AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

IPL 2025 CSK: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಸಿಎಸ್​ಕೆ ಪಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಿದೆ. ಅದರಲ್ಲೂ ಚೆಪಾಕ್ ಮೈದಾನದಲ್ಲಿ ಸಿಎಸ್​ಕೆ ತಂಡವು 17 ವರ್ಷಗಳ ಬಳಿಕ ಆರ್​ಸಿಬಿ ವಿರುದ್ಧ ಮುಗ್ಗರಿಸಿದೆ.

MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!
Ms Dhoni
ಝಾಹಿರ್ ಯೂಸುಫ್
|

Updated on: Apr 02, 2025 | 11:11 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೊದಲ ಮೂರು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡು ಮ್ಯಾಚ್​ಗಳಲ್ಲಿ ಮುಗ್ಗರಿಸಿದೆ. ಸಿಎಸ್​ಕೆ ಸೋತಿರುವ ಈ ಎರಡು ಪಂದ್ಯಗಳಲ್ಲೂ ಮಹೇಂದ್ರ ಸಿಂಗ್ ಧೋನಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಮೂಲಕ ಧೋನಿ ಅಚ್ಚರಿ ಮೂಡಿಸಿದ್ದರು. ಧೋನಿಯ ಈ ನಿರ್ಧಾರದ ಬೆನ್ನಲ್ಲೇ ಗ್ರೇಟ್ ಫಿನಿಶರ್​ ಫಿನಿಶ್ ಆದ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಈ ಕೆಳಗಿನ ಅಂಕಿ ಅಂಶಗಳೇ ಉತ್ತರ.

  • 2023 ರಿಂದ ಚೆನ್ನೈ ಸೂಪರ್ ಕಿಂಗ್ಸ್ ಚೇಸ್ ಮಾಡಿ ಗೆದ್ದಿರುವ ಪಂದ್ಯಗಳಲ್ಲಿ ಮಹೇಂದ್ರ ಸಿಂಗ್ ಧೋನಿಯ ಕೊಡುಗೆ ಶೂನ್ಯ.
  • 2023 ರಿಂದ ಧೋನಿ ಬ್ಯಾಟ್ ಬೀಸಿದಾಗ ಸಿಎಸ್​ಕೆ ತಂಡವು ಮೂರು ಪಂದ್ಯಗಳನ್ನು ಚೇಸ್ ಮಾಡಿ ಗೆದ್ದುಕೊಂಡಿದೆ. ಈ ವೇಳೆ ಅವರು ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 3 ರನ್ ಮಾತ್ರ.
  • 2023 ರಿಂದ ಚೆನ್ನೈ ಸೂಪರ್ ಕಿಂಗ್ಸ್ ಚೇಸಿಂಗ್ ವೇಳೆ ಗೆದ್ದಂತಹ 3 ಪಂದ್ಯಗಳಲ್ಲಿ 9 ಎಸೆತಗಳನ್ನು ಎದುರಿಸಿರುವ ಧೋನಿ ಒಂದೇ ಒಂದು ಫೋರ್ ಬಾರಿಸಿಲ್ಲ. ಸಿಕ್ಸ್ ಅಂತು ದೂರದ ಮಾತು.
  • 2023 ರಿಂದ ಸಿಎಸ್​ಕೆ ತಂಡವು ಚೇಸಿಂಗ್ ವೇಳೆ ಸೋತಿರುವ ಪಂದ್ಯಗಳಲ್ಲಿ ಮಾತ್ರ ಧೋನಿ ಅಬ್ಬರಿಸಿದ್ದಾರೆ ಎಂದರೆ ನಂಬಲೇಬೇಕು.
  • 2023 ರಿಂದ ಸಿಎಸ್​ಕೆ ತಂಡವು ಚೇಸಿಂಗ್ ವೇಳೆ 6 ಪಂದ್ಯಗಳಲ್ಲಿ ಸೋತಿದೆ. ಈ ವೇಳೆ ಧೋನಿ 6 ಇನಿಂಗ್ಸ್​ಗಳಿಂದ 166 ರನ್​ ಕಲೆಹಾಕಿದ್ದಾರೆ.
  • ಅಂದರೆ ಸಿಎಸ್​ಕೆ ತಂಡವು ಚೇಸಿಂಗ್ ವೇಳೆ ಸೋತಿರುವ ಪಂದ್ಯಗಳಲ್ಲಿ ಮಾತ್ರ 13 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಮಹೇಂದ್ರ ಸಿಂಗ್ ಧೋನಿ ಅಬ್ಬರಿಸಿದ್ದಾರೆ. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಧೋನಿಗೆ ಸಾಧ್ಯವಾಗಿಲ್ಲ ಎಂಬುದೇ ಸತ್ಯ.

ಹಾಗಿದ್ರೆ ಬೆಸ್ಟ್ ಫಿನಿಶರ್ ಯಾರು?

ಮಹೇಂದ್ರ ಸಿಂಗ್ ಧೋನಿಯನ್ನು ಸಿಎಸ್​ಕೆ ಗ್ರೇಟ್ ಫಿನಿಶರ್ ಎಂದು ಬಿಂಬಿಸಿದರೂ ಅಸಲಿ ಮ್ಯಾಚ್ ವಿನ್ನರ್ ಸುರೇಶ್ ರೈನಾ ಎಂಬುದೇ ತೆರೆಮರೆಯ ಸತ್ಯ. ಏಕೆಂದರೆ ಸಿಎಸ್​ಕೆ ಪರ ಚೇಸಿಂಗ್ ವೇಳೆ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರೈನಾ ಹೆಸರಿನಲ್ಲಿದೆ.

ಚೇಸಿಂಗ್​ನಲ್ಲಿ 54 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುರೇಶ್ ರೈನಾ 1375 ರನ್ ಗಳಿಸಿ ಮಿಂಚಿದ್ದಾರೆ. ಈ ವೇಳೆ 9 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಸುರೇಶ್ ರೈನಾ ಚೇಸಿಂಗ್ ವೇಳೆ ಆಡಿದ ಬಹುತೇಕ ಪಂದ್ಯಗಳಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಅತ್ತ ಮಹೇಂದ್ರ ಸಿಂಗ್ ಧೋನಿ ಚೇಸಿಂಗ್ ವೇಳೆ 68 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದು, ಈ ವೇಳೆ ಒಟ್ಟು 1033 ರನ್ ಗಳಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಧೋನಿ ಆಡಿದ ಪಂದ್ಯಗಳಲ್ಲಿ ಸಿಎಸ್​ಕೆ ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು.

ಏಕೆಂದರೆ 2022 ರಿಂದ ಸಿಎಸ್​ಕೆ ತಂಡವು ಒಮ್ಮೆಯೂ 175 ಕ್ಕಿಂತ ಹೆಚ್ಚಿನ ಸ್ಕೋರ್​ ಚೇಸ್ ಮಾಡಿಲ್ಲ. ಅಲ್ಲದೆ 175+ ರನ್ ಬೆನ್ನತ್ತಿದಾಗ 9 ಬಾರಿ ಸೋಲನುಭವಿಸಿದೆ.

ಸಿಎಸ್​ಕೆ ತಂಡದ ಈ ಸೋಲುಗಳ ನಡುವೆ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಸುರೇಶ್ ರೈನಾ ಅವರ ಐಪಿಎಲ್ ಕೆರಿಯರ್ ಕೊನೆಗೊಂಡಿದ್ದು 2021 ರಲ್ಲಿ ಎಂಬುದು.

ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಇದಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಮ್ಮೆಯೂ 175 ಕ್ಕಿಂತ ಹೆಚ್ಚಿನ ರನ್ ಚೇಸ್ ಮಾಡಿ ಗೆದ್ದಿಲ್ಲ ಎಂಬುದೇ ನಗ್ನ ಸತ್ಯ. ಈ ಅಂಕಿ ಅಂಶಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗ್ರೇಟ್ ಫಿನಿಶರ್ ಯಾರು ಎಂಬುದಕ್ಕೆ ಸ್ಪಷ್ಟ ಉತ್ತರವಂತು ಸಿಕ್ಕಿರುತ್ತದೆ.

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ