಿಂಗ್ 11 ಸಿದ್ದಪಡಿಸಬೇಕಿದೆ.

ಆರ್​ಸಿಬಿಗೆ ಬೇಕು ವಿಶೇಷ ತಂತ್ರಗಾರಿಕೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ಸಾಂಘಿಕ ಹೋರಾಟ ನೀಡಿತ್ತಾದರೂ ಈ ಮೈದಾನದಲ್ಲಿ ಗುರಿ ಬೆನ್ನಟ್ಟುವ ತಂಡಕ್ಕೆ ಹೆಚ್ಚಿನ ನೆರವು ಸಿಗುವ ಕಾರಣ ಪಂದ್ಯವನ್ನು ಸೋಲಬೇಕಾಯಿತು. ಅಂದರೆ ಈ ಎರಡೂ ಪಂದ್ಯಗಳಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆರ್​ಸಿಬಿಗೆ 200 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಲು ಸಾಧ್ಯವಾಗಲಿಲ್ಲ. ಹೀಗಾಗಿ ಗುರಿ ಬೆನ್ನಟ್ಟುವ ತಂಡಕ್ಕೆ ಸುಲಭ ಗುರಿ ಸಿಗುತ್ತಿತ್ತು. ಇದೀಗ ನಾಳಿನ ಪಂದ್ಯದಲ್ಲೂ ಆರ್​ಸಿಬಿ ಒಂದು ವೇಳೆ ಟಾಸ್ ಸೋತರೆ ಮೊದಲು ಬ್ಯಾಟಿಂಗ್‌ ಮಾಡಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಆರ್​ಸಿಬಿ ಈ ಪಂದ್ಯದಲ್ಲಾದರೂ 200 ಕ್ಕೂ ಅಧಿಕ ರನ್ ಕಲೆಹಾಕಲು ಪ್ರಯತ್ನಿಸಬೇಕು. ಇದರರ್ಥ ತಂಡದ ಬ್ಯಾಟರ್​ಗಳು ಅಮೋಘ ಪ್ರದರ್ಶನ ನೀಡಬೇಕು.

ಪಂಜಾಬ್ ತಂಡದಲ್ಲಿ 2 ಬದಲಾವಣೆ

ಇನ್ನು ತಂಡದ ಪ್ಲೇಯಿಂಗ್ 11 ಬಗ್ಗೆ ಹೇಳುವುದಾದರೆ.. ತವರಿನಲ್ಲಿ 2 ಪಂದ್ಯಗಳನ್ನು ಸೋತಿದ್ದರೂ ತವರಿನ ಹೊರಗೆ ಆಡಿದ್ದ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಕಾರಣ ಆರ್​ಸಿಬಿ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಇತ್ತ ಪಂಜಾಬ್ ತಂಡ ಕೂಡ ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕಿ ಗೆಲುವು ಸಾಧಿಸಿರುವ ಕಾರಣ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ತರುವ ಸಾಧ್ಯತೆ ಕಡಿಮೆ. ಆದಾಗ್ಯೂ ಕಳೆದ ಪಂದ್ಯದಲ್ಲಿ ಪರಿಣಾಮಕಾರಿಯಾಗದ ಸೂರ್ಯಾಂಶ್ ಶೆಡ್ಜ್ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಷ್ ಬದಲು ಮಾರ್ಕಸ್ ಸ್ಟೊಯಿನಿಸ್ ಮತ್ತು ವಿಜಯ್‌ಕುಮಾರ್ ವೈಶಾಕ್​ರನ್ನು ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಬಹುದು.

IPL 2025: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಪಂಜಾಬ್ ಪಂದ್ಯ?

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಆರ್​ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.

ಪಂಜಾಬ್ ಕಿಂಗ್ಸ್‌: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಯಾನ್ಸನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ವಿಜಯ್‌ಕುಮಾರ್ ವೈಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ