AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿ ನನ್ನ ಕ್ರಿಕೆಟಿಂಗ್ ಫಾದರ್: ಮಥೀಶ ಪತಿರಾಣ

IPL 2025 Matheesha Pathirana: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ಪರ 22 ಪಂದ್ಯಗಳನ್ನಾಡಿರುವ ಮಥೀಶ ಪತಿರಾಣ ಈವರೆಗೆ 499 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 38 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇನ್ನು ಈ ಬಾರಿ ಎರಡು ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಪತಿರಾಣ 48 ಎಸೆತಗಳಲ್ಲಿ 64 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.

MS Dhoni: ಧೋನಿ ನನ್ನ ಕ್ರಿಕೆಟಿಂಗ್ ಫಾದರ್: ಮಥೀಶ ಪತಿರಾಣ
Matheesha Pathirana - Ms Dhoni
Follow us
ಝಾಹಿರ್ ಯೂಸುಫ್
|

Updated on: Apr 05, 2025 | 10:55 AM

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ವೇಗಿ ಮಥೀಶ ಪತಿರಾಣ ಮಹೇಂದ್ರ ಸಿಂಗ್ ಧೋನಿ (MS Dhoni) ಅವರನ್ನು ಹಾಡಿ ಹೊಗಳಿದ್ದಾರೆ. ಅದು ಸಹ ಅವರು ನನ್ನ ಕ್ರಿಕೆಟಿಂಗ್​ ಫಾದರ್ ಎನ್ನುವ ಮೂಲಕ ಎಂಬುದು ವಿಶೇಷ. ಚೆನ್ನೈ ಸೂಪರ್ ಕಿಂಗ್ಸ್​ ಸೋಷಿಯಲ್ ಮೀಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಥೀಶ ಪತಿರಾಣ, ಮಹೇಂದ್ರ ಸಿಂಗ್ ಧೋನಿ ನನಗೆ ತಂದೆಯಂತೆ. ಅವರು ನನ್ನ ಕ್ರಿಕೆಟಿಂಗ್ ಫಾದರ್. ಅವರ ಸಲಹೆಗಳಿಂದಾಗಿ ನಾನು ಇಂದು ಈ ಮಟ್ಟವನ್ನು ತಲುಪಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಧೋನಿಯನ್ನು ಮೊದಲ ಬಾರಿಗೆ ಭೇಟಿಯಾದದ್ದನ್ನು ನೆನಪಿಸಿಕೊಂಡ ಪತಿರಾಣ, ಅವತ್ತು ಅವರು “ಹಾಯ್ ಮಾಲಿ, ಹೇಗಿದ್ದೀರಿ?” ಎಂದು ಕೇಳಿದರು. ನನ್ನನ್ನು ಧೋನಿ ಸ್ವಾಗತಿಸಿದಾಗ ತನಗೆ ಎಷ್ಟು ಸಂತೋಷವಾಯಿತು ಎಂಬುದನ್ನು ವರ್ಣಿಸಲು ಅಸಾಧ್ಯ.

ನನ್ನ ಬೌಲಿಂಗ್ ಶೈಲಿಯು ಲಸಿತ್ ಮಾಲಿಂಗ ಅವರಂತೆಯೇ ಇದ್ದುದರಿಂದ ಅವರು ನನ್ನನ್ನು “ಮಾಲಿ” ಎಂದು ಕರೆದಿದ್ದರು. ಇದುವೇ ಈಗ ನನ್ನ ನಿಕ್ ನೇಮ್ ಆಗಿ ಮಾರ್ಪಟ್ಟಿದೆ ಎಂದರು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇನ್ನು ಧೋನಿ ನನಗೆ ತಂದೆ ಇದ್ದಂತೆ… ಏಕೆಂದರೆ ನಾನು ಚೆನ್ನೈ ಸೂಪರ್ ಕಿಂಗ್ಸ್​ನಲ್ಲಿರುವಾಗ ಅವರು ನನಗೆ ನೀಡುತ್ತಿರುವ ಬೆಂಬಲ, ಮಾರ್ಗದರ್ಶನ ನಿಜಕ್ಕೂ ಅದ್ಭುತ. ನನ್ನ ತಂದೆ ನನ್ನ ಮನೆಯಲ್ಲಿ ಏನು ಮಾಡುತ್ತಾರೋ, ಅದನ್ನೇ ಧೋನಿ ನನಗೆ ಇಲ್ಲಿ ಸೂಚಿಸುತ್ತಾರೆ. ಹೀಗಾಗಿಯೇ ನಾನು ಧೋನಿಯನ್ನು ನನ್ನ ಕ್ರಿಕೆಟ್ ತಂದೆ ಎಂದು ಪರಿಗಣಿಸುತ್ತೇನೆ ಎಂದು ಮಥೀಶ ಪತಿರಾಣ ಹೇಳಿದ್ದಾರೆ.

ಹಾಗೆಯೇ ಧೋನಿ ಬಗ್ಗೆ ಮಾತನಾಡಿದ ಮಥೀಶ ಪತಿರಾಣ ಪೋಷಕರು, ಧೋನಿಯನ್ನು ವರ್ಣಿಸಲು ಪದಗಳೇ ಸಾಲದು. ಅವರು ನಿಜವಾಗಿಯೂ ದೇವರಂತೆ. ಮಥೀಶಾ ತನ್ನ ತಂದೆಯನ್ನು ಗೌರವಿಸುವ ರೀತಿಯಲ್ಲಿಯೇ ಧೋನಿಯನ್ನು ಗೌರವಿಸುತ್ತಾರೆ ಎಂದು ಪತಿರಾಣ ಅವರ ತಾಯಿ ಹೇಳಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

CSK ಮುಂದಿನ ಪಂದ್ಯ ಯಾವಾಗ?

ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶನಿವಾರ (ಏ.5) ಸಂಜೆ ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸಿಎಸ್​ಕೆ ತಂಡವು ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಅತ್ತ ಸತತ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಮ್ಯಾಚ್​ನಲ್ಲೂ ಭರ್ಜರಿ ಜಯ ಸಾಧಿಸುವ ವಿಶ್ವಾಸದಲ್ಲಿದೆ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್