AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್

IPL 2025 RCB vs GT: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೊದಲ ಸೋಲುಂಡಿದೆ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Virat Kohli - Siraj
ಝಾಹಿರ್ ಯೂಸುಫ್
|

Updated on: Apr 03, 2025 | 8:23 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಅದು ಸಹ ಗುರು-ಶಿಷ್ಯರ ಮುಖಾಮುಖಿಯೊಂದಿಗೆ ಎಂಬುದು ವಿಶೇಷ. ಅಂದರೆ ವಿರಾಟ್ ಕೊಹ್ಲಿ (Virat Kohli) ಹಾಗೂ ಮೊಹಮ್ಮದ್ ಸಿರಾಜ್ (Mohammed Siraj) ನಡುವಣ ಸೆಣಸಾಟ.  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡರು. ಅಲ್ಲದೆ ಮೊದಲ ಓವರ್​ ಎಸೆಯಲು ಮೊಹಮ್ಮದ್ ಸಿರಾಜ್​ಗೆ ಚೆಂಡು ನೀಡಿದರು.

ಮೊಹಮ್ಮದ್ ಸಿರಾಜ್ ಎಸೆದ ಪ್ರಥಮ ಓವರ್​ನ ಮೊದಲ ಎಸೆತವನ್ನು ಫಿಲ್ ಸಾಲ್ಟ್ ಎದುರಿಸಿದರು. ಅಲ್ಲದೆ ಒಂದು ರನ್ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ನೀಡಿದರು. ಆದರೆ 2ನೇ ಎಸೆತ ಎಸೆಯುವ ಮುನ್ನ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಂಡು ಬಂದರು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಏಕೆಂದರೆ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ತನ್ನ ಗುರು ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಲು ಸಜ್ಜಾಗಿದ್ದರು. ಈ ಭಾವುಕತೆಯೊಂದಿಗೆ ಓಡಿ ಬಂದ ಸಿರಾಜ್ ಅರ್ಧದಲ್ಲೇ ಬೌಲಿಂಗ್ ನಿಲ್ಲಿಸಿದರು. ಈ ಸನ್ನಿವೇಶದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೊಹಮ್ಮದ್ ಸಿರಾಜ್-ವಿರಾಟ್ ಕೊಹ್ಲಿ ಮುಖಾಮುಖಿ ವಿಡಿಯೋ:

7 ವರ್ಷ ಆಡಿದ್ದ ಮೊಹಮ್ಮದ್ ಸಿರಾಜ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 7 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಸಿರಾಜ್ ಬೆಂಬಲಕ್ಕೆ ನಿಂತವರು ವಿರಾಟ್ ಕೊಹ್ಲಿ. ಕೊಹ್ಲಿಯ ಸಂಪೂರ್ಣ ಬೆಂಬಲದೊಂದಿಗೆ ನಾನು ಈ ಮಟ್ಟಕ್ಕೆ ತಲುಪಿದ್ದೇನೆ ಎಂದು ಹಲವು ಬಾರಿ ಸಿರಾಜ್ ಹೇಳಿಕೊಂಡಿದ್ದರು.

ಇದೀಗ 7 ವರ್ಷಗಳ ಬಳಿಕ ಸಿರಾಜ್ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ್ದಾರೆ. ಇನ್ನು ಸಿರಾಜ್ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ತನ್ನ ಕ್ಲಾಸ್ ಬ್ಯಾಟಿಂಗ್​ ಪ್ರದರ್ಶಿಸಿದ್ದರು.

ಆದರೆ ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಆರ್​ಸಿಬಿಗೆ ಆರಂಭಿಕ ಆಘಾತ ನೀಡಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿ ಗುಜರಾತ್ ಟೈಟಾನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್:

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್ ಬಾರಿಸುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Follow Us
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ