AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: 16 ರನ್ ಬೇಕಿದ್ದಾಗ ‘ತಲಾ’ ಪಾತಾಳ

IPL 2025 MS Dhoni: ಇಂಡಿಯನ್ ಪ್ರೀಮಿಯರ್ ಲೀಗ್ 2025ರ 8ನೇ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ 16 ಎಸೆತಗಳಲ್ಲಿ 30 ರನ್ ಬಾರಿಸಿದ್ದರು. ಆದರೆ ಧೋನಿ ಅಬ್ಬರಿಸಲು ಶುರುವಾಗುವ ಮುಂಚೆಯೇ ಸಿಎಸ್​ಕೆ ತಂಡ ಸೋಲೊಪ್ಪಿಕೊಂಡಿತ್ತು. ಹೀಗಾಗಿಯೇ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿಯ ನಿರ್ಧಾರವನ್ನು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

MS Dhoni: 16 ರನ್ ಬೇಕಿದ್ದಾಗ 'ತಲಾ' ಪಾತಾಳ
Ms Dhoni
ಝಾಹಿರ್ ಯೂಸುಫ್
|

Updated on: Mar 29, 2025 | 11:53 AM

Share

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ತಂಡದ ತಂತ್ರಗಾರಿಕೆ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಮಹೇಂದ್ರ ಸಿಂಗ್ ಧೋನಿ (MS Dhoni) 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದೇಕೆ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಏಕೆಂದರೆ ಎಂಎಸ್​ ಧೋನಿ ತನ್ನ ಐಪಿಎಲ್​ ಕೆರಿಯರ್​ನಲ್ಲಿ  9ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದು ಕೇವಲ 2 ಬಾರಿ ಮಾತ್ರ. ಇದಕ್ಕೂ ಮುನ್ನ 2024 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9ನೇ ಕ್ರಮಾಂಕದಲ್ಲಿ ಆಡಿದ್ದರು. ಅಂದು ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಈ ವೈಫಲ್ಯದ ಹೊರತಾಗಿಯೂ ಮಹತ್ವದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಅವಶ್ಯಕತೆ ಏನಿತ್ತು ಎಂಬುದೇ ಪ್ರಶ್ನೆ.

ಧೋನಿಯ ಅಚ್ಚರಿಯ ನಿರ್ಧಾರ:

ಚೆಪಾಕ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪ್ರತಿ ಓವರ್​ಗೆ 3 ರನ್ ಬೇಕಿದ್ದಾಗ ಮಹೇಂದ್ರ ಸಿಂಗ್ ಧೋನಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಆರ್​ಸಿಬಿ ವಿರುದ್ಧ ರವಿಚಂದ್ರನ್ ಅಶ್ವಿನ್ ಔಟಾದ ಬಳಿಕ ಆಗಮಿಸಿದ್ದಾರೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಪ್ರತಿ ಓವರ್​ಗೆ 16 ರನ್ ಬೇಕಿದ್ದರೂ ಮಹೇಂದ್ರ ಸಿಂಗ್ ಧೋನಿ ಮಾತ್ರ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಪಾತಾಳಕ್ಕೆ ಇಳಿಸಿದ್ದರು. ಹೀಗಾಗಿಯೇ ಕಡಿಮೆ ಸ್ಕೋರ್​ ಬೇಕಿದ್ದಾಗ ಮಾತ್ರವೇಕೆ ಧೋನಿ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಾರೆ ಎಂದು ಅಭಿಮಾನಿಗಳು ಪ್ರಶ್ನಿಸಲಾರಂಭಿಸಿದ್ದಾರೆ.

ಏಕೆಂದರೆ ಈ ಹಿಂದೆ ಧೋನಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 5 ಇನಿಂಗ್ಸ್ ಆಡಿದ್ದಾರೆ. ಅಲ್ಲದೆ 4ನೇ ಕ್ರಮಾಂಕದಲ್ಲಿ 44 ಬಾರಿ ಬ್ಯಾಟ್ ಬೀಸಿದ್ದಾರೆ. ಇನ್ನು 5ನೇ ಕ್ರಮಾಂಕದಲ್ಲಿ ಆಡಿದಾಗ 41 ಇನಿಂಗ್ಸ್​ಗಳಿಂದ ಒಟ್ಟು 1230 ರನ್ ಕಲೆಹಾಕಿದ್ದಾರೆ.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ 10 ಓವರ್​ಗಳಲ್ಲಿ ಕೇವಲ 65 ರನ್​ಗಳಿಸಿ 4 ವಿಕೆಟ್ ಕಳೆದುಕೊಂಡಿದ್ದರೂ ಮಹೇಂದ್ರ ಸಿಂಗ್ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಮನಸ್ಸು ಮಾಡಲಿಲ್ಲ ಎಂಬುದೇ ಸತ್ಯ.

ಅದರಲ್ಲೂ ಗೆಲುವಿಗಾಗಿ ರನ್ ರೇಟ್​ ಹೆಚ್ಚುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ಅಶ್ವಿನ್​ಗಿಂತ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿದಿಲ್ಲ ಎಂಬುದೇ ಅಚ್ಚರಿ. ಒಟ್ಟಿನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಿದ್ದ ಪಂದ್ಯದಲ್ಲಿ ‘ತಲಾ’ ಧೋನಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಚೆನ್ನೈ ಸೂಪರ್ ಕಿಂಗ್ಸ್​ ಅಭಿಮಾನಿಗಳೇ ನಿರಾಸೆ ಮೂಡಿಸಿರುವುದಂತು ನಿಜ.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಮುಂದುವರೆಯುತ್ತಿದ್ದು, ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಥವಾ ಸಿಎಸ್​ಕೆ ಫ್ರಾಂಚೈಸಿ ಧೋನಿಯ ಕ್ರಮಾಂಕದ ಬಗ್ಗೆ ಏನು ಸ್ಪಷ್ಟನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್