AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮುಂಬೈ ಇಂಡಿಯನ್ಸ್ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಧೋನಿ

IPL 2025 MI vs CSK: ಐಪಿಎಲ್​ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಭಾರಂಭ ಮಾಡಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 155 ರನ್ ಕಲೆಹಾಕಿದರೆ, ಸಿಎಸ್​ಕೆ 19.1 ಓವರ್​ಗಳಲ್ಲಿ ಈ ಗುರಿಯನ್ನು ಬೆನ್ನಟ್ಟಿ ಗೆದ್ದಿದೆ.

VIDEO: ಮುಂಬೈ ಇಂಡಿಯನ್ಸ್ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಧೋನಿ
Ms Dhoni - Deepak Chahar
ಝಾಹಿರ್ ಯೂಸುಫ್
|

Updated on:Mar 24, 2025 | 8:34 AM

Share

IPL 2025: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 3ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮುಂಬೈ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ.

ಆರಂಭಿಕ ಆಟಗಾರ ರೋಹಿತ್ ಶರ್ಮಾ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಿಯಾನ್ ರಿಕೆಲ್ಟನ್ (13) ಕೂಡ ಔಟಾದರು. ಆ ಬಳಿಕ ಬಂದ ವಿಲ್ ಜಾಕ್ಸ್ (11), ಸೂರ್ಯಕುಮಾರ್ ಯಾದವ್ (29), ತಿಲಕ್ ವರ್ಮಾ (31) ಎರಡಂಕಿ ಮೊತ್ತಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ರಾಬಿನ್ ಮಿಂಝ್ (3), ನಮನ್ ಧೀರ್ (17), ಮಿಚೆಲ್ ಸ್ಯಾಂಟ್ನರ್ 11 ರನ್​ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್​ ಕಲೆಹಾಕಿತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

156 ರನ್​ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕನಾದ ರಾಹುಲ್ ತ್ರಿಪಾಠಿ 2 ರನ್​ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ರುತುರಾಜ್ ಗಾಯಕ್ವಾಡ್ ಸ್ಪೋಟಕ ಇನಿಂಗ್ಸ್ ಆಡಿದರು.

26 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಚಚ್ಚಿದರು. ಮತ್ತೊಂದೆಡೆ ರಚಿನ್ ರವೀಂದ್ರ ಉತ್ತಮ ಸಾಥ್ ನೀಡಿದರು.

ಆದರೆ ರುತುರಾಜ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಪರಿಣಾಮ 19ನೇ ಓವರ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಬೇಕಾಯಿತು.

ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್​ಗೆ ಆಗಮಿಸುತ್ತಿದ್ದಂತೆ ಇತ್ತ ಮುಂಬೈ ಇಂಡಿಯನ್ಸ್ ಆಟಗಾರ ದೀಪಕ್ ಚಹರ್ ಫ್ರಂಟ್ ಫೀಲ್ಡಿಂಗ್ ನಿಲ್ಲುವ ಮೂಲಕ ಎಂಎಸ್​ಡಿಯ ಕಾಲೆಳೆದಿದ್ದರು. ಇದಾಗ್ಯೂ ಧೋನಿ ರಿಯಾಕ್ಟ್ ಮಾಡದೇ ಸುಮ್ಮನಿದ್ದರು.

ಬ್ಯಾಟ್ ಬಿಸಿ ತೋರಿಸಿದ ಧೋನಿ:

ಕೊನೆಯ ಓವರ್​ನಲ್ಲಿ 4 ರನ್ ಬೇಕಿದ್ದ ವೇಳೆ ರಚಿನ್ ರವೀಂದ್ರ ಭರ್ಜರಿ ಸಿಕ್ಸ್ ಬಾರಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 4 ವಿಕೆಟ್​ಗಳ ಜಯ ತಂದುಕೊಟ್ಟರು. ಆ ಬಳಿಕ ಆಟಗಾರರು ಪರಸ್ಪರ ಕೈಕುಲುಕುವ ಸಮಯದಲ್ಲಿ ಧೋನಿ ಮತ್ತು ಚಹರ್ ಮತ್ತೆ ಎದುರಾದರು.  ತಕ್ಷಣ ಬ್ಯಾಟ್ ಎತ್ತಿಕೊಂಡು ಧೋನಿ ತಮಾಷೆಗೆ ಹೊಡೆದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಧೋನಿ-ಚಹರ್ ನಡುವಣ ಫ್ರೆಂಡ್​ಶಿಪ್​ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಧೋನಿ-ಚಹರ್ ವಿಡಿಯೋ:

ಅಂದಹಾಗೆ ದೀಪಕ್ ಚಹರ್ ಮಹೇಂದ್ರ ಸಿಂಗ್ ಧೋನಿಯ ಶಿಷ್ಯ ಎಂದೇ ಗುರುತಿಸಿಕೊಂಡಿದ್ದ ಆಟಗಾರ. ಕಳೆದ ಸೀಸನ್​ವರೆಗೂ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿರಲಿಲ್ಲ. ಇತ್ತ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ದೀಪಕ್ ಚಹರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 9.25 ಕೋಟಿ ರೂ. ನೀಡಿ ಖರೀದಿಸಿದೆ.

Published On - 8:34 am, Mon, 24 March 25

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌