AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್

IPL 2025 RCB vs GT: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೊದಲ ಸೋಲುಂಡಿದೆ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Virat Kohli - Siraj
ಝಾಹಿರ್ ಯೂಸುಫ್
|

Updated on: Apr 03, 2025 | 8:23 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಅದು ಸಹ ಗುರು-ಶಿಷ್ಯರ ಮುಖಾಮುಖಿಯೊಂದಿಗೆ ಎಂಬುದು ವಿಶೇಷ. ಅಂದರೆ ವಿರಾಟ್ ಕೊಹ್ಲಿ (Virat Kohli) ಹಾಗೂ ಮೊಹಮ್ಮದ್ ಸಿರಾಜ್ (Mohammed Siraj) ನಡುವಣ ಸೆಣಸಾಟ.  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡರು. ಅಲ್ಲದೆ ಮೊದಲ ಓವರ್​ ಎಸೆಯಲು ಮೊಹಮ್ಮದ್ ಸಿರಾಜ್​ಗೆ ಚೆಂಡು ನೀಡಿದರು.

ಮೊಹಮ್ಮದ್ ಸಿರಾಜ್ ಎಸೆದ ಪ್ರಥಮ ಓವರ್​ನ ಮೊದಲ ಎಸೆತವನ್ನು ಫಿಲ್ ಸಾಲ್ಟ್ ಎದುರಿಸಿದರು. ಅಲ್ಲದೆ ಒಂದು ರನ್ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ನೀಡಿದರು. ಆದರೆ 2ನೇ ಎಸೆತ ಎಸೆಯುವ ಮುನ್ನ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಂಡು ಬಂದರು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಏಕೆಂದರೆ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ತನ್ನ ಗುರು ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಲು ಸಜ್ಜಾಗಿದ್ದರು. ಈ ಭಾವುಕತೆಯೊಂದಿಗೆ ಓಡಿ ಬಂದ ಸಿರಾಜ್ ಅರ್ಧದಲ್ಲೇ ಬೌಲಿಂಗ್ ನಿಲ್ಲಿಸಿದರು. ಈ ಸನ್ನಿವೇಶದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೊಹಮ್ಮದ್ ಸಿರಾಜ್-ವಿರಾಟ್ ಕೊಹ್ಲಿ ಮುಖಾಮುಖಿ ವಿಡಿಯೋ:

7 ವರ್ಷ ಆಡಿದ್ದ ಮೊಹಮ್ಮದ್ ಸಿರಾಜ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 7 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಸಿರಾಜ್ ಬೆಂಬಲಕ್ಕೆ ನಿಂತವರು ವಿರಾಟ್ ಕೊಹ್ಲಿ. ಕೊಹ್ಲಿಯ ಸಂಪೂರ್ಣ ಬೆಂಬಲದೊಂದಿಗೆ ನಾನು ಈ ಮಟ್ಟಕ್ಕೆ ತಲುಪಿದ್ದೇನೆ ಎಂದು ಹಲವು ಬಾರಿ ಸಿರಾಜ್ ಹೇಳಿಕೊಂಡಿದ್ದರು.

ಇದೀಗ 7 ವರ್ಷಗಳ ಬಳಿಕ ಸಿರಾಜ್ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ್ದಾರೆ. ಇನ್ನು ಸಿರಾಜ್ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ತನ್ನ ಕ್ಲಾಸ್ ಬ್ಯಾಟಿಂಗ್​ ಪ್ರದರ್ಶಿಸಿದ್ದರು.

ಆದರೆ ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಆರ್​ಸಿಬಿಗೆ ಆರಂಭಿಕ ಆಘಾತ ನೀಡಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿ ಗುಜರಾತ್ ಟೈಟಾನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್:

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್ ಬಾರಿಸುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ