AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ಸೋಲಿಗೆ ರೋಹಿತ್ ಶರ್ಮಾ ಕಾರಣ? ಪರೋಕ್ಷವಾಗಿ ಕುಟುಕಿದ ಹಾರ್ದಿಕ್ ಪಾಂಡ್ಯ

Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 221 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್​ಗಳಿಸಲಷ್ಟೇ ಶಕ್ತರಾದರು.

MI vs RCB: ಸೋಲಿಗೆ ರೋಹಿತ್ ಶರ್ಮಾ ಕಾರಣ? ಪರೋಕ್ಷವಾಗಿ ಕುಟುಕಿದ ಹಾರ್ದಿಕ್ ಪಾಂಡ್ಯ
Rohit Sharma - Hardik Pandya
ಝಾಹಿರ್ ಯೂಸುಫ್
|

Updated on: Apr 08, 2025 | 9:54 AM

Share

IPL 2025: ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಹೀನಾಯವಾಗಿ ಸೋತಿದ್ದ ಮುಂಬೈ ಇಂಡಿಯನ್ಸ್ (MI) ತಂಡವು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಹಾರ್ದಿಕ್ ಪಾಂಡ್ಯ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು.

222 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಅದರಲ್ಲೂ ಅನುಭವಿ ಆಟಗಾರ ರೋಹಿತ್ ಶರ್ಮಾ (17) ಬೇಗನೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಮುಂಬೈ ಪಡೆ ದಿಟ್ಟ ಹೋರಾಟ ಪ್ರದರ್ಶಿಸಿದರೂ ಗೆಲುವಿನ ದಡ ಸೇರಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 20 ಓವರ್​ಗಳಲ್ಲಿ 209 ರನ್ ಬಾರಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಪರೋಕ್ಷವಾಗಿ ರೋಹಿತ್ ಶರ್ಮಾ ಅವರನ್ನು ಗುರಿಯಾಗಿಸಿದ್ದಾರೆ. ಈ ಪಿಚ್ ಬ್ಯಾಟಿಂಗ್​ಗೆ ತುಂಬಾ ಸಹಕಾರಿಯಾಗಿತ್ತು. ನಾವು ಒಂದೆಡಡು ಬಿಗ್ ಹಿಟ್ ಬಾರಿಸುವಲ್ಲಿ ವಿಫಲರಾದೆವು. ಅದರಲ್ಲೂ ನಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಆದ ಬದಲಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಕಳೆದ ಪಂದ್ಯದಲ್ಲಿ ನಮನ್ ಧೀರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ರೋಹಿತ್ ಶರ್ಮಾ ಇಲ್ಲದ ಕಾರಣ ಅವರಿಗೆ ಮೇಲಿನ ಕ್ರಮಾಂಕ ನೀಡಲಾಗಿತ್ತು.  ಇದೀಗ ಹಿಟ್​ಮ್ಯಾನ್ ಮರಳುವಿಕೆಯಿಂದಾಗಿ ನಮನ್ ಧೀರ್ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಬೇಕಾದ ಅನಿವಾರ್ಯತೆ ಎದುರಾಯಿತು.

ನಮನ್ ಧೀರ್ ಮೇಲಿನ ಕ್ರಮಾಂಕದಲ್ಲಿ ತುಂಬಾ ಚೆನ್ನಾಗಿ ಆಡಿದ್ದರು. ಇದಾಗ್ಯೂ ರೋಹಿತ್ ಶರ್ಮಾ ಎಂಟ್ರಿಯೊಂದಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿದ್ದೇವೆ. ಒಂದು ವೇಳೆ ನಮನ್ ಕೂಡ ಮೇಲಿನ ಕ್ರಮಾಂಕದಲ್ಲಿ ಆಡಿದ್ದರೆ ಫಲಿತಾಂಶ ಬದಲಾಗುವ ಸಾಧ್ಯತೆಯಿತ್ತು ಎಂದು ಹಾರ್ದಿಕ್ ಪಾಂಡ್ಯ ಅಭಿಪ್ರಾಯಪಟ್ಟಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಮನ್ ಧೀರ್ ಕೇವಲ 24 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 46 ರನ್ ಬಾರಿಸಿದ್ದರು. ಆದರೆ ಈ ಬಾರಿ ಅವರ ಬ್ಯಾಟಿಂಗ್ ಕ್ರಮಾಂಕದಲ್ಲಿ ಉಂಟಾದ ಬದಲಾವಣೆಯಿಂದಾಗಿ ಅವರು ಕೇವಲ 11 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಇಲ್ಲಿ ನಮನ್ ಧೀರ್ ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮಾತನಾಡುವಾಗ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾ ಅವರನ್ನು ಯಾಕೆ ಗುರಿಯಾಗಿಸಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ಪರ ಅರಂಭಿಕನಾಗಿ ಕಣಕ್ಕಿಳಿಯುತ್ತಿರುವ ಆಟಗಾರ. ನಮನ್ ಧೀರ್ ಈ ಹಿಂದೆಯೂ ಮಧ್ಯಮ ಕ್ರಮಾಂಕದಲ್ಲಿ ಆಡಿದ ಅನುಭವ ಹೊಂದಿದ್ದಾರೆ.

ಇದಾಗ್ಯೂ ರೋಹಿತ್ ಶರ್ಮಾ ಅವರ ಆಗಮನದಿಂದಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಿದೆ ಎನ್ನುವ ಮೂಲಕ ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ಸೋಲಿಗೆ ಹಿಟ್​ಮ್ಯಾನ್​ ಕಾರಣ ಎನ್ನುತ್ತಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: IPL 2025: ಗೆದ್ದರೂ ಅಂಕ ಪಟ್ಟಿಯಲ್ಲಿ ಮೇಲೇರದ RCB

ಒಟ್ಟಿನಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದ್ದು, ಈ ಸೋಲುಗಳೊಂದಿಗೆ ಇದೀಗ ಅಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದಾಗ್ಯೂ ಮುಂದಿನ 9 ಪಂದ್ಯಗಳ ಮೂಲಕ ಹಾರ್ದಿಕ್ ಪಾಂಡ್ಯ ಪಡೆ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ