Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮುಂಬೈ ಇಂಡಿಯನ್ಸ್ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಧೋನಿ

IPL 2025 MI vs CSK: ಐಪಿಎಲ್​ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಭಾರಂಭ ಮಾಡಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 155 ರನ್ ಕಲೆಹಾಕಿದರೆ, ಸಿಎಸ್​ಕೆ 19.1 ಓವರ್​ಗಳಲ್ಲಿ ಈ ಗುರಿಯನ್ನು ಬೆನ್ನಟ್ಟಿ ಗೆದ್ದಿದೆ.

VIDEO: ಮುಂಬೈ ಇಂಡಿಯನ್ಸ್ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಧೋನಿ
Ms Dhoni - Deepak Chahar
Follow us
ಝಾಹಿರ್ ಯೂಸುಫ್
|

Updated on:Mar 24, 2025 | 8:34 AM

IPL 2025: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 3ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮುಂಬೈ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ.

ಆರಂಭಿಕ ಆಟಗಾರ ರೋಹಿತ್ ಶರ್ಮಾ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಿಯಾನ್ ರಿಕೆಲ್ಟನ್ (13) ಕೂಡ ಔಟಾದರು. ಆ ಬಳಿಕ ಬಂದ ವಿಲ್ ಜಾಕ್ಸ್ (11), ಸೂರ್ಯಕುಮಾರ್ ಯಾದವ್ (29), ತಿಲಕ್ ವರ್ಮಾ (31) ಎರಡಂಕಿ ಮೊತ್ತಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ರಾಬಿನ್ ಮಿಂಝ್ (3), ನಮನ್ ಧೀರ್ (17), ಮಿಚೆಲ್ ಸ್ಯಾಂಟ್ನರ್ 11 ರನ್​ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್​ ಕಲೆಹಾಕಿತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

156 ರನ್​ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕನಾದ ರಾಹುಲ್ ತ್ರಿಪಾಠಿ 2 ರನ್​ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ರುತುರಾಜ್ ಗಾಯಕ್ವಾಡ್ ಸ್ಪೋಟಕ ಇನಿಂಗ್ಸ್ ಆಡಿದರು.

26 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಚಚ್ಚಿದರು. ಮತ್ತೊಂದೆಡೆ ರಚಿನ್ ರವೀಂದ್ರ ಉತ್ತಮ ಸಾಥ್ ನೀಡಿದರು.

ಆದರೆ ರುತುರಾಜ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಪರಿಣಾಮ 19ನೇ ಓವರ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಬೇಕಾಯಿತು.

ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್​ಗೆ ಆಗಮಿಸುತ್ತಿದ್ದಂತೆ ಇತ್ತ ಮುಂಬೈ ಇಂಡಿಯನ್ಸ್ ಆಟಗಾರ ದೀಪಕ್ ಚಹರ್ ಫ್ರಂಟ್ ಫೀಲ್ಡಿಂಗ್ ನಿಲ್ಲುವ ಮೂಲಕ ಎಂಎಸ್​ಡಿಯ ಕಾಲೆಳೆದಿದ್ದರು. ಇದಾಗ್ಯೂ ಧೋನಿ ರಿಯಾಕ್ಟ್ ಮಾಡದೇ ಸುಮ್ಮನಿದ್ದರು.

ಬ್ಯಾಟ್ ಬಿಸಿ ತೋರಿಸಿದ ಧೋನಿ:

ಕೊನೆಯ ಓವರ್​ನಲ್ಲಿ 4 ರನ್ ಬೇಕಿದ್ದ ವೇಳೆ ರಚಿನ್ ರವೀಂದ್ರ ಭರ್ಜರಿ ಸಿಕ್ಸ್ ಬಾರಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 4 ವಿಕೆಟ್​ಗಳ ಜಯ ತಂದುಕೊಟ್ಟರು. ಆ ಬಳಿಕ ಆಟಗಾರರು ಪರಸ್ಪರ ಕೈಕುಲುಕುವ ಸಮಯದಲ್ಲಿ ಧೋನಿ ಮತ್ತು ಚಹರ್ ಮತ್ತೆ ಎದುರಾದರು.  ತಕ್ಷಣ ಬ್ಯಾಟ್ ಎತ್ತಿಕೊಂಡು ಧೋನಿ ತಮಾಷೆಗೆ ಹೊಡೆದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಧೋನಿ-ಚಹರ್ ನಡುವಣ ಫ್ರೆಂಡ್​ಶಿಪ್​ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಧೋನಿ-ಚಹರ್ ವಿಡಿಯೋ:

ಅಂದಹಾಗೆ ದೀಪಕ್ ಚಹರ್ ಮಹೇಂದ್ರ ಸಿಂಗ್ ಧೋನಿಯ ಶಿಷ್ಯ ಎಂದೇ ಗುರುತಿಸಿಕೊಂಡಿದ್ದ ಆಟಗಾರ. ಕಳೆದ ಸೀಸನ್​ವರೆಗೂ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿರಲಿಲ್ಲ. ಇತ್ತ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 9.25 ಕೋಟಿ ರೂ. ನೀಡಿ ಖರೀದಿಸಿದೆ.

Published On - 8:34 am, Mon, 24 March 25

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್