Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: 16 ರನ್ ಬೇಕಿದ್ದಾಗ ‘ತಲಾ’ ಪಾತಾಳ

IPL 2025 MS Dhoni: ಇಂಡಿಯನ್ ಪ್ರೀಮಿಯರ್ ಲೀಗ್ 2025ರ 8ನೇ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ 16 ಎಸೆತಗಳಲ್ಲಿ 30 ರನ್ ಬಾರಿಸಿದ್ದರು. ಆದರೆ ಧೋನಿ ಅಬ್ಬರಿಸಲು ಶುರುವಾಗುವ ಮುಂಚೆಯೇ ಸಿಎಸ್​ಕೆ ತಂಡ ಸೋಲೊಪ್ಪಿಕೊಂಡಿತ್ತು. ಹೀಗಾಗಿಯೇ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿಯ ನಿರ್ಧಾರವನ್ನು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

MS Dhoni: 16 ರನ್ ಬೇಕಿದ್ದಾಗ 'ತಲಾ' ಪಾತಾಳ
Ms Dhoni
Follow us
ಝಾಹಿರ್ ಯೂಸುಫ್
|

Updated on: Mar 29, 2025 | 11:53 AM

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ತಂಡದ ತಂತ್ರಗಾರಿಕೆ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಮಹೇಂದ್ರ ಸಿಂಗ್ ಧೋನಿ (MS Dhoni) 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದೇಕೆ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಏಕೆಂದರೆ ಎಂಎಸ್​ ಧೋನಿ ತನ್ನ ಐಪಿಎಲ್​ ಕೆರಿಯರ್​ನಲ್ಲಿ  9ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದು ಕೇವಲ 2 ಬಾರಿ ಮಾತ್ರ. ಇದಕ್ಕೂ ಮುನ್ನ 2024 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9ನೇ ಕ್ರಮಾಂಕದಲ್ಲಿ ಆಡಿದ್ದರು. ಅಂದು ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಈ ವೈಫಲ್ಯದ ಹೊರತಾಗಿಯೂ ಮಹತ್ವದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಅವಶ್ಯಕತೆ ಏನಿತ್ತು ಎಂಬುದೇ ಪ್ರಶ್ನೆ.

ಧೋನಿಯ ಅಚ್ಚರಿಯ ನಿರ್ಧಾರ:

ಚೆಪಾಕ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪ್ರತಿ ಓವರ್​ಗೆ 3 ರನ್ ಬೇಕಿದ್ದಾಗ ಮಹೇಂದ್ರ ಸಿಂಗ್ ಧೋನಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಆರ್​ಸಿಬಿ ವಿರುದ್ಧ ರವಿಚಂದ್ರನ್ ಅಶ್ವಿನ್ ಔಟಾದ ಬಳಿಕ ಆಗಮಿಸಿದ್ದಾರೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಪ್ರತಿ ಓವರ್​ಗೆ 16 ರನ್ ಬೇಕಿದ್ದರೂ ಮಹೇಂದ್ರ ಸಿಂಗ್ ಧೋನಿ ಮಾತ್ರ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಪಾತಾಳಕ್ಕೆ ಇಳಿಸಿದ್ದರು. ಹೀಗಾಗಿಯೇ ಕಡಿಮೆ ಸ್ಕೋರ್​ ಬೇಕಿದ್ದಾಗ ಮಾತ್ರವೇಕೆ ಧೋನಿ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಾರೆ ಎಂದು ಅಭಿಮಾನಿಗಳು ಪ್ರಶ್ನಿಸಲಾರಂಭಿಸಿದ್ದಾರೆ.

ಏಕೆಂದರೆ ಈ ಹಿಂದೆ ಧೋನಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 5 ಇನಿಂಗ್ಸ್ ಆಡಿದ್ದಾರೆ. ಅಲ್ಲದೆ 4ನೇ ಕ್ರಮಾಂಕದಲ್ಲಿ 44 ಬಾರಿ ಬ್ಯಾಟ್ ಬೀಸಿದ್ದಾರೆ. ಇನ್ನು 5ನೇ ಕ್ರಮಾಂಕದಲ್ಲಿ ಆಡಿದಾಗ 41 ಇನಿಂಗ್ಸ್​ಗಳಿಂದ ಒಟ್ಟು 1230 ರನ್ ಕಲೆಹಾಕಿದ್ದಾರೆ.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ 10 ಓವರ್​ಗಳಲ್ಲಿ ಕೇವಲ 65 ರನ್​ಗಳಿಸಿ 4 ವಿಕೆಟ್ ಕಳೆದುಕೊಂಡಿದ್ದರೂ ಮಹೇಂದ್ರ ಸಿಂಗ್ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಮನಸ್ಸು ಮಾಡಲಿಲ್ಲ ಎಂಬುದೇ ಸತ್ಯ.

ಅದರಲ್ಲೂ ಗೆಲುವಿಗಾಗಿ ರನ್ ರೇಟ್​ ಹೆಚ್ಚುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ಅಶ್ವಿನ್​ಗಿಂತ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿದಿಲ್ಲ ಎಂಬುದೇ ಅಚ್ಚರಿ. ಒಟ್ಟಿನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಿದ್ದ ಪಂದ್ಯದಲ್ಲಿ ‘ತಲಾ’ ಧೋನಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಚೆನ್ನೈ ಸೂಪರ್ ಕಿಂಗ್ಸ್​ ಅಭಿಮಾನಿಗಳೇ ನಿರಾಸೆ ಮೂಡಿಸಿರುವುದಂತು ನಿಜ.

ಇದನ್ನೂ ಓದಿ: 2 ವರ್ಷ ಬ್ಯಾನ್… CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

ಇದೀಗ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಮುಂದುವರೆಯುತ್ತಿದ್ದು, ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಥವಾ ಸಿಎಸ್​ಕೆ ಫ್ರಾಂಚೈಸಿ ಧೋನಿಯ ಕ್ರಮಾಂಕದ ಬಗ್ಗೆ ಏನು ಸ್ಪಷ್ಟನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ